Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:3 - ಪರಿಶುದ್ದ ಬೈಬಲ್‌

3 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ದೇವರು ಕನಿಕರದಿಂದ ತುಂಬಿರುವ ತಂದೆಯಾಗಿದ್ದಾನೆ. ಆತನು ಸಕಲ ವಿಧವಾಗಿ ಸಂತೈಸುವ ದೇವರಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ; ಆತನು ಕನಿಕರವುಳ್ಳ ತಂದೆಯೂ ಸಕಲವಿಧವಾಗಿ ಸಂತೈಸುವ ದೇವರೂ ಆಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವಾಕ್ ಅನಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಕ್ ಹೊಗ್ಳಾಪ್, ತೊ ದಯಾ ದಾಕ್ವುತಲೊ ಬಾಬಾ, ಸಗ್ಳಿ ಮಜತ್ ತ್ಯಾಚ್ ದೆವಾಕ್ನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:3
26 ತಿಳಿವುಗಳ ಹೋಲಿಕೆ  

ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


“ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು. ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿಸಿ ಮುಂದಕ್ಕೆ ಹೋಗುವವನು ದೇವರನ್ನು ಹೊಂದಿಲ್ಲ. ಆದರೆ ಆ ಉಪದೇಶದಲ್ಲಿ ನೆಲೆಗೊಂಡಿರುವವನು ತಂದೆಯನ್ನೂ ಮಗನನ್ನೂ ಹೊಂದಿದ್ದಾನೆ.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ನಾನು ಸುಳ್ಳು ಹೇಳುತ್ತಿಲ್ಲವೆಂದು ದೇವರಿಗೆ ಗೊತ್ತಿದೆ. ಆತನು ಪ್ರಭು ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿದ್ದಾನೆ. ಆತನಿಗೆ ಸದಾಕಾಲ ಸ್ತೋತ್ರ ಸಲ್ಲಿಸಬೇಕು.


ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಆಮೆನ್, ಆಮೆನ್!


ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಯಾಗಿರುವ ಆತನನ್ನು ಸ್ತುತಿಸುವೆನು. ನನ್ನನ್ನು ರಕ್ಷಿಸುವ ದೇವರು ಮಹೋನ್ನತನಾಗಿದ್ದಾನೆ.


ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.


ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು.


ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.


ನಿನ್ನ ಶತ್ರುಗಳನ್ನು ಸೋಲಿಸಲು ನಿನಗೆ ಸಹಾಯ ಮಾಡಿದ ಮಹೋನ್ನತನಾದ ದೇವರಿಗೆ ಕೊಂಡಾಟವಾಗಲಿ.” ಅಬ್ರಾಮನು ಯುದ್ಧದಿಂದ ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕೀಚೆದೆಕನಿಗೆ ಕೊಟ್ಟನು.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ.


ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. ದೇವರಿಗೆ ಸ್ತೋತ್ರ!


ನಾನು ನಿಮ್ಮನ್ನು ಜೆರುಸಲೇಮಿನಲ್ಲಿ ಸಂತೈಸುವೆನು. ತಾಯಿಯು ತನ್ನ ಮಗುವನ್ನು ಸಂತೈಸುವಂತೆ ನಾನು ನಿಮ್ಮನ್ನು ಸಂತೈಸುವೆನು.”


ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು.


ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯೇ ದೇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು