Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:28 - ಪರಿಶುದ್ದ ಬೈಬಲ್‌

28 ನಂತರ ಇಸ್ರೇಲಿನ ರಾಜನು ಆ ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು. ಆ ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಈ ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನಿನಗಿರುವ ದುಃಖ ಯಾವುದು?” ಎಂದನು. ಆಗ ಆಕೆ, “ಈ ಸ್ತ್ರೀ ನನಗೆ, ‘ನಿನ್ನ ಮಗನನ್ನು ತೆಗೆದುಕೊಂಡು ಬಾ; ನಾವು ಈ ದಿನ ಅವನನ್ನು ತಿಂದುಬಿಡೋಣ; ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದು ಹೇಳಿದ್ದರಿಂದ ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದುಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿನಗಿರುವ ದುಃಖ ಯಾವದು ಎಂದು ಕೇಳಿದನು. ಆಗ ಆಕೆಯು - ಈ ಸ್ತ್ರೀಯು ನನಗೆ - ನಿನ್ನ ಮಗನನ್ನು ತೆಗೆದುಕೊಂಡು ಬಾ; ನಾವು ಈ ಹೊತ್ತು ಅವನನ್ನು ತಿಂದುಬಿಡೋಣ; ನಾಳೆ ನನ್ನ ಮಗನನ್ನು ತಿನ್ನೋಣ ಎಂದು ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅರಸನು ಅವಳಿಗೆ, “ನಿನ್ನ ದುಃಖವೇನು?” ಎಂದನು. ಅದಕ್ಕವಳು, “ಈ ಸ್ತ್ರೀಯು ನನಗೆ ಹೇಳಿದ್ದೇನೆಂದರೆ, ‘ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು, ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:28
15 ತಿಳಿವುಗಳ ಹೋಲಿಕೆ  

ರಾಜನಾದ ದಾವೀದನು ಅವಳಿಗೆ, “ನಿನ್ನ ಸಮಸ್ಯೆ ಏನು?” ಎಂದು ಕೇಳಿದನು. ಆ ಸ್ತ್ರೀಯು, “ನಾನೊಬ್ಬ ವಿಧವೆ. ನನ್ನ ಗಂಡನು ತೀರಿಕೊಂಡಿದ್ದಾನೆ.


ಆ ಸಮಯದಲ್ಲಿ, ಕನಿಕರವುಳ್ಳ ಸ್ತ್ರೀಯರು ಸಹ ತಮ್ಮ ಮಕ್ಕಳನ್ನೇ ಬೇಯಿಸಿ ತಿಂದುಬಿಟ್ಟರು. ಆ ಮಕ್ಕಳು ಅವರ ತಾಯಂದಿರಿಗೇ ಆಹಾರವಾದರು. ನನ್ನ ಜನರು ನಾಶಗೊಂಡಾಗ ಇದು ಸಂಭವಿಸಿತು.


ಅವರು ದಾನ್ಯರನ್ನು ಬೆನ್ನಟ್ಟಿಕೊಂಡು ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂತಿರುಗಿ ನೋಡಿ ಮೀಕನಿಗೆ, “ನಿನಗೇನಾಗಿದೆ? ಏಕೆ ಕೂಗಿಕೊಳ್ಳುತ್ತಿರುವೆ?” ಎಂದು ಕೇಳಿದರು.


‘ಬಂಜೆಯರೇ ಭಾಗ್ಯವಂತರು! ಹೆರದವಳೇ ಹಾಲುಕುಡಿಸದವಳೇ ಭಾಗ್ಯವಂತಳು’ ಎಂದು ಜನರು ಹೇಳುವ ಸಮಯ ಬರುತ್ತದೆ.


ಜೆರುಸಲೇಮಿನ ಜನರು ಹಸಿವೆ ತಾಳಲಾರದೆ ತಮ್ಮ ಸ್ವಂತ ಮಕ್ಕಳನ್ನು ಕಬಳಿಸುವರು ಮತ್ತು ಮಕ್ಕಳು ತಮ್ಮ ತಂದೆತಾಯಿಗಳನ್ನೇ ತಿನ್ನುವರು. ಬೇರೆಬೇರೆ ರೀತಿಯಲ್ಲಿ ನಾನು ನಿಮ್ಮನ್ನು ಶಿಕ್ಷಿಸುವೆನು. ಜೀವದಿಂದುಳಿದವರನ್ನು ನಾನು ಗಾಳಿಗೆ ತೂರಿಬಿಡುವೆನು.”


ಆದರೆ ನಾನು ಹೇಳುವುದೇನೆಂದರೆ, “ಒಬ್ಬ ತಾಯಿಯು ತನ್ನ ಮಗುವನ್ನು ಮರೆತಾಳೇ? ತಾನು ಹೆತ್ತ ಶಿಶುವನ್ನು ತಾಯಿಯು ಮರೆತುಬಿಡುವಳೇ? ಇಲ್ಲ. ಒಂದುವೇಳೆ ತಾಯಿ ತನ್ನ ಮಕ್ಕಳನ್ನು ಮರೆತಾಳು, ಆದರೆ ಯೆಹೋವನಾದ ನಾನು ನಿಮ್ಮನ್ನು ಮರೆಯುವದಿಲ್ಲ.


ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?


ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ?


ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು.


ನೀವು ಬಹಳವಾಗಿ ಹಸಿದು ನಿಮ್ಮ ಮಕ್ಕಳ ಮಾಂಸವನ್ನೇ ತಿನ್ನುವಿರಿ.


ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.


ಇಸ್ರೇಲಿನ ರಾಜನು, “ಯೆಹೋವನು ನಿನಗೆ ಸಹಾಯ ಮಾಡದಿದ್ದರೆ, ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನಗೆ ಕೊಡಲು ನನ್ನ ಬಳಿ ಏನೂ ಇಲ್ಲ; ಕಣದಲ್ಲಿ ಕಾಳುಗಳಿಲ್ಲ, ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಾರಸವಿಲ್ಲ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು