Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:41 - ಪರಿಶುದ್ದ ಬೈಬಲ್‌

41 ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು. ಆಗ ಆ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆಗ ಅವನು, “ಹಿಟ್ಟನ್ನು ತಂದುಕೊಡಿ,” ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು,” ಎಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಗ ಅವನು - ಹಿಟ್ಟನ್ನು ತಂದುಕೊಡಿರಿ ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ ಈಗ ಇದನ್ನು ಬಡಿಸಬಹುದು ಅಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಎಲೀಷನು ಹಿಟ್ಟನ್ನು ತೆಗೆದುಕೊಂಡು ಬರಲು ಹೇಳಿ, ಅದನ್ನು ಗಡಿಗೆಯಲ್ಲಿ ಹಾಕಿ, “ಈಗ ಇದನ್ನು ಜನರಿಗೆ ಬಡಿಸಿರಿ,” ಎಂದನು. ಆಗ ಆ ಗಡಿಗೆಯಲ್ಲಿನ ವಿಷವೆಲ್ಲಾ ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:41
7 ತಿಳಿವುಗಳ ಹೋಲಿಕೆ  

ನಂತರ ಎಲೀಷನು ನೆಲದಿಂದ ನೀರು ಹರಿಯುತ್ತಿದ್ದ ಸ್ಥಳಕ್ಕೆ ಹೋದನು. ಎಲೀಷನು ಉಪ್ಪನ್ನು ನೀರಿನಲ್ಲಿ ಎಸೆದು, “‘ನಾನು ಈ ನೀರನ್ನು ಶುಚಿಗೊಳಿಸಿದ್ದೇನೆ! ಇಲ್ಲಿಂದಾಚೆಗೆ ಈ ನೀರು ಯಾರಿಗೂ ಸಾವನ್ನು ಮತ್ತು ಬಂಜೆತನವನ್ನು ಉಂಟುಮಾಡುವುದಿಲ್ಲ ಮತ್ತು ಈ ಭೂಮಿಯಲ್ಲಿ ಬೆಳೆಗಳು ಬೆಳೆಯುತ್ತವೆ’ ಎಂದು ಯೆಹೋವನು ಹೇಳುತ್ತಾನೆ” ಎಂದನು.


ಮೋಶೆಯು ಯೆಹೋವನಿಗೆ ಪ್ರಾರ್ಥಿಸಲು ಆತನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಮೋಶೆಯು ಆ ಗಿಡವನ್ನು ನೀರಿನಲ್ಲಿ ಹಾಕಿದಾಗ ಕಹಿನೀರು ಸಿಹಿ ನೀರಾಯಿತು. ಆ ಸ್ಥಳದಲ್ಲಿ ಯೆಹೋವನು ಅವರಿಗಾಗಿ ನಿಯಮವನ್ನು ಮಾಡಿದನು. ಯೆಹೋವನು ಅವರ ನಂಬಿಕೆಯನ್ನು ಸಹ ಪರೀಕ್ಷಿಸಿದನು.


ದೇವರ ಮೂಢತನವು ಸಹ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆಯು ಸಹ ಮನುಷ್ಯರ ಬಲಕ್ಕಿಂತಲೂ ಹೆಚ್ಚು ಶಕ್ತಿಯುತವಾಗಿದೆ.


ಆದರೆ ಪೌಲನು ಆ ಹಾವನ್ನು ಬೆಂಕಿಯೊಳಕ್ಕೆ ಝಾಡಿಸಿ ಬಿಟ್ಟನು. ಪೌಲನಿಗೆ ಯಾವ ಹಾನಿಯೂ ಆಗಲಿಲ್ಲ.


ಯೇಸು ಈ ಮಾತನ್ನು ಹೇಳಿದ ಮೇಲೆ ನೆಲದ ಮೇಲೆ ಉಗುಳಿ ಅದರಿಂದ ಕೆಸರನ್ನು ಮಾಡಿಕೊಂಡು ಆ ಮನುಷ್ಯನ ಕಣ್ಣುಗಳಿಗೆ ಹಚ್ಚಿದನು.


ದೇವಮನುಷ್ಯನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು. ಆ ಮನುಷ್ಯನು ಕೊಡಲಿಯು ಬಿದ್ದ ಸ್ಥಳವನ್ನು ಎಲೀಷನಿಗೆ ತೋರಿಸಿದನು. ಆಗ ಎಲೀಷನು ಒಂದು ಕಡ್ಡಿಯನ್ನು ಮುರಿದು ಅದನ್ನು ನೀರಿನೊಳಕ್ಕೆ ಎಸೆದನು. ಆ ಕಡ್ಡಿಯು ಕಬ್ಬಿಣದ ಕೊಡಲಿಯನ್ನು ತೇಲುವಂತೆ ಮಾಡಿತು.


ಎಲೀಷನು ತನ್ನ ಸಂದೇಶಕನ ಮೂಲಕ ನಾಮಾನನಿಗೆ, “ಹೋಗಿ, ಜೋರ್ಡನ್ ನದಿಯಲ್ಲಿ ಏಳು ಸಲ ಸ್ನಾನಮಾಡು. ಆಗ ನಿನ್ನ ಚರ್ಮರೋಗವು ಗುಣವಾಗುವುದು. ನೀನು ಸಂಪೂರ್ಣ ಶುದ್ಧನಾಗುವೆ” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು