Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:31 - ಪರಿಶುದ್ದ ಬೈಬಲ್‌

31 ಇದಲ್ಲದೆ ರಾಜನು, “ಈ ದಿನದ ಅಂತ್ಯದೊಳಗೆ ನಾನು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದ ಮೇಲೆ ಉಳಿಯುವಂತೆ ಮಾಡಿದರೆ ದೇವರು ನನ್ನನ್ನು ದಂಡಿಸಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇದಲ್ಲದೆ ಅವನು, “ನಾನು ಈ ದಿನ ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಆಣೆಯಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದಲ್ಲದೆ ಅವನು - ನಾನು ಈಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಎಂದು ಆಣೆಯಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಅವನು, “ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ, ದೇವರು ನನಗೆ ಇದರಂತೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:31
18 ತಿಳಿವುಗಳ ಹೋಲಿಕೆ  

ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಬೇಕು. ಈ ಪ್ರತಿಜ್ಞೆಯನ್ನು ನಾನು ಪೂರ್ಣಗೊಳಿಸದಿದ್ದರೆ ನನ್ನನ್ನು ಶಿಕ್ಷಿಸು ಎಂದು ನಾನು ಯೆಹೋವನಲ್ಲಿ ಕೇಳಿಕೊಳ್ಳುತ್ತೇನೆ. ಮರಣವು ಮಾತ್ರ ನಮ್ಮಿಬ್ಬರನ್ನು ಅಗಲಿಸಬಲ್ಲದು” ಎಂದು ದೃಢವಾಗಿ ಹೇಳಿದಳು.


ಇಡೀ ಜನಾಂಗವು ನಾಶವಾಗುವುದಕ್ಕಿಂತ ಒಬ್ಬನು ಅವರಿಗೋಸ್ಕರವಾಗಿ ಸಾಯುವುದು ಉತ್ತಮ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಹೇಳಿದನು.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.


ಅಹಾಬನು ಎಲೀಯನನ್ನು ಕಂಡು, “ಇಸ್ರೇಲಿಗೆ ತೊಂದರೆ ಕೊಡುವವನು ನೀನೇ ಅಲ್ಲವೇ?” ಎಂದನು.


ಆಗ ಸೊಲೊಮೋನನು, “ಯೆಹೋವನಾಣೆ, ಅದೋನೀಯನು ಈ ರೀತಿ ನನ್ನನ್ನು ಕೇಳಿದ್ದಕ್ಕಾಗಿ ಅವನು ತನ್ನ ಜೀವವನ್ನೇ ಬೆಲೆಯಾಗಿ ತೆರಬೇಕಾಗುವುದು!


ಅಲ್ಲದೆ ಅಮಾಸನಿಗೆ, ‘ನೀನು ನನ್ನ ಕುಟುಂಬದ ಒಂದು ಭಾಗವಾಗಿರುವೆ. ನಾನು ನಿನ್ನನ್ನು ಯೋವಾಬನ ಸ್ಥಾನದಲ್ಲಿ ಸೇನಾಪತಿಯನ್ನಾಗಿ ಮಾಡದೆ ಹೋದರೆ, ದೇವರು ನನ್ನನ್ನು ದಂಡಿಸಲಿ’ ಎಂದು ಹೇಳಿ” ಎಂದನು.


ಅಂದು ಹೊತ್ತು ಇಳಿಯುವ ಮೊದಲೇ ಜನರು ದಾವೀದನಿಗೆ ಊಟ ಮಾಡುವಂತೆ ಒತ್ತಾಯಿಸಿದರು. ಆದರೆ ದಾವೀದನು, “ಸೂರ್ಯನು ಮುಳುಗುವುದಕ್ಕೆ ಮುಂಚಿತವಾಗಿ ನಾನು ರೊಟ್ಟಿಯನ್ನಾಗಲಿ ಇತರ ಆಹಾರವನ್ನಾಗಲಿ ತಿಂದರೆ, ದೇವರು ನನ್ನನ್ನು ದಂಡಿಸಲಿ ಅಥವಾ ನನಗೆ ಕೇಡು ಬರಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.


ನಾಳೆ ಬೆಳಗಾಗುವುದರೊಳಗಾಗಿ ನಾಬಾಲನ ಕುಟುಂಬದಲ್ಲಿ ಒಬ್ಬರಾದರೂ ಜೀವದಿಂದ ಉಳಿದುಕೊಳ್ಳಲು ನಾನು ಅವಕಾಶಕೊಟ್ಟರೆ ದೇವರು ನನ್ನನ್ನು ದಂಡಿಸಲಿ” ಎಂದು ಹೇಳಿದ್ದನು.


ಸೌಲನು, “ನಾನು ನನ್ನ ಆಣೆಯನ್ನು ನೆರವೇರಿಸದಿದ್ದರೆ ಯೆಹೋವನು ಬಹುಶಃ ನನಗೆ ಬಹಳ ಕೆಟ್ಟದ್ದನ್ನು ಮಾಡಬಹುದು. ಯೋನಾತಾನನು ಸಾಯಲೇಬೇಕು” ಎಂದು ಹೇಳಿದನು.


ಏಲಿಯು, “ಯೆಹೋವನು ನಿನಗೆ ಹೇಳಿದ್ದೇನು? ನನ್ನೊಂದಿಗೆ ಅದನ್ನು ಮುಚ್ಚಿಡಬೇಡ. ಆತನು ನಿನ್ನೊಂದಿಗೆ ಆಡಿದ ಮಾತುಗಳಲ್ಲಿ ಏನನ್ನಾದರೂ ಮುಚ್ಚಿಟ್ಟರೆ ಆತನು ನಿನ್ನನ್ನು ಶಿಕ್ಷಿಸುತ್ತಾನೆ” ಎಂದು ತಿಳಿಸಿದನು.


ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”


ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,


ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು