Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:18 - ಪರಿಶುದ್ದ ಬೈಬಲ್‌

18 ಆ ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಅರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮೀ, ಈ ಜನರನ್ನು ಕುರುಡರನ್ನಾಗಿ ಮಾಡಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿದನು. ಅವರು ಅವನ ಮೊರೆಯನ್ನು ಆಲಿಸಿ ಆ ಜನರನ್ನು ಕುರುಡರನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು - ಸ್ವಾಮೀ, ಈ ಜನರನ್ನು ಕುರುಡರನ್ನಾಗಿಮಾಡು ಎಂದು ಯೆಹೋವನನ್ನು ಪ್ರಾರ್ಥಿಸಿದನು. ಆತನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡಿರಿ,” ಎಂದು ಪ್ರಾರ್ಥಿಸಿದನು. ಎಲೀಷನ ಮಾತಿನ ಹಾಗೆಯೇ ದೇವರು ಅವರನ್ನು ಕುರುಡರನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:18
10 ತಿಳಿವುಗಳ ಹೋಲಿಕೆ  

ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.


“ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.”


ಆ ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರನ್ನೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿಸಲಾರದೆ ಹೋದರು.


ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.


ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ.


ಆದರೆ ಆ ಸಮಯದಲ್ಲಿ ನಾನು ಅವರ ಕುದುರೆಗಳನ್ನು ಬೆಚ್ಚಿಬೀಳುವಂತೆ ಮಾಡುವೆನು. ಅದರ ಸವಾರನು ಭಯಗೊಳ್ಳುವನು. ಶತ್ರುವಿನ ಎಲ್ಲಾ ಕುದುರೆಗಳನ್ನು ನಾನು ಕುರುಡು ಮಾಡುವೆನು. ಆದರೆ ನಾನು ಕಣ್ಣು ತೆರೆದು ಯೆಹೂದ ವಂಶವನ್ನು ಸಂರಕ್ಷಿಸುವೆನು.


ಯುಕ್ತಿವಂತರು ಹಗಲಿನಲ್ಲೂ ಕತ್ತಲೆಗೆ ಓಡಿಹೋಗುವರು; ನಡುಮಧ್ಯಾಹ್ನದಲ್ಲಿ ಕತ್ತಲೆಯಲ್ಲೋ ಎಂಬಂತೆ ಮುಗ್ಗರಿಸುವರು.


ಯೆಹೋವನು ನಿಮ್ಮನ್ನು ದಿಗ್ಬ್ರಾಂತರನ್ನಾಗಿ ಮಾಡುವನು; ನಿಮ್ಮನ್ನು ಕುರುಡರನ್ನಾಗಿ ಮಾಡಿ ಗಲಿಬಿಲಿ ಮಾಡುವನು.


ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು.


ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು