Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:16 - ಪರಿಶುದ್ದ ಬೈಬಲ್‌

16 ಆಗ ಜನರು ಅರಾಮ್ಯರ ಪಾಳೆಯಕ್ಕೆ ಓಡುತ್ತಾ ಹೋಗಿ, ಅಲ್ಲಿನ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಪ್ರತಿಯೊಬ್ಬರಿಗೂ ಹೇರಳವಾಗಿ ದೊರೆಯಿತು. ಯೆಹೋವನು ಹೇಳಿದಂತೆಯೇ ಇದಾಯಿತು. ಒಬ್ಬನು ಉತ್ತಮವಾದ ಒಂದು ಬುಟ್ಟಿ ಹಿಟ್ಟನ್ನು ಮತ್ತು ಎರಡು ಬುಟ್ಟಿ ಜವೆಗೋಧಿಯನ್ನು ಕೇವಲ ಒಂದು ರೂಪಾಯಿಗೆ ಕೊಳ್ಳಬಹುದಾಗಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಜನರು ಹೊರಗೆ ಹೋಗಿ, ಸಿರಿಯಾದವರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಸರ್ವೇಶ್ವರನ ಮಾತಿನಂತೆ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲಿದುಕೊಂಡರು. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರವೇ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೂ, ಆರು ಕಿಲೋಗ್ರಾಂ ಜವೆಗೋಧಿಯು ಒಂದು ಬೆಳ್ಳಿ ನಾಣ್ಯಕ್ಕೂ ಮಾರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:16
14 ತಿಳಿವುಗಳ ಹೋಲಿಕೆ  

ಎಲೀಷನು ಅವನಿಗೆ, “ಯೆಹೋವನ ಸಂದೇಶವನ್ನು ಕೇಳು: ‘ನಾಳೆ ಇದೇ ಸಮಯಕ್ಕೆ, ಅಧಿಕವಾದ ಆಹಾರವು ಬಹಳ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರ ಬಾಗಿಲಿನಲ್ಲಿರುವ ಮಾರುಕಟ್ಟೆಯಲ್ಲಿ ಮಾರಲಾಗುವುದು’” ಎಂದನು.


ನೀವು ಯುದ್ಧದಲ್ಲಿ ದೋಚಿಕೊಂಡಿದ್ದೀರಿ. ಅವುಗಳು ನಿಮ್ಮಿಂದ ತೆಗೆಯಲ್ಪಡುವವು. ಅನೇಕಾನೇಕ ಜನರು ಬಂದು ನಿಮ್ಮ ಸಂಪತ್ತನ್ನು ದೋಚಿಕೊಳ್ಳುವರು. ಮಿಡತೆಗಳು ನಿಮ್ಮ ಬೆಳೆಯನ್ನು ತಿಂದು ನಾಶಮಾಡಿದಂತೆ ಅದಿರುವದು.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.


ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:


“ಬಲಿಷ್ಠ ರಾಜರುಗಳ ಸೈನ್ಯಗಳು ಓಡಿಹೋಗುತ್ತಿವೆ! ಸೈನಿಕರು ಯುದ್ಧದಿಂದ ತಂದ ಕೊಳ್ಳೆವಸ್ತುಗಳನ್ನು ಮನೆಯಲ್ಲಿದ್ದ ಸ್ತ್ರೀಯರು ಹಂಚಿಕೊಳ್ಳುವರು.


ಯೆಹೋಷಾಫಾಟನೂ ಅವನ ಸೈನಿಕರೂ ಬಂದು ಸತ್ತವರ ದೇಹದಿಂದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಅವರು ಅನೇಕ ಪಶುಗಳನ್ನು, ಐಶ್ವರ್ಯವನ್ನು, ಬಟ್ಟೆಬರೆಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು. ಯೆಹೋಷಾಫಾಟನು ಮತ್ತು ಅವನ ಜನರು ಹೊತ್ತುಕೊಂಡು ಹೋಗಲಾರದಷ್ಟು ವಸ್ತುಗಳಿದ್ದವು; ಅವುಗಳನ್ನು ಶೇಖರಿಸಲು ಮೂರು ದಿವಸಗಳು ಬೇಕಾಯಿತು.


ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿದ್ದ ಇಸ್ರೇಲರು ಫಿಲಿಷ್ಟಿಯರ ಪಾಳೆಯಕ್ಕೆ ನುಗ್ಗಿ ಅವರ ಪಾಳೆಯದಲ್ಲಿದ್ದ ಅನೇಕ ವಸ್ತುಗಳನ್ನು ವಶಪಡಿಸಿಕೊಂಡರು.


ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ಅವರು ಅರಾಮ್ಯರ ಸೇನೆಗಾಗಿ ಹುಡುಕಿಕೊಂಡು ಜೋರ್ಡನ್ ನದಿಯವರೆಗೂ ಹೋದರು. ರಸ್ತೆಯ ದಾರಿಯಲ್ಲೆಲ್ಲಾ ಬಟ್ಟೆಗಳು ಮತ್ತು ಆಯುಧಗಳು ಬಿದ್ದಿದ್ದವು. ಅರಾಮ್ಯರು ಆತುರಾತುರವಾಗಿ ಹೋಗುವಾಗ ಅವುಗಳನ್ನೆಲ್ಲಾ ಬಿಸಾಡಿ ಹೋಗಿದ್ದರು. ಸಂದೇಶಕರು ಸಮಾರ್ಯಕ್ಕೆ ಹಿಂದಿರುಗಿ ಬಂದು ರಾಜನಿಗೆ ವಿಷಯವನ್ನು ಹೇಳಿದರು.


ಕುರಿಹಟ್ಟಿಯೊಳಗೆ ಇದ್ದವರೂ ಐಶ್ವರ್ಯವನ್ನು ಪಾಲುಮಾಡಿಕೊಳ್ಳುವರು. ಬಂಗಾರದ ಗರಿಗಳಿಂದ ಥಳಥಳಿಸುವ ಬೆಳ್ಳಿ ಹೊದಿಸಿರುವ ಪಾರಿವಾಳದ ರೆಕ್ಕೆಗಳನ್ನು ಅವರು ಪಡೆದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು