Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:3 - ಪರಿಶುದ್ದ ಬೈಬಲ್‌

3 ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, “ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಂದು ದಿನ ಆಕೆ ತನ್ನ ಯಜಮಾನಿಗೆ, “ನಮ್ಮ ದಣಿಯವರು ಸಮಾರಿಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಅವರು ಇವರನ್ನು ಈ ಚರ್ಮರೋಗದಿಂದ ಗುಣಪಡಿಸುತ್ತಿದ್ದರು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಕೆಯು ಒಂದು ದಿವಸ ತನ್ನ ಯಜಮಾನಿಗೆ - ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇರುತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅವನು ಇವನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:3
9 ತಿಳಿವುಗಳ ಹೋಲಿಕೆ  

ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.


ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು.


ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”


ಅರಾಮ್ಯರು ಇಸ್ರೇಲಿನಲ್ಲಿ ಹೋರಾಡಲು ಸೈನಿಕರ ಅನೇಕ ಗುಂಪುಗಳನ್ನು ಕಳುಹಿಸಿದರು. ಸೈನಿಕರು ಜನರನ್ನು ತಮ್ಮ ಗುಲಾಮರಂತೆ ಹಿಡಿದುತಂದರು. ಒಂದು ಸಲ ಚಿಕ್ಕ ಹುಡುಗಿಯೊಬ್ಬಳನ್ನು ಇಸ್ರೇಲ್ ದೇಶದಿಂದ ಹಿಡಿದುತಂದರು. ಈ ಚಿಕ್ಕ ಹುಡುಗಿಯು ನಾಮಾನನ ಪತ್ನಿಗೆ ಸೇವಕಿಯಾದಳು.


ನಾಮಾನನು ತನ್ನ ಒಡೆಯನಾದ ಅರಾಮ್ಯರ ರಾಜನ ಬಳಿಗೆ ಹೋದನು. ಇಸ್ರೇಲಿನ ಹುಡುಗಿಯು ಹೇಳಿದ ಸಂಗತಿಗಳನ್ನು, ನಾಮಾನನು ಅರಾಮ್ಯರ ರಾಜನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು