Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:10 - ಪರಿಶುದ್ದ ಬೈಬಲ್‌

10 ನಂತರ ನೆಬೂಜರದಾನನೊಂದಿಗಿದ್ದ ಬಾಬಿಲೋನ್ ಸೈನ್ಯವು ಜೆರುಸಲೇಮಿನ ಸುತ್ತಲೂ ಇದ್ದ ಗೋಡೆಯನ್ನು ಕೆಡವಿಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇವಿುನ ಸುತ್ತುಗೋಡೆಗಳನ್ನು ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:10
9 ತಿಳಿವುಗಳ ಹೋಲಿಕೆ  

ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.


ಬಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಬೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನ್ನು ಕೆಡವಿದರು.


“ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.


ಇಸ್ರೇಲಿನ ರಾಜನಾದ ಯೋವಾಷನು ಬೇತ್ಷೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರುಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು.


ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.


ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ. ಯಾವ ಶತ್ರುಗಳೂ ನುಗ್ಗಿಬರಲು ಪ್ರಯತ್ನಿಸುತ್ತಿಲ್ಲ. ನಾವು ಯುದ್ಧಕ್ಕೆ ಹೋಗುವುದೂ ಇಲ್ಲ; ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ.


ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೇ ದಿವಸದಲ್ಲಿ ಜೆರುಸಲೇಮಿನಿಂದ ಒಬ್ಬನು ನನ್ನ ಬಳಿಗೆ ಬಂದನು. ಅವನು ರಣರಂಗದಿಂದ ತಪ್ಪಿಸಿಕೊಂಡು ಬಂದಾತನು. ಅವನು, “ನಗರವು ಪರಾಧೀನವಾಯಿತು” ಎಂದು ಹೇಳಿದನು.


ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು