Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:26 - ಪರಿಶುದ್ದ ಬೈಬಲ್‌

26 ಇಸ್ರೇಲಿನ ರಾಜನು ನಗರದ ಸುತ್ತಲಿನ ಗೋಡೆಯ ಮೇಲೆ ನಡೆಯುತ್ತಿರಲು ಸ್ತ್ರೀಯೊಬ್ಬಳು ಅವನನ್ನು, “ನನ್ನ ಪ್ರಭುವೇ, ರಾಜನೇ, ದಯವಿಟ್ಟು ನನಗೆ ಸಹಾಯಮಾಡು” ಎಂದು ಕೂಗಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಒಂದು ದಿನ ಇಸ್ರಯೇಲರ ಅರಸನು ಕೋಟೆಯ ಮೇಲೆ ತಿರುಗಾಡುತ್ತಿರುವಾಗ ಒಬ್ಬ ಮಹಿಳೆ, “ಅರಸರೇ, ನಮ್ಮ ಒಡೆಯರೇ, ನನ್ನನ್ನು ಕಾಪಾಡಿ,” ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಒಂದು ದಿವಸ ಇಸ್ರಾಯೇಲ್ಯರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ ಒಬ್ಬ ಸ್ತ್ರೀಯು - ಅರಸೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇಸ್ರಾಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ, ಒಬ್ಬ ಸ್ತ್ರೀಯು ಅವನನ್ನು ಕೂಗಿ, “ನನ್ನ ಯಜಮಾನನೇ, ಅರಸನೇ, ಸಹಾಯ ಮಾಡಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:26
7 ತಿಳಿವುಗಳ ಹೋಲಿಕೆ  

ತೆಕೋವದ ಆ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯಮಾಡು” ಎಂದು ಹೇಳಿದಳು.


“ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!” ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.


ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಆಕೆಯು ಅನೇಕ ಸಲ ನ್ಯಾಯಾಧೀಶನ ಬಳಿಗೆ ಬಂದು, ‘ಇಲ್ಲಿ ನನಗೊಬ್ಬನು ತೊಂದರೆ ಕೊಡುತ್ತಿದ್ದಾನೆ. ದಯವಿಟ್ಟು ನನಗೆ ನ್ಯಾಯವನ್ನು ದೊರಕಿಸಿಕೊಡಿ!’ ಎಂದು ಬೇಡಿಕೊಂಡಳು.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು.


ಇಸ್ರೇಲಿನ ರಾಜನು, “ಯೆಹೋವನು ನಿನಗೆ ಸಹಾಯ ಮಾಡದಿದ್ದರೆ, ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನಗೆ ಕೊಡಲು ನನ್ನ ಬಳಿ ಏನೂ ಇಲ್ಲ; ಕಣದಲ್ಲಿ ಕಾಳುಗಳಿಲ್ಲ, ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಾರಸವಿಲ್ಲ” ಎಂದನು.


ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು