Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:29 - ಪರಿಶುದ್ದ ಬೈಬಲ್‌

29 ಎವೀಲ್ಮೆರೋದಕನು ಯೆಹೋಯಾಖೀನನ ಸೆರೆವಾಸದ ಬಟ್ಟೆಗಳನ್ನು ತೆಗೆಸಿ ಹೊಸ ಬಟ್ಟೆಗಳನ್ನು ತೊಡಿಸಿದನು. ಯೆಹೋಯಾಖೀನನು ಬದುಕಿರುವ ತನಕ ತನ್ನ ಪಂಕ್ತಿಯಲ್ಲಿ ಊಟಮಾಡಲು ಎವೀಲ್ಮೆರೋದಕನು ಅವಕಾಶ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ, ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:29
12 ತಿಳಿವುಗಳ ಹೋಲಿಕೆ  

ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.


“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.


ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.


ರಾಜಸನ್ನಿಧಿಯಿಂದ ಮೊರ್ದೆಕೈ ಹೊರಟಾಗ, ಅರಸನು ಕೊಟ್ಟ ವಿಶೇಷ ವಸ್ತ್ರಗಳನ್ನು ಮೊರ್ದೆಕೈಯು ಧರಿಸಿದ್ದನು. ಅದು ನೀಲಿ ಮತ್ತು ಬಿಳಿ ಬಣ್ಣದಾಗಿತ್ತು. ತಲೆಗೆ ಬಂಗಾರದ ಕಿರೀಟವನ್ನು ತೊಟ್ಟಿದ್ದನು. ಅಲ್ಲದೆ ನೇರಳೇ ಬಣ್ಣದ ವಸ್ತ್ರವೂ ಕೂಡಾ ಅವನಲ್ಲಿದ್ದವು. ರಾಜಧಾನಿಯಾದ ಶೂಷನ್ ನಗರದಲ್ಲಿ ವಿಶೇಷ ಸಮಾರಂಭವಿತ್ತು. ಜನರು ಸಂತೋಷದಿಂದ ನಲಿದಾಡಿದರು.


ಎಸ್ತೇರಳ ಸೇವಕಿಯರು ಮತ್ತು ಕಂಚುಕಿಯರು ಮೊರ್ದೆಕೈ ವಿಚಾರವಾಗಿ ಆಕೆಗೆ ತಿಳಿಸಿದರು. ಇದನ್ನು ಕೇಳಿ ಎಸ್ತೇರ್ ರಾಣಿಗೆ ತುಂಬಾ ಗಲಿಬಿಲಿಯೂ ದುಃಖವೂ ಆಯಿತು. ಆಕೆ ಅವನಿಗೋಸ್ಕರ ಬಟ್ಟೆಗಳನ್ನು ಕಳುಹಿಸಿ ಶೋಕದ ಬಟ್ಟೆಯನ್ನು ತೆಗೆದುಹಾಕಲು ಹೇಳಿಸಿದಳು. ಆದರೆ ಅವನು ಅವಳ ಬಟ್ಟೆಗಳನ್ನು ಸ್ವೀಕರಿಸಲಿಲ್ಲ.


ಯೆಹೂದದ ರಾಜನಾದ ಯೆಹೋಯಾಖೀನನು ಬಾಬಿಲೋನ್ ರಾಜನನ್ನು ಭೇಟಿಮಾಡಲು ಹೋದನು. ಯೆಹೋಯಾಖೀನನ ತಾಯಿ, ಅವನ ಅಧಿಕಾರಿಗಳು, ನಾಯಕರು ಮತ್ತು ಸಿಬ್ಬಂದಿಯೆಲ್ಲವೂ ಅವನೊಂದಿಗೆ ಹೋದರು. ಆಗ ಬಾಬಿಲೋನ್ ರಾಜ ಯೆಹೋಯಾಖೀನನನ್ನು ಸೆರೆಹಿಡಿದನು. ಇದು ಸಂಭವಿಸಿದ್ದು ನೆಬೂಕದ್ನೆಚ್ಚರನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ.


ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು.


ಯೆಹೋಯಾಖೀನನು ತನ್ನ ಸೆರೆಮನೆಯ ಬಟ್ಟೆಗಳನ್ನು ತೆಗೆದುಹಾಕಿದನು. ಅವನು ಬದುಕಿರುವವರೆಗೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.


“ಗಿಲ್ಯಾದಿನವನಾದ ಬರ್ಜಿಲ್ಲ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ಪಂಕ್ತಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ಷಾಲೋಮನಿಂದ ಓಡಿಹೋದಾಗ ಅವರು ನನಗೆ ಸಹಾಯ ಮಾಡಿದರು.


ನಾನು ನಿನ್ನನ್ನೂ ನಿನ್ನ ತಾಯಿಯನ್ನೂ ನಿಮ್ಮಿಬ್ಬರ ಜನ್ಮಸ್ಥಳವಲ್ಲದ ಬೇರೆ ದೇಶದಲ್ಲಿ ಎಸೆದುಬಿಡುತ್ತೇನೆ. ನೀನು ಮತ್ತು ನಿನ್ನ ತಾಯಿ ಆ ದೇಶದಲ್ಲಿ ಸತ್ತುಹೋಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು