Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:5 - ಪರಿಶುದ್ದ ಬೈಬಲ್‌

5 ಆದರೆ ಒಬ್ಬನು ಮರವೊಂದನ್ನು ಕಡಿದುರುಳಿಸಿದಾಗ, ಕಬ್ಬಿಣದ ಕೊಡಲಿಯು ಕಾವಿನಿಂದ ಕಳಚಿಕೊಂಡು ನೀರಿನೊಳಕ್ಕೆ ಬಿದ್ದುಬಿಟ್ಟಿತು. ಆ ಮನುಷ್ಯನು, “ಅಯ್ಯೋ, ಒಡೆಯನೇ! ನಾನು ಆ ಕೊಡಲಿಯನ್ನು ಎರವಲಾಗಿ ತಂದಿದ್ದೇನಲ್ಲಾ” ಎಂದು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದುದರಿಂದ ಅವನು, “ಅಯ್ಯೋ! ಗುರುವೇ, ನಾನು ಅದನ್ನು ಸಾಲವಾಗಿ ತಂದಿದ್ದೆ,” ಎಂದು ಸಂತಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಒಬ್ಬನ ಕೊಡಲಿಯು ಕಾವು ತಪ್ಪಿ ನೀರೊಳಗೆ ಬಿದ್ದಿತು. ಆದದರಿಂದ ಅವನು - ಅಯ್ಯೋ, ಸ್ವಾಮೀ, ನಾನು ಅದನ್ನು ಎರವಾಗಿ ತಂದಿದ್ದೆನು ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಒಬ್ಬನು ಮರವನ್ನು ಬೀಳಿಸುವಾಗ ಕೊಡಲಿಯು ನೀರಿನೊಳಕ್ಕೆ ಬಿತ್ತು. ಆಗ ಅವನು, “ಅಯ್ಯೋ! ಯಜಮಾನನೇ, ನಾನು ಅದನ್ನು ಸಾಲವಾಗಿ ತೆಗೆದುಕೊಂಡದ್ದು,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:5
12 ತಿಳಿವುಗಳ ಹೋಲಿಕೆ  

ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’


ಮೊಂಡಕತ್ತಿಯನ್ನು ಹರಿತಗೊಳಿಸಿದರೆ ಕೆಲಸ ಸುಲಭವಾಗುವಂತೆಯೇ ಜ್ಞಾನವು ಯಾವ ಕೆಲಸವನ್ನಾದರೂ ಸುಲಭಗೊಳಿಸಬಲ್ಲದು.


ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ. ನೀತಿವಂತನಾದರೋ ಬೇರೆಯವರಿಗೆ ಉದಾರವಾಗಿ ಕೊಡುವನು.


ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೇ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! ಆ ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು.


ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ‘ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!


ಅವರು ದುಃಖದಿಂದ ಗೋಳಾಡುತ್ತಾ ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ! ಅವಳು ನಯವಾದ ನಾರುಮಡಿಯನ್ನು, ಧೂಮ್ರವರ್ಣದ ಉಡುಪನ್ನು ಮತ್ತು ರಕ್ತಾಂಬರಗಳನ್ನು ಧರಿಸಿದ್ದಳು. ಅವಳು ಚಿನ್ನ, ರತ್ನ, ಮುತ್ತುಗಳಿಂದ ಶೋಭಿಸುತ್ತಿದ್ದಳು!


ಆಗ ಆ ಸ್ತ್ರೀಯು ದೇವರ ಮನುಷ್ಯನ (ಎಲೀಷನ) ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಎಲೀಷನು ಅವಳಿಗೆ, “ಹೋಗು, ಎಣ್ಣೆಯನ್ನು ಮಾರಾಟಮಾಡಿ, ನಿನ್ನ ಸಾಲವನ್ನು ತೀರಿಸು. ಉಳಿದ ಹಣದಲ್ಲಿ ನೀನು ಮತ್ತು ನಿನ್ನ ಮಕ್ಕಳು ಜೀವನಮಾಡಿ” ಎಂದು ಹೇಳಿದನು.


ಆಗ ಇಸ್ರೇಲಿನ ರಾಜನಾದ ಯೋರಾಮನು, “ಅಯ್ಯೋ, ಮೂವರು ರಾಜರಾದ ನಮ್ಮನ್ನು ನಿಜವಾಗಿಯೂ ಒಟ್ಟಿಗೆ ಬರಮಾಡಿದ ಯೆಹೋವನು ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದನಲ್ಲಾ!” ಎಂದು ಹೇಳಿದನು.


ಯೆಹೋವನು ತನ್ನ ಕೊಡಲಿಯಿಂದ ಅಡವಿಯನ್ನು ಕಡಿದುಹಾಕುವನು. ಲೆಬನೋನಿನ ಉನ್ನತ ಮರಗಳು (ಪ್ರಮುಖರು) ಉರುಳಿಬೀಳುವವು.


ಎಲೀಷನು ಪ್ರವಾದಿಗಳ ಗುಂಪಿನೊಂದಿಗೆ ಹೋದನು. ಅವರು ಜೋರ್ಡನ್ ನದಿಯ ಬಳಿಗೆ ಬಂದು ಕೆಲವು ಮರಗಳನ್ನು ಕಡಿಯಲಾರಂಭಿಸಿದರು.


ದೇವಮನುಷ್ಯನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು. ಆ ಮನುಷ್ಯನು ಕೊಡಲಿಯು ಬಿದ್ದ ಸ್ಥಳವನ್ನು ಎಲೀಷನಿಗೆ ತೋರಿಸಿದನು. ಆಗ ಎಲೀಷನು ಒಂದು ಕಡ್ಡಿಯನ್ನು ಮುರಿದು ಅದನ್ನು ನೀರಿನೊಳಕ್ಕೆ ಎಸೆದನು. ಆ ಕಡ್ಡಿಯು ಕಬ್ಬಿಣದ ಕೊಡಲಿಯನ್ನು ತೇಲುವಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು