Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:3 - ಪರಿಶುದ್ದ ಬೈಬಲ್‌

3 ನಾಲ್ಕನೆಯ ತಿಂಗಳ ಒಂಭತ್ತನೆಯ ದಿನದಂದು ನಗರದಲ್ಲಿ ಭೀಕರ ಬರಗಾಲವಿತ್ತು. ಅಲ್ಲಿನ ಸಾಮಾನ್ಯರಿಗೆ ಆಹಾರವೇನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರಸಿಕ್ಕದೆ ಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:3
18 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ಆ ವರ್ಷದ ನಾಲ್ಕನೆ ತಿಂಗಳಿನ ಒಂಭತ್ತನೆ ದಿನದವರೆಗೆ ಆ ನಗರದಲ್ಲಿ ಹಸಿವಿನ ಹಾವಳಿ ತುಂಬ ಹೆಚ್ಚಾಗಿತ್ತು. ಆ ನಗರದಲ್ಲಿ ಜನರಿಗೆ ತಿನ್ನಲು ಆಹಾರವೇ ಇರಲಿಲ್ಲ.


“ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರು ಖಡ್ಗದಿಂದಾಗಲಿ ಕ್ಷಾಮದಿಂದಾಗಲಿ ಭಯಂಕರವಾದ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಆದರೆ ಬಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಬ್ಬರು ಬದುಕುವರು. ಅವರು ಜೀವಂತ ಉಳಿಯುವರು.’


ನಿಮಗೆ ರೊಟ್ಟಿ ದಯಪಾಲಿಸುವುದನ್ನು ನಾನು ನಿಲ್ಲಿಸಿದಾಗ, ಹತ್ತು ಮಂದಿ ಸ್ತ್ರೀಯರು ತಮ್ಮಲ್ಲಿರುವ ಎಲ್ಲಾ ರೊಟ್ಟಿಗಳನ್ನು ಒಂದೇ ಒಲೆಯಲ್ಲಿ ಸುಡುವರು. ಅವರು ಪ್ರತಿ ರೊಟ್ಟಿಯ ತುಂಡನ್ನು ತೂಕ ಮಾಡಿ ಹಂಚಿಕೊಳ್ಳುವರು. ನೀವು ತಿಂದರೂ ಹಸಿದವರಾಗಿಯೇ ಇರುವಿರಿ.


ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”


ಜೆರುಸಲೇಮಿನ ಜನರು ಹಸಿವೆ ತಾಳಲಾರದೆ ತಮ್ಮ ಸ್ವಂತ ಮಕ್ಕಳನ್ನು ಕಬಳಿಸುವರು ಮತ್ತು ಮಕ್ಕಳು ತಮ್ಮ ತಂದೆತಾಯಿಗಳನ್ನೇ ತಿನ್ನುವರು. ಬೇರೆಬೇರೆ ರೀತಿಯಲ್ಲಿ ನಾನು ನಿಮ್ಮನ್ನು ಶಿಕ್ಷಿಸುವೆನು. ಜೀವದಿಂದುಳಿದವರನ್ನು ನಾನು ಗಾಳಿಗೆ ತೂರಿಬಿಡುವೆನು.”


ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆಯಲಾಯಿತು.


ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.


ಇದಾದನಂತರ, ಅರಾಮ್ಯರ ರಾಜನಾದ ಬೆನ್ಹದದನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿಕೊಂಡು, ಸಮಾರ್ಯವನ್ನು ಸುತ್ತುವರಿದು ಆಕ್ರಮಣಮಾಡಲು ಹೋದನು.


ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು.


ನೆಬೂಕದ್ನೆಚ್ಚರನ ಸೇನೆಯು ಜೆರುಸಲೇಮಿನ ಸುತ್ತಲೂ, ಚಿದ್ಕೀಯನು ಯೆಹೂದದ ರಾಜನಾದ ಹನ್ನೊಂದನೆಯ ವರ್ಷದವರೆಗೆ ನೆಲೆಸಿತು.


ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವನು.


ಶತ್ರುವು ನಗರದ ಸುತ್ತಲೂ ತನ್ನ ಸೈನ್ಯವನ್ನು ತರುವನು. ಜನರು ಆಹಾರವನ್ನು ಶೇಖರಿಸಲು ಹೊರಗೆ ಹೋಗದಂತೆ ಆ ಸೈನ್ಯವು ತಡೆಯುವದು. ನಗರದಲ್ಲಿದ್ದ ಜನರು ಉಪವಾಸ ಬೀಳುವರು. ಅವರು ಹಸಿವು ತಾಳಲಾರದೆ ತಮ್ಮ ಮಕ್ಕಳನ್ನೇ ತಿನ್ನುವರು. ಆಮೇಲೆ ಅವರು ಒಬ್ಬರನ್ನೊಬ್ಬರು ತಿನ್ನಲು ಪ್ರಾರಂಭಿಸುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು