Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:27 - ಪರಿಶುದ್ದ ಬೈಬಲ್‌

27 ಆಗ ಮೋವಾಬಿನ ರಾಜನು, ತನ್ನ ನಂತರ ರಾಜನಾಗುವ ಹಿರಿಯ ಮಗನನ್ನು ಕರೆದೊಯ್ದನು. ಮೋವಾಬಿನ ರಾಜನು ನಗರವನ್ನು ಸುತ್ತುವರಿದಿರುವ ಗೋಡೆಯ ಮೇಲೆ ತನ್ನ ಮಗನನ್ನು ವಧಿಸಿ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಈ ಕಾರ್ಯವು ಇಸ್ರೇಲಿನ ಜನರನ್ನು ತಳಮಳಗೊಳಿಸಿತು. ಇಸ್ರೇಲಿನ ಜನರು ಮೋವಾಬಿನ ರಾಜನನ್ನು ಬಿಟ್ಟು ತಮ್ಮ ಸ್ವಂತ ದೇಶಕ್ಕೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲ ಮಗನನ್ನು ಹಿಡಿದು, ವಧಿಸಿ, ಗೋಡೆಯ ಮೇಲೆ ದಹನಬಲಿ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಯೇಲರ ಮೇಲೆ ಕೋಪೋದ್ರೇಕವುಂಟಾಯಿತು. ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲ್ಯರ ಮೇಲೆ ಕೋಪೋದ್ರೇಕವುಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಮೋವಾಬಿನ ಅರಸನು ತನಗೆ ಬದಲಾಗಿ ಆಳುವುದಕ್ಕಿರುವ ತನ್ನ ಹಿರಿಯ ಮಗನನ್ನು ತೆಗೆದುಕೊಂಡು, ಅವನನ್ನು ಗೋಡೆಯ ಮೇಲೆ ದಹನಬಲಿಯಾಗಿ ಅರ್ಪಿಸಿದನು. ಮೋವಾಬ್ಯರು ಇಸ್ರಾಯೇಲರಿಗೆ ವಿರೋಧವಾಗಿ ರೋಷವುಳ್ಳವರಾಗಿ ಅವರನ್ನು ಬಿಟ್ಟು, ತಮ್ಮ ದೇಶಕ್ಕೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:27
14 ತಿಳಿವುಗಳ ಹೋಲಿಕೆ  

ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?


ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.


ನಾನು ಜಯಶಾಲಿಯಾಗಿ ಬರುವಾಗ ನನ್ನ ಮನೆಯಿಂದ ಹೊರ ಬರುವ ಮೊದಲನೆಯ ಜೀವಿಯನ್ನು ನಿನಗೆ ಕೊಡುತ್ತೇನೆ. ನಾನು ಅದನ್ನು ಯೆಹೋವನ ಸರ್ವಾಂಗಹೋಮಕ್ಕೆ ಆಹುತಿಯಾಗಿ ಕೊಡುವೆನು” ಎಂದು ಹರಕೆ ಮಾಡಿಕೊಂಡನು.


ಯೆಹೋವನು ಹೇಳುವುದೇನೆಂದರೆ, “ಮೋವಾಬ್ಯರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಯರ ಅರಸನ ಎಲುಬುಗಳನ್ನು ಮೋವಾಬ್ಯರು ಸುಟ್ಟು ಸುಣ್ಣವಾಗಿ ಮಾಡಿದರು.


ದೇವರು ಹೇಳಿದ್ದೇನೆಂದರೆ, “ನನ್ನ ಮಕ್ಕಳಾಗಿದ್ದ ನಿನ್ನ ಪುತ್ರಪುತ್ರಿಯರನ್ನು ನೀನು ತೆಗೆದುಕೊಂಡು ಅವರನ್ನು ಆಹಾರವನ್ನಾಗಿ ವಿಗ್ರಹಗಳಿಗೆ ಯಜ್ಞ ಅರ್ಪಿಸಿದೆ. ನಿನ್ನ ಸೂಳೆತನವು ಸಾಕಾಗಿರಲಿಲ್ಲವೇ?


ಎರಡು ತಿಂಗಳು ಗತಿಸಿದ ಮೇಲೆ ಯೆಫ್ತಾಹನ ಮಗಳು ತನ್ನ ತಂದೆಯಲ್ಲಿಗೆ ಬಂದಳು. ಯೆಫ್ತಾಹನು ದೇವರಿಗೆ ಹರಕೆ ಹೊತ್ತಂತೆ ಮಾಡಿದನು. ಯೆಫ್ತಾಹನ ಮಗಳು ಎಂದೂ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದಲಿಲ್ಲ.


ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು.


ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.


ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”


ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ. ‘ಆ ಮಹಾಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ಈ ದಿನ ಆ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ’” ಎಂದು ಹೇಳಿದನು.


ನಂತರ ರಾಜನು ಸಮಾರ್ಯದಲ್ಲಿದ್ದ ತನ್ನ ಅರಮನೆಗೆ ಹಿಂದಿರುಗಿದನು. ಅವನು ಬೇಸರಗೊಂಡಿದ್ದನು ಮತ್ತು ಕೋಪಗೊಂಡಿದ್ದನು.


ಆ ಯುದ್ಧವು ತನ್ನ ಶಕ್ತಿಯನ್ನು ಮೀರಿ ಹೋಯಿತೆಂದು ಮೋವಾಬಿನ ರಾಜನು ಗ್ರಹಿಸಿಕೊಂಡನು. ಆದ್ದರಿಂದ ಅವನು ಎದೋಮಿನ ರಾಜನನ್ನು ಕೊಂದುಹಾಕಲು ಖಡ್ಗಗಳನ್ನು ಹಿಡಿದ ತನ್ನ ಏಳುನೂರು ಜನರೊಂದಿಗೆ ನುಗ್ಗಿಹೋಗಲು ಪ್ರಯತ್ನಿಸಿದನು. ಆದರೆ ಅವರು ಎದೋಮಿನ ರಾಜನ ಬಳಿಗೆ ನುಗ್ಗಿ ಹೋಗಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು