Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:13 - ಪರಿಶುದ್ದ ಬೈಬಲ್‌

13 ಅವರು ನಿಜ ಅಪೊಸ್ತಲರಲ್ಲ. ಅವರು ಮೋಸಗಾರರಾದ ಕೆಲಸಗಾರರು. ತಾವು ಕ್ರಿಸ್ತನ ಅಪೊಸ್ತಲರಲ್ಲದಿದ್ದರೂ ಜನರು ತಮ್ಮನ್ನು ಕ್ರಿಸ್ತನ ಅಪೊಸ್ತಲರೆಂದು ತಿಳಿದುಕೊಳ್ಳುವಂತೆ ನಟಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಕಪಟ ಪ್ರೇಷಿತರು, ಕಳ್ಳ ಕೆಲಸಗಾರರು, ಕ್ರಿಸ್ತಯೇಸುವಿನ ಪ್ರೇಷಿತರಂತೆ ನಟಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವದಕ್ಕೆ ವೇಷ ಹಾಕಿಕೊಳ್ಳುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಂಥಾ ಜನರು ಸುಳ್ಳು ಅಪೊಸ್ತಲರು, ವಂಚಿಸುವ ವರ್ತಕರು, ಕ್ರಿಸ್ತ ಯೇಸುವಿನ ಅಪೊಸ್ತಲರೆಂದು ವೇಷ ಹಾಕಿಕೊಂಡವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಸ್ಲೆ ಸಗ್ಳೆ ಝುಟೆ ಅಪೊಸ್ತಲ್, ಕುಸ್ಡೆ ಪಾನಾಚೆ ಕಾಮ್ ಕರ್‍ತಲೆ ಅನಿ ಅಪ್ನಿ ಕ್ರಿಸ್ತಾಚಿ ಅಪೊಸ್ತಲಾ ಮನುನ್ ವೆಸ್ ಘಾಲುನ್ ಅಸಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:13
36 ತಿಳಿವುಗಳ ಹೋಲಿಕೆ  

“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಕೇಡುಮಾಡುವಂಥ ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಅವರು ನಾಯಿಗಳಂತಿದ್ದಾರೆ. ಸುನ್ನತಿ ಎಂದು ಹೇಳಿಕೊಂಡು ಅಂಗಚ್ಛೇದನೆ ಮಾಡುವವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.


ನಿಜವಾಗಿ ಹೇಳಬೇಕಾದರೆ, ಬೇರೊಂದು ಸತ್ಯಸುವಾರ್ತೆಯು ಇಲ್ಲವೇ ಇಲ್ಲ. ಆದರೆ ಕೆಲವು ಜನರು ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾರೆ. ಅವರು ಕ್ರಿಸ್ತನ ಸುವಾರ್ತೆಯನ್ನು ಬದಲಾಯಿಸಬೇಕೆಂದಿದ್ದಾರೆ.


ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.


ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.


ಯಾವನೂ ನಿಮ್ಮನ್ನು ಸರಿಯೆನಿಸುವ ಸುಳ್ಳು ಮಾತುಗಳಿಂದ ಮೋಸಗೊಳಿಸದಂತೆ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ಹೀಗಿರಲು ಸೈತಾನನ ಸೇವಕರು ತಾವು ಸರಿಯಾದ ಕೆಲಸವನ್ನು ಮಾಡುತ್ತಿರುವವರಂತೆ ನಟಿಸುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಆದರೆ ಅವರು ಮಾಡುತ್ತಿರುವ ಕೆಲಸಗಳ ಪ್ರತಿಫಲವಾಗಿ ಅವರಿಗೆ ಕೊನೆಯಲ್ಲಿ ದಂಡನೆಯಾಗುವುದು.


ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.


“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ.


ನೀವು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಕೆಲವರು ನಿಮ್ಮನ್ನು ಒತ್ತಾಯಿಸುತ್ತಿದ್ದಾರೆ. ತಮ್ಮನ್ನು (ಯೆಹೂದ್ಯರು) ಸ್ವೀಕರಿಸಿಕೊಳ್ಳಲಿ ಎಂಬುದೇ ಅವರ ಉದ್ದೇಶ. ಕ್ರಿಸ್ತನ ಶಿಲುಬೆಯ ದೆಸೆಯಿಂದ ತಾವು ಹಿಂಸೆಗೆ ಒಳಗಾಗಬಹುದೆಂಬ ಭಯದಿಂದ ಅವರು ಹೀಗೆ ಮಾಡುತ್ತಾರೆ.


ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.


ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!


ನಿಮ್ಮನ್ನು ಒತ್ತಾಯಪಡಿಸುವುದಕ್ಕಾಗಿ ಆ ಜನರು ಪ್ರಯಾಸ ಪಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಒಳ್ಳೆಯ ಉದ್ದೇಶದಿಂದಲ್ಲ. ನೀವು ನಮಗೆ ವಿರುದ್ಧವಾಗಿ ತಿರುಗಿಬೀಳಬೇಕೆಂದು ಅವರು ನಿಮ್ಮನ್ನು ಒತ್ತಾಯಪಡಿಸುತ್ತಿದ್ದಾರೆ. ನೀವು ಅವರನ್ನೇ ಹೊರತು ಬೇರೆ ಯಾರನ್ನೂ ಅನುಸರಿಸಬಾರದೆಂಬುದು ಅವರ ಅಪೇಕ್ಷೆ. ನಿಮ್ಮ ವಿಷಯದಲ್ಲಿ ಜನರು ಆಸಕ್ತಿ ತೋರಿಸುವುದೇನೋ ಒಳ್ಳೆಯದು.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.


“ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.


ಆದರೆ ನೀವೆಂದಿಗೂ ಬಾಬಿಲೋನ್ ರಾಜನಿಗೆ ಗುಲಾಮರಾಗುವದಿಲ್ಲ ಎಂದು ಈ ಸುಳ್ಳುಪ್ರವಾದಿಗಳು ಹೇಳುತ್ತಿದ್ದಾರೆ. “‘ಆ ಪ್ರವಾದಿಗಳ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಬೇಡಿ. ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.


ಅನೇಕರು ಕ್ರಿಸ್ತನ ಶಿಲುಬೆಗೆ ವೈರಿಗಳೊ ಎಂಬಂತೆ ಜೀವಿಸುತ್ತಾರೆ. ಅವರ ಬಗ್ಗೆ ನಾನು ನಿಮಗೆ ಅನೇಕ ಸಲ ತಿಳಿಸಿದ್ದೇನೆ. ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು