Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:12 - ಪರಿಶುದ್ದ ಬೈಬಲ್‌

12 ದಮಸ್ಕದ ಅಬಾನಾ ಮತ್ತು ಪರ್ಪರ್ ನದಿಗಳು ಇಸ್ರೇಲಿನ ಎಲ್ಲಾ ನದಿಗಳಿಗಿಂತಲೂ ಉತ್ತಮ! ನಾನು ದಮಸ್ಕದ ಆ ನದಿಗಳಲ್ಲಿ ಸ್ನಾನಮಾಡಿ, ಶುದ್ಧನಾಗಬಾರದೇಕೆ?” ಎಂದುಕೊಂಡು ಕೋಪದಿಂದ ಹಿಂದಿರುಗಿ ಹೋದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?” ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದಮಸ್ಕದ ಅಬಾನಾ ಹಾಗು ಪರ್ಪರ್ ಎಂಬ ನದಿಗಳು ಇಸ್ರಯೇಲರ ಎಲ್ಲಾ ನದಿ ಹೊಳೆಗಳಿಗಿಂತ ಉತ್ತಮವಾಗಿವೆಯಲ್ಲವೇ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಿತ್ತಲ್ಲವೇ?” ಎಂದು ಹೇಳಿ, ಬಹಳ ಸಿಟ್ಟಿನಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದಮಸ್ಕದ ಅಬಾನಾ, ಪರ್ಪರ್ ಎಂಬ ಹೊಳೆಗಳು ಇಸ್ರಾಯೇಲ್ಯರ ಎಲ್ಲಾ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ ಎಂದು ಹೇಳಿ ಬಲು ಸಿಟ್ಟಿನಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಹೊಳೆಗಳಲ್ಲಿ ಸ್ನಾನಮಾಡಿ ಶುದ್ಧನಾಗುವಂತೆ ದಮಸ್ಕದ ನದಿಗಳಾದ ಅಬಾನಾವೂ, ಪಾರ್ಪರೂ ಇಸ್ರಾಯೇಲಿನ ಸಮಸ್ತ ನೀರುಗಳಿಗಿಂತ ಉತ್ತಮವಾಗಿಲ್ಲವೋ?” ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:12
14 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಯೇಸು ಗಲಿಲಾಯದ ನಜರೇತಿನಿಂದ ಯೋಹಾನನಿದ್ದ ಸ್ಥಳಕ್ಕೆ ಬಂದನು. ಯೋಹಾನನು ಯೇಸುವಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿದನು.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ.


ಮುಂಗೋಪಿಯು ಮೂಢಕಾರ್ಯಗಳನ್ನು ಮಾಡುವನು. ಕುತಂತ್ರಿಗಳನ್ನು ಜನರು ದ್ವೇಷಿಸುವರು.


ಆಗ ನಾಮಾನನು, “ನೀನು ಈ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ಕೊನೆಯಪಕ್ಷ ನನಗಾಗಿ ಈ ಕಾರ್ಯವನ್ನು ಮಾಡು. ನನ್ನ ಎರಡು ಹೇಸರಕತ್ತೆಗಳ ಮೇಲಿನ ಬುಟ್ಟಿಗಳು ತುಂಬುವಷ್ಟು ಇಸ್ರೇಲಿನ ಮಣ್ಣನ್ನು ನನಗೆ ಕೊಡಿಸಬೇಕೆಂದು ಬೇಡುತ್ತೇನೆ. ಏಕೆಂದರೆ ಇತರ ದೇವರುಗಳಿಗೆ ನಾನು ಮತ್ತೆ ಎಂದೆಂದಿಗೂ ಸರ್ವಾಂಗಹೋಮವನ್ನಾಗಲಿ ಯಜ್ಞಗಳನ್ನಾಗಲಿ ಅರ್ಪಿಸುವುದಿಲ್ಲ. ನಾನು ಯೆಹೋವನಿಗೆ ಮಾತ್ರ ಯಜ್ಞಗಳನ್ನು ಅರ್ಪಿಸುತ್ತೇನೆ!


ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.


ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು.


ಆ ಸಮಯದಲ್ಲಿ ಜೆರುಸಲೇಮಿನಿಂದ ನೀರು ಹರಿಯುತ್ತಲೇ ಇರುವದು. ಆ ನದಿಯು ಇಬ್ಭಾಗವಾಗಿ ಒಂದು ಭಾಗ ಪೂರ್ವಕ್ಕೆ ಹರಿಯುವದು. ಇನ್ನೊಂದು ಭಾಗ ಪಶ್ಚಿಮಕ್ಕೆ ಹರಿದು ಮೆಡಿಟರೇನಿಯನ್ ಸಮುದ್ರವನ್ನು ಸೇರುವದು. ಈ ನದಿಯು ಎಲ್ಲಾ ಕಾಲದಲ್ಲಿಯೂ ಬೇಸಿಗೆ, ಹಿಮಕಾಲವೆನ್ನದೆ ಹರಿಯುತ್ತಲೇ ಇರುವದು.


ನಾಮಾನನು ಕೋಪಗೊಂಡು, “ಎಲೀಷನು ಕೊನೆಯ ಪಕ್ಷ ಬಂದು, ನನ್ನೆದುರು ನಿಂತು, ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ನನ್ನನ್ನು ಕರೆಯುತ್ತಿದ್ದನೆಂದು ನಾನು ಭಾವಿಸಿದ್ದೆನು. ಅವನು ತನ್ನ ಕೈಗಳನ್ನು ನನ್ನ ದೇಹದ ಮೇಲೆ ಸವರಿ, ನನ್ನ ಕುಷ್ಠರೋಗವನ್ನು ಗುಣಪಡಿಸುವನೆಂದು ನಾನು ಭಾವಿಸಿದ್ದೆನು.


ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ.


ನನ್ನ ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿಯಿಂದಲೂ ಶೆನೀರಿನ ತುದಿಯಿಂದಲೂ ಹೆರ್ಮೋನಿನ ತುದಿಯಿಂದಲೂ ಸಿಂಹದ ಗವಿಗಳಿಂದಲೂ ಚಿರತೆಗಳ ಬೆಟ್ಟಗಳಿಂದಲೂ ಬಾ!


ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು