Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:3 - ಪರಿಶುದ್ದ ಬೈಬಲ್‌

3 ನಗರದ ಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು, “ನಾವು ಸಾಯುವುದನ್ನೇ ಕಾಯುತ್ತಾ ಕುಳಿತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಊರುಬಾಗಿಲಿನ ಹತ್ತಿರ ನಾಲ್ಕುಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೇ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಊರುಬಾಗಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ - ನಾವು ಸಾಯುವ ತನಕ ಇಲ್ಲೇ ಕೂತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಊರು ಬಾಗಿಲ ದ್ವಾರದಲ್ಲಿ ನಾಲ್ಕು ಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರು, “ನಾವು ಸಾಯುವವರೆಗೂ ಇಲ್ಲಿ ಕುಳಿತುಕೊಂಡಿರುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:3
9 ತಿಳಿವುಗಳ ಹೋಲಿಕೆ  

ಸಮಾರ್ಯದಲ್ಲಿ ಆಹಾರವು ಇಲ್ಲವೇ ಇಲ್ಲ. ನಾವು ನಗರದ ಒಳಗೆ ಹೋದರೆ, ನಾವು ಅಲ್ಲೇ ಸಾಯುತ್ತೇವೆ. ನಾವು ಇಲ್ಲೇ ಕುಳಿತಿದ್ದರೂ, ಸಾಯುವುದು ನಿಶ್ಚಿತ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ. ಅವರು ನಮ್ಮನ್ನು ಬದುಕಿಸಿದರೆ ನಾವು ಬದುಕೋಣ. ಅವರು ನಮ್ಮನ್ನು ಕೊಂದರೆ ಸಾಯೋಣ” ಎಂದು ಮಾತನಾಡಿಕೊಂಡರು.


ಅದಕ್ಕೆ ಯೆಹೋವನು, “ಆಕೆಯ ತಂದೆ ಮುಖದ ಮೇಲೆ ಉಗುಳಿದ್ದರೆ ಆಕೆ ಏಳು ದಿವಸ ನಾಚಿಕೆಯಿಂದ ಇರುತ್ತಿರಲಿಲ್ಲವೇ? ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು. ತರುವಾಯ ಆಕೆ ಪಾಳೆಯದೊಳಗೆ ಬರಬಹುದು” ಎಂದು ಉತ್ತರಿಸಿದನು.


ಬಾಬಿಲೋನಿನ ರಾಜನ ಸೇವೆಮಾಡಲು ಒಪ್ಪದಿದ್ದರೆ ನೀನು ಮತ್ತು ನಿನ್ನ ಜನರು ವೈರಿಗಳ ಖಡ್ಗದಿಂದಲೂ ಹಸಿವೆಯಿಂದಲೂ ಭಯಂಕರವಾದ ವ್ಯಾಧಿಗಳಿಂದಲೂ ಸಾಯುವಿರಿ. ಇದು ನೆರವೇರುತ್ತದೆಯೆಂದು ಯೆಹೋವನು ಹೇಳಿದ್ದಾನೆ.


“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.


ಆ ಸಮಯದಲ್ಲಿ ರಾಜನು ದೇವಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡುತ್ತಿದ್ದನು. ರಾಜನು ಗೇಹಜಿಗೆ, “ಎಲೀಷನು ಮಾಡಿರುವ ಮಹತ್ಕಾರ್ಯಗಳೆಲ್ಲವುಗಳನ್ನು ನನಗೆ ದಯವಿಟ್ಟು ತಿಳಿಸು” ಎಂದು ಕೇಳಿದನು.


ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಾಮುಖ್ಯ ವ್ಯಕ್ತಿಯಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದುಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು.


ಮೇಘವು ಗುಡಾರದಿಂದ ಮೇಲಕ್ಕೆ ಎದ್ದಿತು. ಆರೋನನು ಹಿಂತಿರುಗಿ ಮಿರ್ಯಾಮಳನ್ನು ನೋಡಿದನು. ಆಕೆಯ ಚರ್ಮವು ಹಿಮದಂತೆ ಬೆಳ್ಳಗಾಗಿತ್ತು. ಆಕೆಗೆ ಭಯಂಕರವಾದ ಚರ್ಮರೋಗ ಹಿಡಿದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು