Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:8 - ಪರಿಶುದ್ದ ಬೈಬಲ್‌

8 ಆಗ ರಾಜನಾದ ಬೆನ್ಹದದನು ಹಜಾಯೇಲನಿಗೆ, “ದೇವಮನುಷ್ಯನನ್ನು ಕಾಣಲು ಒಂದು ಕಾಣಿಕೆಯನ್ನು ತೆಗೆದುಕೊಂಡು ಹೋಗು. ನಾನು ನನ್ನ ಕಾಯಿಲೆಯಿಂದ ಗುಣವಾಗುತ್ತೇನೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಅವನು ಯೆಹೋವನಲ್ಲಿ ಪ್ರಾರ್ಥಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅರಸನು ಹಜಾಯೇಲನಿಗೆ, “ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಹಜಾಯೇಲನನ್ನು ಕರೆದು, “ನೀನು ಕಾಣಿಕೆಯನ್ನು ತೆಗೆದುಕೊಂಡು ದೈವಪುರುಷನ ಬಳಿಗೆ ಹೋಗಿ ನನಗೆ ಗುಣ ಆಗುವುದೋ ಇಲ್ಲವೋ ಎಂಬುದನ್ನು ಅವನ ಮುಖಾಂತರ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನಿಗೆ - ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವದೋ ಇಲ್ಲವೋ ಎಂಬದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅರಸನು ಹಜಾಯೇಲನಿಗೆ, “ನೀನು ಕೈಯಲ್ಲಿ ಕಾಣಿಕೆಯನ್ನು ತೆಗೆದುಕೊಂಡುಹೋಗಿ ದೇವರ ಮನುಷ್ಯನನ್ನು ಎದುರುಗೊಂಡು, ಈ ವ್ಯಾಧಿಯಿಂದ ನಾನು ಗುಣವಾಗುವೆನೋ? ಎಂದು ಅವನಿಂದ ಯೆಹೋವ ದೇವರನ್ನು ವಿಚಾರಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:8
11 ತಿಳಿವುಗಳ ಹೋಲಿಕೆ  

ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.


ಯೆಹೋವನು, “ನೀನು ಬಂದ ದಾರಿಯಿಂದ ಹಿಂತಿರುಗಿ ದಮಸ್ಕದ ಅರಣ್ಯಕ್ಕೆ ಹೋಗು. ಅಲ್ಲಿಂದ ದಮಸ್ಕಕ್ಕೆ ಹೋಗಿ, ಹಜಾಯೇಲನನ್ನು ಅರಾಮ್ಯರ ರಾಜನನ್ನಾಗಿ ಅಭಿಷೇಕಿಸು.


ಸೌಲನು ತನ್ನ ಸೇವಕನಿಗೆ, “ನಾವು ಪಟ್ಟಣದೊಳಗೆ ಹೋಗೋಣ, ಆದರೆ ಆ ಮನುಷ್ಯನಿಗೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ನಮ್ಮ ಚೀಲದಲ್ಲಿದ್ದ ಆಹಾರವೆಲ್ಲ ಮುಗಿದಿದೆ. ಆ ದೇವರ ಮನುಷ್ಯನಿಗೆ ನೀಡಲು ನಮ್ಮಲ್ಲಿ ಕಾಣಿಕೆಯೂ ಇಲ್ಲ. ಹೀಗಾಗಿ ನಾವು ಅವನಿಗೆ ಏನು ಕೊಡಬೇಕು?” ಎಂದು ಕೇಳಿದನು.


ಬಳಿಕ ಅವನು ಅವರನ್ನು ಹೊರಗೆ ಕರೆದುಕೊಂಡು ಬಂದು, “ಸ್ವಾಮಿಗಳೇ, ನಾನು ರಕ್ಷಣೆ ಹೊಂದಬೇಕಾದರೆ ಏನು ಮಾಡಬೇಕು?” ಎಂದು ಕೇಳಿದನು.


ಯಾರೋ ಒಬ್ಬನು ಯೇಸುವಿಗೆ, “ಸ್ವಾಮೀ, ಎಷ್ಟು ಜನರು ರಕ್ಷಿಸಲ್ಪಡುವರು? ಕೇವಲ ಸ್ವಲ್ಪ ಜನರೋ?” ಎಂದು ಕೇಳಿದನು. ಅದಕ್ಕೆ ಯೇಸು,


ಆಗ ಅರಾಮ್ಯರ ರಾಜನು, “ಈಗಲೇ ಹೋಗು, ನಾನು ಇಸ್ರೇಲಿನ ರಾಜನಿಗೆ ಪತ್ರವೊಂದನ್ನು ಕಳುಹಿಸುತ್ತೇನೆ” ಎಂದು ಹೇಳಿದನು. ನಾಮಾನನು ಇಸ್ರೇಲಿಗೆ ಹೋದನು. ನಾಮಾನನು ಮುನ್ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಆರುಸಾವಿರ ಚಿನ್ನದ ನಾಣ್ಯಗಳನ್ನು ಮತ್ತು ಹತ್ತು ಥಾನು ಬಟ್ಟೆಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಹೋದನು.


ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!’” ಎಂಬುದಾಗಿ ಹೇಳಿದರು.


ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ.


ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನುತ್ತಾನೆ.” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು