Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:35 - ಪರಿಶುದ್ದ ಬೈಬಲ್‌

35 ಎಲೀಷನು ಕೊಠಡಿಯಿಂದ ಹೊರಗೆ ಬಂದು ಮನೆಯಲ್ಲಿ ಸುತ್ತಲೂ ನಡೆದಾಡಿದನು. ನಂತರ ಅವನು ಕೊಠಡಿಯೊಳಕ್ಕೆ ಹಿಂದಿರುಗಿ ಹೋಗಿ ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗು ಏಳು ಸಾರಿ ಸೀನಿ ತನ್ನ ಕಣ್ಣುಗಳನ್ನು ತೆರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯನ್ನು ತುಸುಹೊತ್ತು ಅತ್ತಿತ್ತ ಅಡ್ಡಾಡಿ, ತಿರುಗಿ ಅವನ ಮೇಲೆ ಬೋರಲು ಬೀಳಲು, ಹುಡುಗನು ಏಳು ಸಾರಿ ಸೀತು ಕಣ್ತೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರಿಗಿ ಅವನ ಮೇಲೆ ಬೋರ್ಲ ಬೀಳಲು ಹುಡುಗನು ಏಳು ಸಾರಿ ಸೀತು ಕಣ್ದೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವನು ಆಮೇಲೆ ಎದ್ದು ಕೋಣೆಯಲ್ಲಿ ಸ್ವಲ್ಪ ಅತ್ತಿತ್ತ ತಿರುಗಾಡಿ, ಪುನಃ ಅವನ ಮೇಲೆ ಬೋರಲು ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ಕಣ್ಣುಗಳನ್ನು ತೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:35
13 ತಿಳಿವುಗಳ ಹೋಲಿಕೆ  

ಇಸ್ರೇಲರಲ್ಲಿ ಕೆಲವರು ಸತ್ತವನೊಬ್ಬನನ್ನು ಸಮಾಧಿ ಮಾಡುತ್ತಿರುವಾಗ ಸೈನಿಕರ ಆ ಗುಂಪನ್ನು ನೋಡಿ ಸತ್ತವನನ್ನು ಎಲೀಷನ ಸಮಾಧಿಯಲ್ಲಿ ಎಸೆದು ಓಡಿಹೋದರು. ಎಲೀಷನ ಮೂಳೆಗಳನ್ನು ಸತ್ತವನು ಸ್ಪರ್ಶಿಸಿದ ತಕ್ಷಣ, ಸತ್ತ ಮನುಷ್ಯನಿಗೆ ಜೀವ ಬಂದು, ಅವನು ತನ್ನ ಕಾಲುಗಳ ಮೇಲೆ ನಿಂತುಕೊಂಡನು!


ಎಲೀಷನು ಸತ್ತಬಾಲಕನಿಗೆ ಮತ್ತೆ ಜೀವವನ್ನು ಬರುವಂತೆ ಮಾಡಿದ್ದರ ಬಗ್ಗೆ ಗೇಹಜಿಯು ರಾಜನಿಗೆ ಹೇಳುತ್ತಿದ್ದನು. ಎಲೀಷನು ಮರಳಿ ಜೀವಬರಿಸಿದ ಬಾಲಕನ ತಾಯಿಯು ಆ ಸಮಯದಲ್ಲಿ ರಾಜನ ಬಳಿಗೆ ಹೋದಳು. ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಕೊಡಿಸಬೇಕೆಂದು ಕೇಳಿಕೊಳ್ಳಲು ಆಕೆ ಬಂದಿದ್ದಳು. ಗೇಹಜಿಯು, “ನನ್ನ ಒಡೆಯನೇ, ರಾಜನೇ, ಇವಳೇ ಆ ಸ್ತ್ರೀಯು! ಎಲೀಷನು ಮರಳಿ ಜೀವಬರಿಸಿದ ಬಾಲಕನು ಇವನೇ!” ಎಂದು ಹೇಳಿದನು.


ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಆ ಕೂಡಲೇ ಆಕೆಗೆ ಜೀವ ಬಂದಿತು. ಆಕೆ ಎದ್ದುನಿಂತುಕೊಂಡಳು. ಯೇಸು ಅವರಿಗೆ, “ಆಕೆಗೆ ತಿನ್ನಲು ಏನಾದರೂ ಕೊಡಿರಿ” ಎಂದು ಹೇಳಿದನು.


ಎಲೀಷನು ತಾನು ಮರಳಿ ಜೀವಿಸುವಂತೆ ಮಾಡಿದ ಬಾಲಕನ ತಾಯಿಯೊಂದಿಗೆ ಮಾತನಾಡಿದನು. ಎಲೀಷನು, “ನೀನು ಮತ್ತು ನಿನ್ನ ಕುಟುಂಬವು ಬೇರೆ ದೇಶಕ್ಕೆ ಹೋಗಬೇಕು. ಏಕೆಂದರೆ ಈ ದೇಶದಲ್ಲಿ ಬರಗಾಲವು ಏಳು ವರ್ಷಗಳವರೆಗೆ ಇರಬೇಕೆಂದು ಯೆಹೋವನು ತೀರ್ಮಾನಿಸಿದ್ದಾನೆ” ಎಂದು ಹೇಳಿದನು.


ಯೆಹೋವನು ಎಲೀಯನ ಪ್ರಾರ್ಥನೆಗೆ ಕಿವಿಗೊಟ್ಟನು. ಆ ಬಾಲಕನು ಮತ್ತೆ ಉಸಿರಾಡಲಾರಂಭಿಸಿದನು. ಅವನು ಜೀವಂತನಾದನು!


ಬಳಿಕ ಆ ಬಾಲಕನ ಮೇಲೆ ಎಲೀಯನು ಮೂರು ಬಾರಿ ಬೋರಲಬಿದ್ದು, “ನನ್ನ ದೇವರಾದ ಯೆಹೋವನೇ, ಈ ಬಾಲಕನಿಗೆ ಮತ್ತೆ ಜೀವವನ್ನು ಕೊಡು” ಎಂದು ಪ್ರಾರ್ಥಿಸಿದನು.


ಎಲೀಷನು ಗೇಹಜಿಯನ್ನು ಕರೆದು, “ಶೂನೇಮಿನ ಸ್ತ್ರೀಯನ್ನು ಕರೆ” ಎಂದು ಹೇಳಿದನು. ಗೇಹಜಿಯು ಶೂನೇಮಿನ ಸ್ತ್ರೀಯನ್ನು ಕರೆದನು. ಅವಳು ಎಲೀಷನ ಹತ್ತಿರಕ್ಕೆ ಬಂದಳು. ಎಲೀಷನು, “ನಿನ್ನ ಮಗನನ್ನು ಎತ್ತಿಕೊ” ಎಂದು ಹೇಳಿದನು.


ಎಲೀಯನು ತನ್ನ ಸೇವಕನಿಗೆ, “ಸಮುದ್ರದ ಕಡೆಗೆ ನೋಡು” ಎಂದು ಹೇಳಿದನು. ಸಮುದ್ರವು ಕಾಣುವ ಸ್ಥಳಕ್ಕೆ ಆ ಸೇವಕನು ಹೋದನು. ನಂತರ ಸೇವಕನು ಹಿಂದಿರುಗಿ ಬಂದು, “ನನಗೆ ಏನೂ ಕಾಣುತ್ತಿಲ್ಲ” ಎಂದನು. ಎಲೀಯನು ಆ ಸೇವಕನಿಗೆ, “ಹೋಗಿ ಮತ್ತೆ ನೋಡು” ಎಂದನು. ಹೀಗೆ ಆ ಸೇವಕನು ಏಳು ಸಲ ಹೋದನು.


ಎಲೀಷನು ತನ್ನ ಸಂದೇಶಕನ ಮೂಲಕ ನಾಮಾನನಿಗೆ, “ಹೋಗಿ, ಜೋರ್ಡನ್ ನದಿಯಲ್ಲಿ ಏಳು ಸಲ ಸ್ನಾನಮಾಡು. ಆಗ ನಿನ್ನ ಚರ್ಮರೋಗವು ಗುಣವಾಗುವುದು. ನೀನು ಸಂಪೂರ್ಣ ಶುದ್ಧನಾಗುವೆ” ಎಂದು ತಿಳಿಸಿದನು.


ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ನಾಮಾನನು ಜೋರ್ಡನ್ ನದಿಯಲ್ಲಿ ಇಳಿದು ಏಳುಸಾರಿ ಮುಳುಗಿ ಮೇಲೆದ್ದನು. ಆಗ ನಾಮಾನನು ಸಂಪೂರ್ಣ ಶುದ್ಧನಾದನು; ಅವನ ಚರ್ಮವು ಮಗುವಿನ ಚರ್ಮದಂತೆ ಕೋಮಲವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು