Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:27 - ಪರಿಶುದ್ದ ಬೈಬಲ್‌

27 ಇಸ್ರೇಲಿನ ರಾಜನು, “ಯೆಹೋವನು ನಿನಗೆ ಸಹಾಯ ಮಾಡದಿದ್ದರೆ, ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನಗೆ ಕೊಡಲು ನನ್ನ ಬಳಿ ಏನೂ ಇಲ್ಲ; ಕಣದಲ್ಲಿ ಕಾಳುಗಳಿಲ್ಲ, ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಾರಸವಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅರಸನು ಆಕೆಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ಕಾಪಾಡದಿದ್ದರೆ ನಾನು ಹೇಗೆ ಕಾಪಾಡಲು ಸಾಧ್ಯ? ಕಣದಲ್ಲಾಗಲಿ, ದ್ರಾಕ್ಷೀ ಆಲೆಯಲ್ಲಾಗಲಿ ಏನಾದರೂ ಇದೆಯೇ?’ ಎಂದು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅರಸನು ಆಕೆಗೆ - ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ ದ್ರಾಕ್ಷೇ ಆಲೆಯಲ್ಲಾಗಲಿ ಏನಾದರೂ ಉಂಟೋ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದಕ್ಕವನು, “ಯೆಹೋವ ದೇವರು ನಿನಗೆ ಸಹಾಯ ಮಾಡದೆ ಹೋದರೆ, ನಾನು ಎಲ್ಲಿಂದ ನಿನಗೆ ಸಹಾಯ ಮಾಡಲಿ? ಕಣದಿಂದಲೋ, ದ್ರಾಕ್ಷಿ ಆಲೆಯಿಂದಲೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:27
11 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ.


ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ. ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.


ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.


ದೇವರೇ, ವೈರಿಗಳನ್ನು ಸೋಲಿಸಲು ನಮಗೆ ಸಹಾಯಮಾಡು! ಜನರು ನಮಗೆ ಸಹಾಯಮಾಡಲಾರರು!


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.


ಇಸ್ರೇಲಿನ ರಾಜನು ನಗರದ ಸುತ್ತಲಿನ ಗೋಡೆಯ ಮೇಲೆ ನಡೆಯುತ್ತಿರಲು ಸ್ತ್ರೀಯೊಬ್ಬಳು ಅವನನ್ನು, “ನನ್ನ ಪ್ರಭುವೇ, ರಾಜನೇ, ದಯವಿಟ್ಟು ನನಗೆ ಸಹಾಯಮಾಡು” ಎಂದು ಕೂಗಿಕೊಂಡಳು.


ನಂತರ ಇಸ್ರೇಲಿನ ರಾಜನು ಆ ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು. ಆ ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಈ ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು