Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:18 - ಪರಿಶುದ್ದ ಬೈಬಲ್‌

18 ನೀವು ದೇವರನ್ನು ನಂಬಬಲ್ಲವರಾಗಿದ್ದರೆ, ನಾವು ನಿಮಗೆ ಏಕಕಾಲದಲ್ಲಿಯೇ “ಹೌದು” ಮತ್ತು “ಇಲ್ಲ” ಎಂದು ಹೇಳಲಿಲ್ಲವೆಂದು ನೀವು ನಂಬಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಎಂದಿಗೂ ಇಲ್ಲ, ನಾನು ನಿಮಗೆ ಕೊಟ್ಟ ಮಾತು ದ್ವಂದ್ವಾರ್ಥವುಳ್ಳದ್ದಾಗಿರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಂಬಿಗಸ್ತನಾಗಿರುವ ದೇವರಾಣೆ, ನಾವು ನಿಮಗೆ ಹೇಳುವ ಮಾತು ಒಂದು ಸಾರಿ ಹೌದೆಂದು ಒಂದು ಸಾರಿ ಅಲ್ಲವೆಂದು ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಶ್ಚಯವಾಗಿ, ದೇವರು ಹೇಗೆ ಪ್ರಾಮಾಣಿಕತೆಗೆ ಯೋಗ್ಯರೋ, ಹಾಗೆಯೇ ನಾವು ನಿಮಗೆ ಕೊಟ್ಟ ಸಂದೇಶವೂ, ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ವಿಶ್ವಾಸಿ ದೆವ್ ಕಶೆ ಬೊಲ್ತಾ ತಸೆಚ್ ಮಿಯಾ ಸಾಂಗ್ತಾ, ಅಮಿ ತುಮ್ಕಾ ದಿಲ್ಲಿ ಬಾತ್ಮಿ ಎಗ್ದಾ “ಹೊಯ್” ಅನಿ ತನ್ನಾಚ್ “ನ್ಹಯ್” ಮನ್ತಲಿ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:18
10 ತಿಳಿವುಗಳ ಹೋಲಿಕೆ  

ದೇವರು ನಂಬಿಗಸ್ತನಾಗಿದ್ದಾನೆ. ದೇವರ ಮಗನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಜೀವದಲ್ಲಿ ಪಾಲುಹೊಂದಬೇಕೆಂದು ನಮ್ಮನ್ನು ಕರೆದಿರುವಾತನು ದೇವರೇ.


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನಾನು ಸುಳ್ಳು ಹೇಳುತ್ತಿಲ್ಲವೆಂದು ದೇವರಿಗೆ ಗೊತ್ತಿದೆ. ಆತನು ಪ್ರಭು ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿದ್ದಾನೆ. ಆತನಿಗೆ ಸದಾಕಾಲ ಸ್ತೋತ್ರ ಸಲ್ಲಿಸಬೇಕು.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.


ನಿಮ್ಮ ಬಗ್ಗೆ ಹೇಳಲು ನನ್ನಲ್ಲಿ ಅನೇಕ ಸಂಗತಿಗಳಿವೆ. ನಾನು ನಿಮಗೆ ತೀರ್ಪು ಮಾಡಬಲ್ಲೆನು. ಆದರೆ ನನ್ನನ್ನು ಕಳುಹಿಸಿದಾತನಿಂದ ನಾನು ಕೇಳಿದ ಸಂಗತಿಗಳನ್ನು ಮಾತ್ರ ಜನರಿಗೆ ಹೇಳುತ್ತೇನೆ. ಆತನು ಸತ್ಯವನ್ನೇ ತಿಳಿಸುತ್ತಾನೆ” ಎಂದು ಉತ್ತರಕೊಟ್ಟನು.


ಯೇಸುವು ದೇವಾಲಯದಲ್ಲಿ ಇನ್ನೂ ಉಪದೇಶಿಸುತ್ತಾ, “ಹೌದು, ನಿಮಗೆ ನನ್ನ ಬಗ್ಗೆ ಗೊತ್ತಿದೆ, ನಾನು ಎಲ್ಲಿಂದ ಬಂದೆನೆಂಬುದೂ ನಿಮಗೆ ತಿಳಿದಿದೆ. ಆದರೆ ನಾನು ಬಂದಿರುವುದು ನನ್ನ ಸ್ವಂತ ಅಧಿಕಾರದಿಂದಲ್ಲ. ಸತ್ಯಸ್ವರೂಪನು ನನ್ನನ್ನು ಕಳುಹಿಸಿದ್ದಾನೆ. ನಿಮಗೆ ಆತನು ಗೊತ್ತಿಲ್ಲ.


ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು