Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:10 - ಪರಿಶುದ್ದ ಬೈಬಲ್‌

10 “ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಪೌಲನ ಪತ್ರಗಳು ಪ್ರಬಲವಾದುವು, ತೀಕ್ಷ್ಣವಾದುವು; ಆದರೆ ಆತನು ಸ್ವತಃ ನಮ್ಮಲ್ಲಿಗೆ ಬಂದಾಗ ಆತನು ದುರ್ಬಲನು ಹಾಗೂ ಆತನ ಮಾತು ಸಹ ಕೆಲಸಕ್ಕೆ ಬಾರದವು,” ಎಂದು ಕೆಲವರು ಹೇಳುತ್ತಿದ್ದಾರಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನಿಂದ ಬಂದ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆ ಬಾರದ್ದು ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಉಲ್ಲೆ ಜಾನಾ ಮನುಕ್ ಫಿರೆ;" ಪಾವ್ಲುಚ್ಯಾ ಚಿಟಿಯಾ ಬಡಾಯೆಚ್ಯಾ ಅನಿ ತಾಕ್ತಿಚ್ಯಾ; ಖರೆ ತೊ ಅಮ್ಚ್ಯಾ ಮದ್ದಿ ರ್‍ಹಾತಾನಾ ಬಳ್ ನಸಲ್ಲ್ಯಾಚ್ಯಾ ಸಾರ್ಕೊ ದಿಸ್ತಾ .ಅನಿ ತೆಚ್ಯಾ ಗೊಸ್ಟಿಯಾತ್ನಿಬಿ ಅರ್ಥ್ ನಾ ಸಾರ್ಕೆ ದಿಸ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:10
13 ತಿಳಿವುಗಳ ಹೋಲಿಕೆ  

ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.


ನಾನು ತರಬೇತಿ ಹೊಂದಿದ ಭಾಷಣಗಾರನಲ್ಲ ಎಂಬುದೇನೊ ನಿಜ, ಆದರೆ ನನಗೂ ಜ್ಞಾನವಿದೆ. ಇದನ್ನು ನಿಮಗೆ ಪ್ರತಿಯೊಂದು ವಿಧದಲ್ಲಿಯೂ ಸ್ಪಷ್ಟವಾಗಿ ತೋರಿಸಿದೆವು.


ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.


ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.


ನನ್ನ ಪತ್ರಗಳ ಮೂಲಕ ನಿಮ್ಮನ್ನು ಭಯಪಡಿಸಲು ಪ್ರಯತ್ನಿಸುತ್ತಿದ್ದೇನೆಂದು ನೀವು ಯೋಚಿಸಬೇಕೆಂಬುದು ನನ್ನ ಅಪೇಕ್ಷೆಯಲ್ಲ.


ಆ ಜನರಿಗೆ ಈ ವಿಷಯ ತಿಳಿದಿರಬೇಕು. ಅದೇನೆಂದರೆ, ಈಗ ನಾವು ನಿಮ್ಮೊಂದಿಗಿಲ್ಲ. ಆದ್ದರಿಂದ ಈ ಸಂಗತಿಗಳನ್ನು ಪತ್ರಗಳ ಮೂಲಕ ಹೇಳುತ್ತಿದ್ದೇವೆ. ಆದರೆ ನಾವು ನಿಮ್ಮೊಂದಿಗಿರುವಾಗ ನಮ್ಮ ಪತ್ರಗಳಲ್ಲಿ ತೋರಿದ ಅಧಿಕಾರವನ್ನೇ ತೋರಿಸುತ್ತೇವೆ.


ಇದನ್ನು ಹೇಳುವುದಕ್ಕೇ ನಾಚಿಕೆಯಾಗುತ್ತದೆ. ಆದರೆ, ನಿಮ್ಮೊಂದಿಗೆ ಆ ರೀತಿ ನಡೆದುಕೊಳ್ಳುವಷ್ಟು “ಬಲ” ನಮಗಿರಲಿಲ್ಲ! ಆದರೆ ಹೊಗಳಿಕೊಳ್ಳಲು ಯಾರಿಗಾದರೂ ಸಾಕಷ್ಟು ಧೈರ್ಯವಿದ್ದರೆ ನಾನು ಸಹ ಧೈರ್ಯದಿಂದ ಹೊಗಳಿಕೊಳ್ಳುತ್ತೇನೆ. (ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ.)


ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು