Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:24 - ಪರಿಶುದ್ದ ಬೈಬಲ್‌

24 ನಂತರ ಗೆದಲ್ಯನು ಈ ಸೇನಾಧಿಪತಿಗಳಿಗೆ ಮತ್ತು ಅವರ ಜನರಿಗೆ, “ಬಾಬಿಲೋನ್ ಅಧಿಕಾರಿಗಳಿಗೆ ನೀವು ಹೆದರಬೇಡಿ. ನೀವು ದೇಶದಲ್ಲಿ ವಾಸಿಸುತ್ತ ಬಾಬಿಲೋನ್ ರಾಜನ ಸೇವೆಯನ್ನು ಮಾಡಿ. ಆಗ ನಿಮಗೇನೂ ತೊಂದರೆಯಾಗುವುದಿಲ್ಲ” ಎಂದು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಗೆದಲ್ಯನು ಇವರಿಗೂ ಇವರ ಜನರಿಗೂ, “ಬಾಬಿಲೋನಿಯಾದ ಸೈನ್ಯದವರಿಗೆ ಹೆದರಬೇಡಿ; ಬಾಬಿಲೋನಿನ ಅರಸನಿಗೆ ಅಧೀನರಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಶುಭವಾಗುವುದು,” ಎಂದು ಆಣೆಯಿಟ್ಟು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಗೆದಲ್ಯನು ಇವರಿಗೂ ಇವರ ಜನರಿಗೂ - ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಒಳಗಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು ಎಂದು ಆಣೆಯಿಟ್ಟು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ಬಾಬಿಲೋನಿಯದ ಸೈನಿಕರಿಗೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:24
7 ತಿಳಿವುಗಳ ಹೋಲಿಕೆ  

ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.


ನಂತರ ರಾಜನು ಶಿಮ್ಮಿಗೆ, “ನಿನ್ನನ್ನು ಕೊಲ್ಲುವುದಿಲ್ಲ” ಎಂದು ವಾಗ್ದಾನ ಮಾಡಿದನು.


ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.


ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಛದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಈ ಸೇನಾಧಿಪತಿಗಳು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯ, ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯ.


ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು