Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:13 - ಪರಿಶುದ್ದ ಬೈಬಲ್‌

13 ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ - ಅಪ್ಪನವರೇ, ಪ್ರವಾದಿಯು ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲಾ; ಹಾಗಾದರೆ ಸ್ನಾನಮಾಡಿ ಶುದ್ಧನಾಗು ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನಾಮಾನನ ಸೇವಕನು ಅವನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, “ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ, ನೀನು ಮಾಡುತ್ತಿದ್ದಿಲ್ಲವೋ? ಅವನು ನಿನಗೆ, ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರಲ್ಲಿ ಅಡ್ಡಿ ಏನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:13
31 ತಿಳಿವುಗಳ ಹೋಲಿಕೆ  

ಅರಾಮ್ಯರ ಸೇನೆಯನ್ನು ಇಸ್ರೇಲಿನ ರಾಜನು ನೋಡಿ ಎಲೀಷನಿಗೆ, “ನನ್ನ ತಂದೆಯೇ, ನಾನು ಅವರನ್ನು ಕೊಲ್ಲಲೇ? ಅವರನ್ನು ಕೊಂದುಹಾಕಿಬಿಡಲೇ?” ಎಂದು ಕೇಳಿದನು.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ಎಲೀಷನು ಕಾಯಿಲೆ ಬಿದ್ದನು. ತರುವಾಯ, ಈ ಕಾಯಿಲೆಯಿಂದ ಎಲೀಷನು ಸತ್ತುಹೋದನು. ಇಸ್ರೇಲಿನ ರಾಜನಾದ ಯೋವಾಷನು ಎಲೀಷನ ಬಳಿಗೆ ಹೋದನು. ಯೋವಾಷನು ಎಲೀಷನಿಗಾಗಿ ಗೋಳಾಡಿದನು. ಯೋವಾಷನು, “ನನ್ನ ತಂದೆಯೇ, ನನ್ನ ತಂದೆಯೇ, ದೇವರು ಬಂದು ನಿನ್ನನ್ನು ತೆಗೆದುಕೊಂಡು ಹೋಗಲು ಇದು ಸಕಾಲವೇ?” ಎಂದು ಹೇಳಿದನು.


ಎಲೀಷನು ಅದನ್ನು ನೋಡಿ, “ನನ್ನ ತಂದೆಯೇ! ನನ್ನ ತಂದೆಯೇ! ಇಸ್ರೇಲಿಗೆ ರಥರಥಾಶ್ವಗಳೂ ಮತ್ತು ಅಶ್ವದಳವೂ ಆಗಿದ್ದವನೇ!” ಎಂದು ಕೂಗಿಕೊಂಡನು. ಎಲೀಷನು ಎಲೀಯನನ್ನು ಮತ್ತೆ ನೋಡಲಿಲ್ಲ. ಎಲೀಷನು ತನ್ನ ಬಟ್ಟೆಗಳನ್ನು ಹಿಡಿದುಕೊಂಡು, ತನ್ನ ದುಃಖವನ್ನು ತೋರ್ಪಡಿಸಲು ಅವುಗಳನ್ನು ಹರಿದು ತುಂಡುತುಂಡು ಮಾಡಿದನು.


ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು.


ಈಗ ನೀನು ತಡಮಾಡುವುದೇಕೆ? ಎದ್ದೇಳು! ಆತನಲ್ಲಿ ನಂಬಿಕೆಯಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೊ’ ಎಂದು ಹೇಳಿದನು.


ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.


ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.


ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.


ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು.


ಈ ಲೋಕದಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿ. ನಿಮಗೆ ಒಬ್ಬನೇ ತಂದೆ. ಆತನು ಪರಲೋಕದಲ್ಲಿದ್ದಾನೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


“ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!


ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.


ಎಲೀಷನು ತನ್ನ ಸಂದೇಶಕನ ಮೂಲಕ ನಾಮಾನನಿಗೆ, “ಹೋಗಿ, ಜೋರ್ಡನ್ ನದಿಯಲ್ಲಿ ಏಳು ಸಲ ಸ್ನಾನಮಾಡು. ಆಗ ನಿನ್ನ ಚರ್ಮರೋಗವು ಗುಣವಾಗುವುದು. ನೀನು ಸಂಪೂರ್ಣ ಶುದ್ಧನಾಗುವೆ” ಎಂದು ತಿಳಿಸಿದನು.


ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.


ಅವನ ಸೇವಕರು ಅವನಿಗೆ, “ಇಸ್ರೇಲಿನ ರಾಜರುಗಳು ಕನಿಕರವುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿತಟ್ಟುಗಳನ್ನು (ನಮ್ಮ ನಡುಗಳಿಗೆ) ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗಳ ಮೇಲೆ ಹಾಕಿಕೊಂಡು ಇಸ್ರೇಲಿನ ರಾಜನ ಬಳಿಗೆ ಹೋಗೋಣ. ಅವನು ನಮ್ಮ ಜೀವವನ್ನು ಉಳಿಸಬಹುದು” ಎಂದು ಹೇಳಿದರು.


ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ.


ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.


ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.


ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.


ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಅಂದನು. ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕೆದ್ದು ಮಂಚದ ಮೇಲೆ ಕುಳಿತನು.


ಸೌಲನು ತನ್ನ ಸೇವಕನಿಗೆ, “ಒಳ್ಳೆಯ ಆಲೋಚನೆ; ನಡೆ ಹೋಗೋಣ” ಎಂದು ಹೇಳಿದನು. ಅವರು ಆ ಪಟ್ಟಣದಲ್ಲಿ ದೇವರ ಮನುಷ್ಯನಿದ್ದಲ್ಲಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು