Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:29 - ಪರಿಶುದ್ದ ಬೈಬಲ್‌

29 ನಾವು ನನ್ನ ಮಗನನ್ನು ಬೇಯಿಸಿ, ನಾವು ತಿಂದು ಬಿಟ್ಟೆವು. ಮಾರನೆಯ ದಿನ ನಾನು ಈ ಸ್ತ್ರೀಗೆ, ‘ನಿನ್ನ ಮಗನನ್ನು ನಾವು ಕೊಂದು ತಿನ್ನೋಣ’ ಎಂದು ಹೇಳಿದೆನು. ಆದರೆ ಅವಳು ತನ್ನ ಮಗನನ್ನು ಅಡಗಿಸಿಟ್ಟಿದ್ದಾಳೆ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮರುದಿನ ನಾನು ಈಕೆಗೆ, ‘ಈ ದಿನ ನಿನ್ನ ಮಗನನ್ನು ತೆಗೆದುಕೊಂಡು ಬಾ; ಅವನನ್ನು ಕೊಂದು ತಿನ್ನೋಣ,’ ಎಂದಾಗ ಈಕೆ ಅವನನ್ನು ಎಲ್ಲಿಯೋ ಅಡಗಿಸಿಬಿಟ್ಟಳು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದುಬಿಟ್ಟೆವು. ಮರುದಿವಸ ನಾನು ಈಕೆಗೆ - ಈಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ; ಅವನನ್ನು ಕೊಂದು ತಿನ್ನೋಣ ಅಂದಾಗ ಈಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಹಾಗೆಯೇ ನಾವು ನನ್ನ ಮಗನನ್ನು ಬೇಯಿಸಿ ಅವನನ್ನು ತಿಂದೆವು. ಮಾರನೆಯ ದಿವಸದಲ್ಲಿ ನಾನು ಅವಳಿಗೆ, ‘ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು,’ ಎಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:29
9 ತಿಳಿವುಗಳ ಹೋಲಿಕೆ  

ವೈರಿಗಳು ನಿಮ್ಮ ಪಟ್ಟಣವನ್ನು ಮುತ್ತಿಗೆ ಹಾಕಿದಾಗ ನೀವು ಸಂಕಟ ಅನುಭವಿಸುವಿರಿ. ಆಗ ನೀವು ಊಟಕ್ಕೆ ಇಲ್ಲದೆ ತೊಂದರೆಗೊಳಗಾಗುವಿರಿ; ಹಸಿವು ತಾಳಲಾರದೆ ನಿಮ್ಮ ಮಕ್ಕಳನ್ನೇ ತಿನ್ನುವಿರಿ.


ನೀವು ಬಹಳವಾಗಿ ಹಸಿದು ನಿಮ್ಮ ಮಕ್ಕಳ ಮಾಂಸವನ್ನೇ ತಿನ್ನುವಿರಿ.


ಅವಳು ಅಡಗಿಕೊಂಡು ಮಗುವನ್ನು ಹೆರುವಳು. ಬಳಿಕ ಆ ಮಗುವನ್ನೂ ಅದರೊಡನೆ ಬರುವುದೆಲ್ಲವನ್ನೂ ಭಯಂಕರವಾದ ಹಸಿವೆಯಿಂದಾಗಿ ತಿಂದುಬಿಡುವಳು. ನಿಮ್ಮ ಶತ್ರುವು ಬಂದು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಸಂಕಟಕ್ಕೆ ಗುರಿ ಮಾಡಿದಾಗ ಈ ಕೆಟ್ಟ ಸಂಗತಿಗಳೆಲ್ಲಾ ನಿಮಗೆ ಸಂಭವಿಸುತ್ತವೆ.


ನಾನು ನಿಮ್ಮನ್ನು ಜೆರುಸಲೇಮಿನಲ್ಲಿ ಸಂತೈಸುವೆನು. ತಾಯಿಯು ತನ್ನ ಮಗುವನ್ನು ಸಂತೈಸುವಂತೆ ನಾನು ನಿಮ್ಮನ್ನು ಸಂತೈಸುವೆನು.”


ಆದರೆ ನಾನು ಹೇಳುವುದೇನೆಂದರೆ, “ಒಬ್ಬ ತಾಯಿಯು ತನ್ನ ಮಗುವನ್ನು ಮರೆತಾಳೇ? ತಾನು ಹೆತ್ತ ಶಿಶುವನ್ನು ತಾಯಿಯು ಮರೆತುಬಿಡುವಳೇ? ಇಲ್ಲ. ಒಂದುವೇಳೆ ತಾಯಿ ತನ್ನ ಮಕ್ಕಳನ್ನು ಮರೆತಾಳು, ಆದರೆ ಯೆಹೋವನಾದ ನಾನು ನಿಮ್ಮನ್ನು ಮರೆಯುವದಿಲ್ಲ.


ಆಗ ಎರಡನೆಯ ಸ್ತ್ರೀಯು, “ಈಗ ಸರಿಹೋಯಿತು. ಮಗುವನ್ನು ಎರಡು ಹೋಳುಮಾಡಿ. ಆಗ ನಮ್ಮಿಬ್ಬರಿಗೂ ಅವನಿರುವುದಿಲ್ಲ” ಎಂದಳು. ಆದರೆ ಮೊದಲನೆಯ ಸ್ತ್ರೀಯು, ಅಂದರೆ, ತನ್ನ ಮಗುವಿನ ಮೇಲೆ ತುಂಬಾ ಪ್ರೀತಿಯನ್ನಿಟ್ಟಿದ ನಿಜವಾದ ತಾಯಿಯು ರಾಜನಿಗೆ, “ದಯವಿಟ್ಟು ಆ ಮಗುವನ್ನು ಕೊಲ್ಲಬೇಡಿ ಸ್ವಾಮಿ! ಅವಳಿಗೇ ಕೊಟ್ಟುಬಿಡಿ” ಎಂದು ಹೇಳಿದಳು.


“ನೀವು ನನ್ನ ಮಾತನ್ನು ಇನ್ನೂ ಕೇಳದೆ ನನಗೆ ವಿರೋಧವಾಗಿ ನಡೆದರೆ,


“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.


ಆ ಸಮಯದಲ್ಲಿ, ಕನಿಕರವುಳ್ಳ ಸ್ತ್ರೀಯರು ಸಹ ತಮ್ಮ ಮಕ್ಕಳನ್ನೇ ಬೇಯಿಸಿ ತಿಂದುಬಿಟ್ಟರು. ಆ ಮಕ್ಕಳು ಅವರ ತಾಯಂದಿರಿಗೇ ಆಹಾರವಾದರು. ನನ್ನ ಜನರು ನಾಶಗೊಂಡಾಗ ಇದು ಸಂಭವಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು