Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:5 - ಪರಿಶುದ್ದ ಬೈಬಲ್‌

5 ಅಂದು ಸಂಜೆ ಆ ನಾಲ್ವರು ಕುಷ್ಠರೋಗಿಗಳು ಅರಾಮ್ಯರ ಪಾಳೆಯಕ್ಕೆ ಹೋದರು. ಅವರು ಪಾಳೆಯದ ಹೊರ ಅಂಚಿಗೆ ಬಂದರು. ಅಲ್ಲಿ ಜನರೇ ಇರಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಾಯಂಕಾಲವಾದಾಗ ಅವರು ಸಿರಿಯಾದವರ ಪಾಳೆಯಕ್ಕೆ ಹೊರಟರು; ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಗೆಯೇ ಸಂಜೆಯಲ್ಲಿ ಎದ್ದು, ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ, ಅಲ್ಲಿ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:5
10 ತಿಳಿವುಗಳ ಹೋಲಿಕೆ  

“ವೈರಿಗಳು ನಿಮ್ಮೆದುರಾಗಿ ಯುದ್ಧಮಾಡಲು ಬಂದಾಗ ನಿಮಗೆ ಆತನು ಸಹಾಯ ಮಾಡುವನು. ವೈರಿಗಳು ಒಂದು ದಿಕ್ಕಿನಿಂದ ಬಂದರೆ ಏಳು ದಾರಿಯಲ್ಲಿ ಪಲಾಯನ ಮಾಡುವರು.


ನಿಮ್ಮ ನಾಯಕನು ಗೋಡೆಯಲ್ಲಿ ರಂಧ್ರ ಮಾಡಿ ರಾತ್ರಿ ಕಾಲದಲ್ಲಿ ಅದರಲ್ಲಿ ನುಸುಳಿ ಪಾರಾಗುವನು. ಜನರು ತನ್ನನ್ನು ಗುರುತಿಸದಂತೆ ತನ್ನ ಮುಖವನ್ನು ಮುಚ್ಚಿಕೊಳ್ಳುವನು. ಅವನು ಯಾವ ಕಡೆಗೆ ಹೋಗುತ್ತಿದ್ದಾನೆಂದು ಅವನ ಕಣ್ಣುಗಳಿಗೆ ಕಾಣಿಸದು.


ದಾವೀದನು ಅವರನ್ನು ಸೋಲಿಸಿ ಅವರನ್ನು ಕೊಂದನು. ಅವರು ಹೊತ್ತಾರೆಯಿಂದ ಮಾರನೆಯ ದಿನದ ಸಂಜೆಯವರೆಗೆ ಹೋರಾಡಿದರು. ನಾನೂರು ಮಂದಿ ಯುವಕರು ತಮ್ಮ ಒಂಟೆಗಳ ಮೇಲೇರಿ ಓಡಿಹೋದದ್ದನ್ನು ಬಿಟ್ಟರೆ, ಉಳಿದ ಅಮಾಲೇಕ್ಯರಲ್ಲಿ ಯಾರೂ ತಪ್ಪಿಸಿಕೊಳ್ಳಲಾಗಲಿಲ್ಲ.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.


“ಜನರು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ದನಗಳನ್ನು ಮತ್ತು ಕುರಿಗಳನ್ನು ಕೊಡಬಹುದು. ಆದರೆ ಪಶುವು ಚೊಚ್ಚಲಾದದ್ದಾಗಿದ್ದರೆ, ಅದು ಈಗಾಗಲೇ ಯೆಹೋವನದ್ದಾಗಿರುತ್ತದೆ. ಆದ್ದರಿಂದ ಜನರು ಅಂಥ ಪಶುಗಳನ್ನು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ಕೊಡಲಾಗುವುದಿಲ್ಲ.


“ಒಬ್ಬನು ಬೆಲೆಯನ್ನು ಕೊಡಲಾಗದಷ್ಟು ಬಡವನಾಗಿದ್ದರೆ, ಅವನನ್ನು ಯಾಜಕನ ಬಳಿಗೆ ತನ್ನಿರಿ. ಅವನು ಎಷ್ಟು ಹಣ ಕೊಡಲು ಶಕ್ತನಾಗಿದ್ದಾನೆಂದು ಯಾಜಕನು ತೀರ್ಮಾನಿಸುವನು.


ಸಮಾರ್ಯದಲ್ಲಿ ಆಹಾರವು ಇಲ್ಲವೇ ಇಲ್ಲ. ನಾವು ನಗರದ ಒಳಗೆ ಹೋದರೆ, ನಾವು ಅಲ್ಲೇ ಸಾಯುತ್ತೇವೆ. ನಾವು ಇಲ್ಲೇ ಕುಳಿತಿದ್ದರೂ, ಸಾಯುವುದು ನಿಶ್ಚಿತ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ. ಅವರು ನಮ್ಮನ್ನು ಬದುಕಿಸಿದರೆ ನಾವು ಬದುಕೋಣ. ಅವರು ನಮ್ಮನ್ನು ಕೊಂದರೆ ಸಾಯೋಣ” ಎಂದು ಮಾತನಾಡಿಕೊಂಡರು.


ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು