Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:32 - ಪರಿಶುದ್ದ ಬೈಬಲ್‌

32 ಯೇಹು ಕಿಟಕಿಯ ಕಡೆ ಮೇಲೆ ನೋಡಿದನು. ಅವನು, “ನನ್ನ ಪಕ್ಷದಲ್ಲಿರುವವರು ಯಾರು? ಯಾರಿದ್ದೀರಿ?” ಎಂದನು. ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಯೇಹುವಿನತ್ತ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರು?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ - ಅಲ್ಲಿ ನನ್ನ ಪಕ್ಷದವರು ಯಾರು ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:32
13 ತಿಳಿವುಗಳ ಹೋಲಿಕೆ  

ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.


ಯೆಹೋವನು ನನ್ನೊಂದಿಗಿದ್ದಾನೆ, ಆದ್ದರಿಂದ ನಾನು ಭಯಪಡುವುದಿಲ್ಲ. ಮನುಷ್ಯರು ನನಗೇನು ಮಾಡಬಲ್ಲರು?


ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿ ಕುಳಿತುಕೊಂಡಿದ್ದ ಸಮಯದಲ್ಲಿ ಒಂದು ವಿಷಯ ನಡೆಯಿತು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ಅರಸನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಲು ಒಳಸಂಚು ಮಾಡುತ್ತಿದ್ದರು.


ರಾಜನ ಬಳಿಗೆ ಹೋಗಲು ಎಸ್ತೇರಳ ಸರದಿ ಬಂದಾಗ ಆಕೆ ಏನನ್ನೂ ಕೇಳಿಕೊಳ್ಳಲಿಲ್ಲ. ತಾನು ಏನನ್ನು ತೆಗೆದುಕೊಂಡು ಹೋಗಬೇಕೆಂದು ರಾಜನ ಸ್ತ್ರೀಯರ ಮೇಲ್ವಿಚಾರಕನಾಗಿದ್ದ ರಾಜಕಂಚುಕಿ ಹೇಗೈನನ್ನು ಮಾತ್ರ ಕೇಳಿದಳು. (ಎಸ್ತೇರಳು ಮೊರ್ದೆಕೈಯ ಚಿಕ್ಕಪ್ಪ ಅಭೀಹೈಲನ ಮಗಳೂ ತನ್ನ ಸಾಕು ಮಗಳೂ ಆಗಿದ್ದಳು.) ಎಸ್ತೇರಳನ್ನು ನೋಡಿದವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.


ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.


ಪ್ರತಿಯೊಂದು ಪಟ್ಟಣದಲ್ಲಿಯೂ ಈಟಿಗಳನ್ನು ಮತ್ತು ಗುರಾಣಿಗಳನ್ನು ಸಂಗ್ರಹಿಸಿಟ್ಟನು; ಹೀಗೆ ಈ ಎಲ್ಲಾ ಪಟ್ಟಣಗಳನ್ನು ಭದ್ರಪಡಿಸಿದನು. ರೆಹಬ್ಬಾಮನು ಯೆಹೂದದ ಮತ್ತು ಬೆನ್ಯಾಮೀನನ ಜನರನ್ನು ಮತ್ತು ಪಟ್ಟಣಗಳನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಂಡನು.


ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.


ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, “ಯೆಹೋವನ ಪಕ್ಷದವರು ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು.


ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜೆಬೆಲಳನ್ನು ನಾನು ಈ ರೀತಿ ಶಿಕ್ಷಿಸುತ್ತೇನೆ.


ಯೇಹು ನಗರದೊಳಕ್ಕೆ ಪ್ರವೇಶಿಸಿದನು. ಈಜೆಬೆಲಳು, “ಜಿಮ್ರಿ, ಕ್ಷೇಮವೇ! ಅವನಂತೆಯೇ ನೀನೂ ನಿನ್ನ ಒಡೆಯನನ್ನು ಕೊಂದುಹಾಕಿದೆ!” ಎಂದಳು.


ಯೇಹುವು “ಈಜೆಬೆಲಳನ್ನು ಹೊರಕ್ಕೆ ಎಸೆಯಿರಿ!” ಎಂದು ಅವರಿಗೆ ಹೇಳಿದನು. ಆಗ ಕಂಚುಕಿಗಳು ಈಜೆಬೆಲಳನ್ನು ಕೆಳಕ್ಕೆ ಎಸೆದರು. ಈಜೆಬೆಲಳ ರಕ್ತವು ಗೋಡೆಗಳ ಮೇಲೆ ಮತ್ತು ಕುದುರೆಗಳ ಮೇಲೆ ಚಿಮ್ಮಿತು. ಕುದುರೆಗಳು ಈಜೆಬೆಲಳ ದೇಹದ ಮೇಲೆ ತುಳಿದಾಡಿದವು.


ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು