Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:22 - ಪರಿಶುದ್ದ ಬೈಬಲ್‌

22 ಅವಳು ತನ್ನ ಗಂಡನನ್ನು ಕರೆದು, “ದಯವಿಟ್ಟು ಒಬ್ಬ ಸೇವಕನನ್ನೂ ಒಂದು ಹೇಸರಕತ್ತೆಯನ್ನೂ ನನಗೆ ಕಳುಹಿಸಿಕೊಡಿ. ನಾನು ದೇವಮನುಷ್ಯನನ್ನು ಕರೆತರಲು ಬೇಗ ಹೋಗಿ ಹಿಂದಿರುಗಿ ಬರುತ್ತೇನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಗಂಡನನ್ನು ಕರೆಯಿಸಿ ಅವನಿಗೆ, “ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ, ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ದಯವಿಟ್ಟು ನನಗಾಗಿ ಒಬ್ಬ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸಿ; ನಾನು ಬೇಗನೆ ಆ ದೈವಪುರುಷನ ಬಳಿಗೆ ಹೋಗಿ ಬರುತ್ತೇನೆ,” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಾಗಲು ಮುಚ್ಚಿ ಗಂಡನನ್ನು ಕರಿಸಿ ಅವನಿಗೆ - ದಯವಿಟ್ಟು ನನಗೋಸ್ಕರ ಒಬ್ಬ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು; ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿ ಬರುತ್ತೇನೆ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತನ್ನ ಗಂಡನನ್ನು ಕರೆದು, “ನಾನು ದೇವರ ಮನುಷ್ಯನ ಬಳಿಗೆ ಬೇಗನೆ ಹೋಗಿ ತಿರುಗಿ ಬರುವ ಹಾಗೆ, ನೀನು ದಯಮಾಡಿ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:22
6 ತಿಳಿವುಗಳ ಹೋಲಿಕೆ  

ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.


ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು.


ಅವಳನ್ನು ಭೇಟಿ ಮಾಡುವುದಕ್ಕೆ ಓಡಿಹೋಗಿ ಅವಳಿಗೆ, ‘ನೀನು ಕ್ಷೇಮವಾಗಿರುವೆಯಾ? ನಿನ್ನ ಗಂಡ ಕ್ಷೇಮವಾಗಿರುವನೇ? ನಿನ್ನ ಮಗು ಕ್ಷೇಮವಾಗಿರುವುದೇ?’ ಎಂದು ಕೇಳು” ಎಂಬುದಾಗಿ ಹೇಳಿ ಕಳುಹಿಸಿದನು. ಅಂತೆಯೇ ಗೇಹಜಿಯು ಆಕೆಯನ್ನು ಕೇಳಿದನು. ಅವಳು “ಹೌದು, ಕ್ಷೇಮವಾಗಿದ್ದೇವೆ” ಎಂದು ಉತ್ತರಿಸಿದಳು.


ನಂತರ ಅವಳು ಒಂದು ತಡಿಯನ್ನು ಕತ್ತೆಯ ಮೇಲೆ ಹಾಕಿ ತನ್ನ ಸೇವಕನಿಗೆ, “ಬೇಗ ಬಾ! ನಾವು ವೇಗವಾಗಿ ಸವಾರಿ ಮಾಡಿಕೊಂಡು ಹೋಗೋಣ. ನಾನು ನಿನಗೆ ಹೇಳಿದಾಗ ನಿಧಾನಿಸು!” ಎಂದು ಹೇಳಿದಳು.


ಆ ಸ್ತ್ರೀಯು ಬಾಲಕನನ್ನು ದೇವಮನುಷ್ಯನ (ಎಲೀಷನ) ಹಾಸಿಗೆಯ ಮೇಲೆ ಮಲಗಿಸಿದಳು. ನಂತರ ಅವಳು ಬಾಗಿಲನ್ನು ಮುಚ್ಚಿಕೊಂಡು, ಹೊರಗೆ ಹೋದಳು.


ಆ ಸ್ತ್ರೀಯ ಗಂಡನು, “ಈ ದಿನ ದೇವಮನುಷ್ಯನ ಬಳಿಹೋಗಲು ನೀನೇಕೆ ಅಪೇಕ್ಷೆಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು. ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು