2 ಅರಸುಗಳು 6:25 - ಪರಿಶುದ್ದ ಬೈಬಲ್25 ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಸಮಾರಿಯ ಪಟ್ಟಣದಲ್ಲಿ ಘೋರ ಕ್ಷಾಮವಿತ್ತು. ಮುತ್ತಿಗೆಯ ನಿಮಿತ್ತ ಅದು ಮತ್ತಷ್ಟು ಘೋರವಾಗಿ ಒಂದು ಕತ್ತೆಯ ತಲೆಯನ್ನು ಒಂಬತ್ತು ಬೆಳ್ಳಿ ನಾಣ್ಯಗಳಿಗೂ, ಇನ್ನೂರು ಗ್ರಾಂ ಕಾಡು ಈರುಳ್ಳಿಯನ್ನು ಐದು ಬೆಳ್ಳಿ ನಾಣ್ಯಗಳಿಗೂ ಮಾರಲಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿ ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಅರೆಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಸಮಾರ್ಯದಲ್ಲಿ ದೊಡ್ಡ ಬರವಿತ್ತು. ಒಂದು ಕತ್ತೆಯ ತಲೆಯು ಎಂಬತ್ತು ಶೆಕೆಲ್ ಬೆಳ್ಳಿಗೆ, ಸುಮಾರು ನೂರು ಗ್ರಾಂ ಪಾರಿವಾಳದ ಗೊಬ್ಬರವನ್ನು ಐದು ಶೆಕೆಲ್ ಬೆಳ್ಳಿಗೆ ಮಾರಲಾಗುವವರೆಗೂ ಅದನ್ನು ಮುತ್ತಿಗೆಹಾಕಿದನು. ಅಧ್ಯಾಯವನ್ನು ನೋಡಿ |
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
ಆಗ ರಾತ್ರಿಯಾಗಿದ್ದರೂ ರಾಜನು ತನ್ನ ಹಾಸಿಗೆಯಿಂದ ಮೇಲಕ್ಕೆದ್ದನು. ರಾಜನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ಸೈನಿಕರು ಮಾಡಬೇಕೆಂದಿರುವುದನ್ನು ನಾನು ನಿಮಗೆ ಹೇಳುತ್ತೇನೆ. ನಾವು ಬಹಳ ಹಸಿದಿದ್ದೇವೆಂಬುದು ಅವರಿಗೆ ತಿಳಿದಿದೆ. ಅವರು ಹೊಲಗಳಲ್ಲಿ ಅಡಗಿಕೊಳ್ಳಲು ಪಾಳೆಯನ್ನು ಬಿಟ್ಟುಹೋಗಿದ್ದಾರೆ. ‘ಇಸ್ರೇಲರು ನಗರದಿಂದ ಹೊರಗೆ ಬಂದಾಗ, ನಾವು ಅವರನ್ನು ಜೀವಂತವಾಗಿ ಸೆರೆಹಿಡಿದು ಅವರ ನಗರವನ್ನು ಪ್ರವೇಶಿಸಬಹುದು’ ಎಂದು ಅರಾಮ್ಯರು ಆಲೋಚಿಸಿದ್ದಾರೆ” ಎಂದು ಹೇಳಿದನು.