Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:10 - ಪರಿಶುದ್ದ ಬೈಬಲ್‌

10 ಎಲೀಷನು ತನ್ನ ಸಂದೇಶಕನ ಮೂಲಕ ನಾಮಾನನಿಗೆ, “ಹೋಗಿ, ಜೋರ್ಡನ್ ನದಿಯಲ್ಲಿ ಏಳು ಸಲ ಸ್ನಾನಮಾಡು. ಆಗ ನಿನ್ನ ಚರ್ಮರೋಗವು ಗುಣವಾಗುವುದು. ನೀನು ಸಂಪೂರ್ಣ ಶುದ್ಧನಾಗುವೆ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಲೀಷನು ಅವನಿಗೆ, “ಹೋಗಿ ಜೋರ್ಡನ್ ನದಿಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹ ಮೊದಲಿದ್ದಂತಾಗುವುದು; ನೀನು ಶುದ್ಧನಾಗುವೆ,” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಲೀಷನು ಅವನಿಗೆ - ಹೋಗಿ ಯೊರ್ದನ್ ಹೊಳೆಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹವು ಮುಂಚಿನಂತಾಗುವದು; ನೀನು ಶುದ್ಧನಾಗುವಿ ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:10
23 ತಿಳಿವುಗಳ ಹೋಲಿಕೆ  

ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


ಯಾಜಕನು ಚರ್ಮರೋಗವಿದ್ದ ವ್ಯಕ್ತಿಯ ಮೇಲೆ ರಕ್ತವನ್ನು ಏಳುಸಲ ಚಿಮಿಕಿಸಬೇಕು. ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಬಳಿಕ ಯಾಜಕನು ಬಯಲಿಗೆ ಹೋಗಿ ಜೀವಂತವಾಗಿರುವ ಪಕ್ಷಿಯನ್ನು ಬಿಟ್ಟುಬಿಡಬೇಕು.


ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ನಾಮಾನನು ಜೋರ್ಡನ್ ನದಿಯಲ್ಲಿ ಇಳಿದು ಏಳುಸಾರಿ ಮುಳುಗಿ ಮೇಲೆದ್ದನು. ಆಗ ನಾಮಾನನು ಸಂಪೂರ್ಣ ಶುದ್ಧನಾದನು; ಅವನ ಚರ್ಮವು ಮಗುವಿನ ಚರ್ಮದಂತೆ ಕೋಮಲವಾಯಿತು.


ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು. ಆಗ ಆ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ.


ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.


“ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು.


ಬಳಿಕ ಅವನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.


ಬಳಿಕ ಆರೋನನು ತನ್ನ ಬೆರಳಿನಿಂದ ಸ್ವಲ್ಪ ರಕ್ತವನ್ನು ಯಜ್ಞವೇದಿಕೆಯ ಮೇಲೆ ಏಳು ಸಲ ಚಿಮಿಕಿಸುವನು. ಹೀಗೆ ಆರೋನನು ಯಜ್ಞವೇದಿಕೆಯನ್ನು ಇಸ್ರೇಲರಿಂದ ಅದಕ್ಕುಂಟಾದ ಅಶುದ್ಧತ್ವದಿಂದ ದೂರಮಾಡಿ ಪರಿಶುದ್ಧಗೊಳಿಸುವನು.


ಅಲ್ಲದೆ ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದಲ್ಲಿ ತನ್ನ ಬೆರಳಿನಿಂದ ಚಿಮಿಕಿಸಬೇಕು. ಕೃಪಾಸನದ ಮುಂಭಾಗದಲ್ಲಿ ಅವನು ತನ್ನ ಬೆರಳಿನಿಂದ ರಕ್ತವನ್ನು ಏಳು ಬಾರಿ ಚಿಮಿಕಿಸುವನು.


ಬಳಿಕ ಯಾಜಕನು ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪನ್ನು, ಕೆಂಪು ಬಟ್ಟೆಯನ್ನು ಮತ್ತು ಸಜೀವವಾದ ಪಕ್ಷಿಯನ್ನು ತೆಗೆದುಕೊಳ್ಳುವನು. ಯಾಜಕನು ಹರಿಯುವ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಅವುಗಳನ್ನು ಅದ್ದುವನು. ಬಳಿಕ ಯಾಜಕನು ರಕ್ತವನ್ನು ಆ ಮನೆಯ ಮೇಲೆ ಏಳು ಸಲ ಚಿಮಿಕಿಸುವನು.


ಬಳಿಕ ಯಾಜಕನು ತನ್ನ ಬಲಗೈಯ ಬೆರಳನ್ನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ಎಣ್ಣೆಯನ್ನು ಏಳುಸಲ ಚಿಮಿಕಿಸಬೇಕು.


ಆಗ ಎಲೀಷನು, “ಯೆಹೋವನು ಹೀಗೆನ್ನುತ್ತಾನೆ: ಕಣಿವೆಯಲ್ಲಿ ಗುಂಡಿಗಳನ್ನು ತೋಡಿರಿ.


ನಂತರ ಎಲೀಷನು ನೆಲದಿಂದ ನೀರು ಹರಿಯುತ್ತಿದ್ದ ಸ್ಥಳಕ್ಕೆ ಹೋದನು. ಎಲೀಷನು ಉಪ್ಪನ್ನು ನೀರಿನಲ್ಲಿ ಎಸೆದು, “‘ನಾನು ಈ ನೀರನ್ನು ಶುಚಿಗೊಳಿಸಿದ್ದೇನೆ! ಇಲ್ಲಿಂದಾಚೆಗೆ ಈ ನೀರು ಯಾರಿಗೂ ಸಾವನ್ನು ಮತ್ತು ಬಂಜೆತನವನ್ನು ಉಂಟುಮಾಡುವುದಿಲ್ಲ ಮತ್ತು ಈ ಭೂಮಿಯಲ್ಲಿ ಬೆಳೆಗಳು ಬೆಳೆಯುತ್ತವೆ’ ಎಂದು ಯೆಹೋವನು ಹೇಳುತ್ತಾನೆ” ಎಂದನು.


ನಾಮಾನನು ತನ್ನ ಕುದುರೆಗಳೊಂದಿಗೆ ಮತ್ತು ರಥಗಳೊಂದಿಗೆ ಎಲೀಷನ ಮನೆಗೆ ಬಂದು, ಬಾಗಿಲಿನ ಹೊರಗಡೆ ನಿಂತುಕೊಂಡನು.


ನಾಮಾನನು ಕೋಪಗೊಂಡು, “ಎಲೀಷನು ಕೊನೆಯ ಪಕ್ಷ ಬಂದು, ನನ್ನೆದುರು ನಿಂತು, ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ನನ್ನನ್ನು ಕರೆಯುತ್ತಿದ್ದನೆಂದು ನಾನು ಭಾವಿಸಿದ್ದೆನು. ಅವನು ತನ್ನ ಕೈಗಳನ್ನು ನನ್ನ ದೇಹದ ಮೇಲೆ ಸವರಿ, ನನ್ನ ಕುಷ್ಠರೋಗವನ್ನು ಗುಣಪಡಿಸುವನೆಂದು ನಾನು ಭಾವಿಸಿದ್ದೆನು.


ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.


ಆದರೆ, ತೊಳೆದ ನಂತರ ಬೂಷ್ಟು ತಿರುಗಿ ಬಾರದಿದ್ದರೆ, ಆ ತೊಗಲು ಅಥವಾ ಬಟ್ಟೆ ಶುದ್ಧವಾಗಿದೆ. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿದ್ದರೂ ಶುದ್ಧವಾಗಿದೆ.”


ಎಲೀಷನು ಕೊಠಡಿಯಿಂದ ಹೊರಗೆ ಬಂದು ಮನೆಯಲ್ಲಿ ಸುತ್ತಲೂ ನಡೆದಾಡಿದನು. ನಂತರ ಅವನು ಕೊಠಡಿಯೊಳಕ್ಕೆ ಹಿಂದಿರುಗಿ ಹೋಗಿ ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗು ಏಳು ಸಾರಿ ಸೀನಿ ತನ್ನ ಕಣ್ಣುಗಳನ್ನು ತೆರೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು