Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:9 - ಪರಿಶುದ್ದ ಬೈಬಲ್‌

9 ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮರಣವಾಗುತ್ತದೆಂಬ ನಿಶ್ಚಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಮಟ್ಲ್ಯಾರ್ ಅಮ್ಕಾ ಮರನಾಚಿ ಶಿಕ್ಷಾ ಲಿವಲ್ಲಿ ಹಾಯ್ ಸರ್ಕೆ ಅಮ್ಕಾ ದಿಸ್ಲೆ, ಅಮಿ ಅಮ್ಚ್ಯಾ ವರ್ತಿ ನ್ಹಯ್, ಮರಲ್ಲ್ಯಾಕ್ನಿ ಝಿತ್ತೆ ಕರುನ್ ಉಟ್ವುತಲ್ಯಾ ದೆವಾಚ್ಯಾ ವರ್‍ತಿ ವಿಶ್ವಾಸ್ ಥವ್ಕ್ ಅಮಿ ಶಿಕ್ತಲ್ಯಾಸಾಟಿ ಅಶೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:9
20 ತಿಳಿವುಗಳ ಹೋಲಿಕೆ  

ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ.


ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು.


ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.


ಯೋಬನೇ, ನೀನು ಇವುಗಳನ್ನೆಲ್ಲಾ ಮಾಡಶಕ್ತನಾಗಿದ್ದರೆ, ನಿನ್ನನ್ನು ರಕ್ಷಿಸಿಕೊಳ್ಳಬಲ್ಲೆ ಎಂದು ನಿನ್ನನ್ನು ನಾನೇ ಹೊಗಳುವೆನು.


ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು.


ಸ್ವಂತ ಆಲೋಚನೆಯ ಮೇಲೆ ಭರವಸೆ ಇಡುವವನು ಮೂರ್ಖನಾಗಿದ್ದಾನೆ. ಜ್ಞಾನಮಾರ್ಗದಲ್ಲಿ ನಡೆಯುವವನು ಸುರಕ್ಷಿತನಾಗಿರುವನು.


“ಒಂದುವೇಳೆ ‘ನೀನು ಜೀವಿಸುವಿ’ ಎಂದು ಒಬ್ಬ ಒಳ್ಳೆಯ ಮನುಷ್ಯನಿಗೆ ನಾನು ಹೇಳಬಹುದು. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ತಾನು ರಕ್ಷಿಸಲ್ಪಟ್ಟಿದ್ದೇನೆ ಎಂದು ನೆನಸಬಹುದು. ಆ ಬಳಿಕ ಅವನು ದುಷ್ಕೃತ್ಯಗಳನ್ನು ಮಾಡಲು, ನಾನು ಅವನ ಪುಣ್ಯಕಾರ್ಯಗಳನ್ನು ನೋಡದೆ ಅವನ ದುಷ್ಕೃತ್ಯಗಳ ನಿಮಿತ್ತ ಅವನನ್ನು ಸಾಯಿಸುವೆನು.


ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು. ಸಾಯುವವರೂ ಸತ್ತುಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ನಾನು ವೃದ್ಧನಾಗುವ ತನಕ ಬದುಕುವೆನೆಂದು ನಾನು ನನ್ನೊಳಗೆ ಅಂದುಕೊಂಡಿದ್ದೆನು. ಆದರೆ ನಾನು ಮರಣದ್ವಾರದ ಮೂಲಕ ಹೋಗುವ ಸಮಯ ಬಂತು. ನನ್ನ ಜೀವಮಾನವೆಲ್ಲ ಅಲ್ಲಿ ಕಳೆಯುವೆನು.


ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ನಿನಗೋಸ್ಕರವಾಗಿ ನಾವು ಎಲ್ಲಾ ಸಮಯಗಳಲ್ಲಿ ಸಾವಿನ ದವಡೆಯಲ್ಲಿದ್ದೇವೆ. ಕೊಯ್ಯಲು ಕೊಂಡೊಯ್ಯುವ ಕುರಿಗಳಿಗಿಂತ ಕಡೆಗಣಿಸಲ್ಪಟ್ಟಿದ್ದೇವೆ.”


ಸಹೋದರ ಸಹೋದರಿಯರೇ, ನಾವು ಏಷ್ಯಾ ಪ್ರಾಂತ್ಯದಲ್ಲಿ ಅನುಭವಿಸಿದ ಸಂಕಟದ ಬಗ್ಗೆ ನೀವು ತಿಳಿದುಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಲ್ಲಿ ನಮಗೆ ಅಪಾರವಾದ ಭಾರಗಳಿದ್ದವು. ಆ ಭಾರಗಳು ನಮ್ಮ ಸ್ವಂತ ಶಕ್ತಿಗಿಂತಲೂ ಅಧಿಕವಾಗಿದ್ದವು. ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆಯನ್ನು ಸಹ ನಾವು ಬಿಟ್ಟುಕೊಟ್ಟೆವು.


ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು