Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:7 - ಪರಿಶುದ್ದ ಬೈಬಲ್‌

7 ಯೋರಾಮನು ಯೆಹೂದದ ರಾಜನಾದ ಯೆಹೋಷಾಫಾಟನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಆಳ್ವಿಕೆಯಿಂದ ಮೋವಾಬಿನ ರಾಜನು ಬೇರ್ಪಟ್ಟಿದ್ದಾನೆ. ಮೋವಾಬಿನ ವಿರುದ್ಧ ಹೋರಾಡಲು ನನ್ನ ಜೊತೆ ಬರುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಿನ್ನ ಜೊತೆ ನಾನೂ ಬರುತ್ತೇನೆ. ನಾನೂ ನೀನೂ ಒಂದೇ. ನನ್ನ ಜನರೂ ನಿನ್ನ ಜನರೂ ಒಂದೇ. ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರ, “ಮೋವಾಬ್ಯರ ಅರಸನು ನನಗೆ ವಿರುದ್ಧ ದಂಗೆ ಎದ್ದಿದ್ದಾನೆ; ಮೋವಾಬರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ - ಮೋವಾಬ್ಯರ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ; ಮೋವಾಬ್ಯರೊಡನೆ ಯುದ್ಧಮಾಡುವದಕ್ಕೆ ನೀನು ನನ್ನ ಜೊತೆಯಲ್ಲಿ ಬರುತ್ತೀಯೋ ಎಂದು ಹೇಳಿಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು - ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅವನು ಹೋಗಿ, “ಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದನು. ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವೆಯೋ?” ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿದನು. ಅದಕ್ಕವನು, “ನಾನು ಬರುವೆನು, ನಾನು ನಿನ್ನವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:7
12 ತಿಳಿವುಗಳ ಹೋಲಿಕೆ  

ಆದ್ದರಿಂದ ಅಹಾಬನು ರಾಜನಾದ ಯೆಹೋಷಾಫಾಟನನ್ನು, “ಅರಾಮ್ಯರ ವಿರುದ್ಧವಾಗಿ ರಾಮೋತಿನಲ್ಲಿ ಹೋರಾಟ ಮಾಡುವುದಕ್ಕೆ ನೀನು ನಮ್ಮೊಂದಿಗೆ ಸೇರಿಕೊಳ್ಳುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಾನು ನಿನ್ನ ಜೊತೆ ಸೇರಿಕೊಳ್ಳುತ್ತೇನೆ. ನನ್ನ ಸೈನ್ಯಗಳು ಮತ್ತು ನನ್ನ ಕುದುರೆಗಳು ನಿನ್ನ ಸೈನ್ಯದ ಜೊತೆ ಸೇರಲು ಸಿದ್ಧವಾಗಿವೆ.


ಇಸ್ರೇಲರ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ನನ್ನೊಂದಿಗೆ ರಾಮೋತ್‌ಗಿಲ್ಯಾದಿಗೆ ಯುದ್ಧಮಾಡಲು ಬರುವಿಯಾ?” ಎಂದು ಕೇಳಲು, ಯೆಹೋಷಾಫಾಟನು, “ನಾನು ನಿನ್ನವನೆ, ನನ್ನ ಜನರು ನಿನ್ನ ಜನರೇ ಆಗಿದ್ದಾರೆ. ನಾವು ಯುದ್ಧಮಾಡಲು ನಿಮ್ಮೊಂದಿಗೆ ಬರುತ್ತೇವೆ” ಎಂದು ಅಹಾಬನಿಗೆ ಉತ್ತರಿಸಿದನು.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಆಗ ರಾಜನಾದ ಯೋರಾಮನು ಸಮಾರ್ಯದಿಂದ ಹೊರಗೆ ಹೋಗಿ, ಇಸ್ರೇಲಿನ ಜನರನ್ನೆಲ್ಲ ಒಟ್ಟುಗೂಡಿಸಿದನು.


ಯೆಹೋಷಾಫಾಟನು ಯೋರಾಮನನ್ನು, “ನಾವು ಯಾವ ಮಾರ್ಗದಲ್ಲಿ ಹೋಗೋಣ?” ಎಂದು ಕೇಳಿದನು. “ನಾವು ಎದೋಮಿನ ಮರಳುಗಾಡಿನ ಮೂಲಕ ಹೋಗೋಣ” ಎಂದು ಯೋರಾಮನು ಉತ್ತರಿಸಿದನು.


ಆದ್ದರಿಂದ ಇಸ್ರೇಲಿನ ರಾಜನು ಯೆಹೂದದ ಮತ್ತು ಎದೋಮಿನ ರಾಜರೊಂದಿಗೆ ಹೋದನು. ಅವರು ಏಳು ದಿನಗಳ ಕಾಲ ಪ್ರಯಾಣ ಮಾಡಿದರು. ಅವರ ಸೇನೆಗೆ ಮತ್ತು ಪ್ರಾಣಿಗಳಿಗೆ ಸಾಕಾಗುವಷ್ಟು ನೀರು ಅಲ್ಲಿ ಇರಲಿಲ್ಲ.


ಎಲೀಷನು ತೀರಿಕೊಂಡಾಗ ಜನರು ಅವನನ್ನು ಸಮಾಧಿಮಾಡಿದರು. ವಸಂತಮಾಸದ ಒಂದು ದಿನ, ಮೋವಾಬ್ಯ ಸೈನಿಕರ ಒಂದು ಗುಂಪು ಇಸ್ರೇಲಿಗೆ ಸುಲಿಗೆ ಮಾಡಲು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು