Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:24 - ಪರಿಶುದ್ದ ಬೈಬಲ್‌

24 ಇದಾದನಂತರ, ಅರಾಮ್ಯರ ರಾಜನಾದ ಬೆನ್ಹದದನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿಕೊಂಡು, ಸಮಾರ್ಯವನ್ನು ಸುತ್ತುವರಿದು ಆಕ್ರಮಣಮಾಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಮೇಲೆ ಸಿರಿಯಾದ ರಾಜ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿಕೊಂಡು ಬಂದು ಸಮಾರಿಯಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಮೇಲೆ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸ್ವಲ್ಪ ಸಮಯದ ನಂತರ, ಅರಾಮಿನ ಅರಸ ಬೆನ್ಹದದನು ತನ್ನ ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಹೊರಟುಹೋಗಿ, ಸಮಾರ್ಯವನ್ನು ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:24
12 ತಿಳಿವುಗಳ ಹೋಲಿಕೆ  

ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು.


ಕೆಲವು ಜನರಿದ್ದ ಒಂದು ಚಿಕ್ಕ ನಗರವಿತ್ತು. ಒಬ್ಬ ದೊಡ್ಡ ರಾಜನು ಆ ನಗರದ ಮೇಲೆ ದಂಡೆತ್ತಿ ಬಂದು ಮುತ್ತಿಗೆ ಹಾಕಿದನು.


ನಂತರ ಅಶ್ಶೂರದ ರಾಜನು ಇಸ್ರೇಲಿನಲ್ಲೆಲ್ಲಾ ಸಂಚರಿಸಿ ಸಮಾರ್ಯಕ್ಕೆ ಬಂದನು. ಅವನು ಸಮಾರ್ಯವನ್ನು ಮೂರು ವರ್ಷ ಮುತ್ತಿಗೆ ಹಾಕಿದನು.


ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;


“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.


ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.


ಅಶ್ಶೂರದ ರಾಜನಾದ ಶಲ್ಮನೆಸರನು ಸಮಾರ್ಯದ ವಿರುದ್ಧ ಹೋರಾಡಲು ಹೋದನು. ಅವನ ಸೈನ್ಯವು ನಗರವನ್ನು ಸುತ್ತುವರಿಯಿತು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಇದು ಸಂಭವಿಸಿತು. (ಅದು ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಏಳನೆಯ ವರ್ಷದಲ್ಲಿ ಸಂಭವಿಸಿತು.)


ಸಮಾರ್ಯದಲ್ಲಿ ಆಹಾರವು ಇಲ್ಲವೇ ಇಲ್ಲ. ನಾವು ನಗರದ ಒಳಗೆ ಹೋದರೆ, ನಾವು ಅಲ್ಲೇ ಸಾಯುತ್ತೇವೆ. ನಾವು ಇಲ್ಲೇ ಕುಳಿತಿದ್ದರೂ, ಸಾಯುವುದು ನಿಶ್ಚಿತ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ. ಅವರು ನಮ್ಮನ್ನು ಬದುಕಿಸಿದರೆ ನಾವು ಬದುಕೋಣ. ಅವರು ನಮ್ಮನ್ನು ಕೊಂದರೆ ಸಾಯೋಣ” ಎಂದು ಮಾತನಾಡಿಕೊಂಡರು.


ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು.


ನಾಲ್ಕನೆಯ ತಿಂಗಳ ಒಂಭತ್ತನೆಯ ದಿನದಂದು ನಗರದಲ್ಲಿ ಭೀಕರ ಬರಗಾಲವಿತ್ತು. ಅಲ್ಲಿನ ಸಾಮಾನ್ಯರಿಗೆ ಆಹಾರವೇನೂ ಇರಲಿಲ್ಲ.


ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ಹದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು.


ಅರಾಮ್ಯರ ರಾಜನು ಇಸ್ರೇಲಿನ ವಿರುದ್ಧ ಯುದ್ಧಮಾಡಲು ಬಂದನು. ಅವನು ತನ್ನ ಸೇನಾಧಿಕಾರಿಗಳ ಸಭೆಸೇರಿಸಿ, “ನೀವು ಈ ಜಾಗದಲ್ಲಿ ಅಡಗಿಕೊಂಡಿದ್ದು, ಇಸ್ರೇಲರು ಇಲ್ಲಿಗೆ ಬಂದಾಗ ಅವರ ಮೇಲೆ ಆಕ್ರಮಣ ಮಾಡಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು