Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:7 - ಪರಿಶುದ್ದ ಬೈಬಲ್‌

7 ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಒಂದಾನೊಂದು ಸಮಯದಲ್ಲಿ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೇವರ ಮನುಷ್ಯನು ಬಂದಿದ್ದಾನೆಂಬ ವರ್ತಮಾನವನ್ನು ಕೇಳಿ ಅವನು ಹಜಾಯೇಲನನ್ನು ಕರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅರಾಮಿನ ಅರಸನಾದ ಬೆನ್ಹದದನು ಅಸ್ವಸ್ಥನಾಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. “ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆ,” ಎಂದು ಅವನಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:7
18 ತಿಳಿವುಗಳ ಹೋಲಿಕೆ  

ಇದಾದನಂತರ, ಅರಾಮ್ಯರ ರಾಜನಾದ ಬೆನ್ಹದದನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿಕೊಂಡು, ಸಮಾರ್ಯವನ್ನು ಸುತ್ತುವರಿದು ಆಕ್ರಮಣಮಾಡಲು ಹೋದನು.


ದಾವೀದನು ಚೋಬದ ಸೈನ್ಯವನ್ನು ಸೋಲಿಸಿದ ಬಳಿಕ, ರೆಜೋನನು ಕೆಲವು ಜನರನ್ನು ಒಟ್ಟುಗೂಡಿಸಿಕೊಂಡು, ಆ ಕಿರುಸೇನೆಗೆ ತಾನೇ ನಾಯಕನಾದನು. ರೆಜೋನನು ದಮಸ್ಕಕ್ಕೆ ಹೋಗಿ ಅಲ್ಲಿಯೇ ನೆಲೆಸಿದನು. ರೆಜೋನನು ದಮಸ್ಕದ ರಾಜನಾದನು.


ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು.


ಆದರೆ ಅವರು ಪೌಲ ಸೀಲರನ್ನು ಅಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ಯಾಸೋನನನ್ನೂ ಕೆಲವು ವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುಕೊಂಡು ಬಂದು, “ಈ ಜನರು (ಪೌಲ ಸೀಲರು) ಪ್ರಪಂಚದ ಎಲ್ಲಾ ಕಡೆಗಳಲ್ಲೂ ಗಲಭೆಯನ್ನು ಉಂಟುಮಾಡಿ ಈಗ ಇಲ್ಲಿಗೂ ಬಂದಿದ್ದಾರೆ!


ದಮಸ್ಕದಲ್ಲಿ ರೆಚೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು.


ಅರಾಮ್ಯರ ರಾಜನ ಅಧಿಕಾರಿಗಳಲ್ಲೊಬ್ಬನು, “ನನ್ನ ಒಡೆಯನೇ, ರಾಜನೇ, ನಮ್ಮಲ್ಲಿ ಯಾರೊಬ್ಬರೂ ಗೂಢಚಾರರಲ್ಲ. ಇಸ್ರೇಲಿನ ಪ್ರವಾದಿಯಾದ ಎಲೀಷನು ಅನೇಕ ರಹಸ್ಯ ಸಂಗತಿಗಳನ್ನು ಅಂದರೆ ನೀವು ನಿಮ್ಮ ಮಲಗುವ ಕೊಠಡಿಯಲ್ಲಿ ಮಾತನಾಡುವುದನ್ನೂ ಸಹ ಇಸ್ರೇಲಿನ ರಾಜನಿಗೆ ತಿಳಿಸಬಲ್ಲವನಾಗಿದ್ದಾನೆ!” ಎಂದು ಹೇಳಿದನು.


ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.


ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.


ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.


ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.


ಆ ರಾತ್ರಿ ಅವನು ಮತ್ತು ಅವನ ಸೇವಕರು ಹಠಾತ್ತನೆ ಶತ್ರುಗಳನ್ನು ಎದುರಿಸಿ ಸೋಲಿಸಿದರು; ದಮಸ್ಕಕ್ಕೆ ಉತ್ತರದಲ್ಲಿರುವ ಹೋಬಾದವರೆಗೂ ಹಿಂದಟ್ಟಿದರು.


ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.


ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,


ರಾಜನು ಆ ಸ್ತ್ರೀಯನ್ನು ಕೇಳಿದಾಗ, ಅವಳು ತನಗೆ ಸಂಭವಿಸಿದ್ದನ್ನು ಮತ್ತು ತನಗಿದ್ದ ಇಚ್ಛೆಯನ್ನು ತಿಳಿಸಿದಳು. ಆಗ ರಾಜನು ಅವಳಿಗೆ ಸಹಾಯಮಾಡಲು ಒಬ್ಬ ಅಧಿಕಾರಿಯನ್ನು ಕರೆದು, “ಅವಳಿಗೆ ಸೇರಬೇಕಾದ ಆಸ್ತಿಯೆಲ್ಲವನ್ನೂ ಆಕೆಗೆ ಕೊಡಿಸು. ಅವಳು ದೇಶವನ್ನು ಬಿಟ್ಟಂದಿನಿಂದ ಈವರೆಗಿನ ಆಕೆಯ ಭೂಮಿಯ ಉತ್ಪಾದನೆಯನ್ನೂ ಅವಳಿಗೆ ಕೊಡಿಸು” ಎಂದು ಹೇಳಿದನು.


ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನ್ನ ಮನಸ್ಸು ಬಂದಲ್ಲಿಗೆ ಹೋಗು.” ತರುವಾಯ ನೆಬೂಜರದಾನನು ಯೆರೆಮೀಯನಿಗೆ ಊಟವನ್ನೂ ಕಾಣಿಕೆಯನ್ನೂ ಕೊಟ್ಟು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು