Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:12 - ಪರಿಶುದ್ದ ಬೈಬಲ್‌

12 ಯೆಹೋಷಾಫಾಟನು, “ಯೆಹೋವನ ನುಡಿಗಳು ಎಲೀಷನಲ್ಲಿವೆ!” ಎಂದು ಹೇಳಿದನು. ಇಸ್ರೇಲಿನ ರಾಜನಾದ ಯೋರಾಮನು, ಯೆಹೋಷಾಫಾಟನು ಮತ್ತು ಎದೋಮಿನ ರಾಜನು ಎಲೀಷನನ್ನು ನೋಡಲು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೆಹೋಷಾಫಾಟನು, “ಅವನು ಹೇಗೂ ಸರ್ವೇಶ್ವರನ ಉತ್ತರವನ್ನು ತಿಳಿಸುವನು,” ಎಂದದ್ದರಿಂದ ಇಸ್ರಯೇಲ್ ಹಾಗು ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋಷಾಫಾಟನು - ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು ಅಂದದರಿಂದ ಇಸ್ರಾಯೇಲ್ ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋಷಾಫಾಟನು, “ಅವನ ಬಳಿಯಲ್ಲಿ ಯೆಹೋವ ದೇವರ ವಾಕ್ಯ ಇದೆ,” ಎಂದನು. ಇಸ್ರಾಯೇಲಿನ ಅರಸನೂ, ಯೆಹೋಷಾಫಾಟನೂ, ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:12
12 ತಿಳಿವುಗಳ ಹೋಲಿಕೆ  

ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.


ನಂತರ ಎಲೀಷನು ನೆಲದಿಂದ ನೀರು ಹರಿಯುತ್ತಿದ್ದ ಸ್ಥಳಕ್ಕೆ ಹೋದನು. ಎಲೀಷನು ಉಪ್ಪನ್ನು ನೀರಿನಲ್ಲಿ ಎಸೆದು, “‘ನಾನು ಈ ನೀರನ್ನು ಶುಚಿಗೊಳಿಸಿದ್ದೇನೆ! ಇಲ್ಲಿಂದಾಚೆಗೆ ಈ ನೀರು ಯಾರಿಗೂ ಸಾವನ್ನು ಮತ್ತು ಬಂಜೆತನವನ್ನು ಉಂಟುಮಾಡುವುದಿಲ್ಲ ಮತ್ತು ಈ ಭೂಮಿಯಲ್ಲಿ ಬೆಳೆಗಳು ಬೆಳೆಯುತ್ತವೆ’ ಎಂದು ಯೆಹೋವನು ಹೇಳುತ್ತಾನೆ” ಎಂದನು.


ಆದರೆ ಯೆಹೋಷಾಫಾಟನು, “ಯೆಹೋವನ ಪ್ರವಾದಿಗಳಲ್ಲಿ ನಿಜವಾಗಿಯೂ ಯಾರಾದರೊಬ್ಬರು ಇಲ್ಲಿರಬೇಕು. ನಾವೇನು ಮಾಡಬೇಕೆಂದು ಯೆಹೋವನು ಹೇಳುತ್ತಾನೆ. ಅದಕ್ಕಾಗಿ ನಾವು ಆ ಪ್ರವಾದಿಯನ್ನು ಕೇಳೋಣ” ಎಂದು ಹೇಳಿದನು. ಇಸ್ರೇಲಿನ ರಾಜನ ಸೇವಕರಲ್ಲಿ ಒಬ್ಬನು, “ಶಾಫಾಟನ ಮಗನಾದ ಎಲೀಷನು ಇಲ್ಲಿಯೇ ಇದ್ದಾನೆ. ಎಲೀಷನು ಎಲೀಯನ ಸೇವಕನಾಗಿದ್ದನು” ಎಂದು ಹೇಳಿದನು.


ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.


ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು