Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:6 - ಪರಿಶುದ್ದ ಬೈಬಲ್‌

6 ನಾನು ತರಬೇತಿ ಹೊಂದಿದ ಭಾಷಣಗಾರನಲ್ಲ ಎಂಬುದೇನೊ ನಿಜ, ಆದರೆ ನನಗೂ ಜ್ಞಾನವಿದೆ. ಇದನ್ನು ನಿಮಗೆ ಪ್ರತಿಯೊಂದು ವಿಧದಲ್ಲಿಯೂ ಸ್ಪಷ್ಟವಾಗಿ ತೋರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ನಿಮಗೆ ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ನಿಪುಣನಾಗಿದ್ದೇನೆ; ಇದನ್ನು ಎಲ್ಲಾ ಕಾರ್ಯಗಳಲ್ಲಿ ಎಲ್ಲರ ಮುಂದೆ ನಿಮ್ಮ ಪ್ರಯೋಜನಕ್ಕಾಗಿ ತೋರ್ಪಡಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಮಾತಿನಲ್ಲಿ ಚಾತುರ್ಯ ಇಲ್ಲದಿದ್ದರೂ ನನಗೆ ತಿಳುವಳಿಕೆಯಿದೆ. ಇದನ್ನು ನಾನು ಪ್ರತಿಯೊಂದು ಸಂದರ್ಭಗಳಲ್ಲಿಯೂ ಬಹಳ ಸ್ಪಷ್ಟಪಡಿಸಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಿಯಾ ಎಕ್ ಮೊಟೊ ಪ್ರಚಾರ್ ಕರ್‍ತಲೊ ಹೊವುಕ್ನಾ ಅಸಿಲ್; ಖರೆ ಶಾನ್‍ಪಾನಾನ್ ಮಿಯಾ ಕಾಯ್ ಕಮಿ? ಸಗ್ಳ್ಯಾ ವಿಶಯಾತ್ನಿ ನಾ ಹೊಲ್ಯಾರ್ ಎಳಾತ್ನಿ ಮಿಯಾ ಕಸ್ಲೊ ಮನುನ್ ತುಮ್ಕಾ ಖರೆ ಕರುನ್ ದಾಕ್ವುನ್ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:6
13 ತಿಳಿವುಗಳ ಹೋಲಿಕೆ  

ನಾನು ಬರೆದಿರುವ ಈ ಸಂಗತಿಗಳನ್ನು ನೀವು ಓದಿದರೆ ಕ್ರಿಸ್ತನ ರಹಸ್ಯವಾದ ಸತ್ಯವನ್ನು ನಾನು ನಿಜವಾಗಿಯೂ ಅರ್ಥಮಾಡಿಕೊಂಡಿದ್ದೇನೆ ಎಂಬುದು ನಿಮಗೇ ತಿಳಿಯುತ್ತದೆ.


ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.


ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.


ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.


ನಾನು ನಿಮ್ಮೊಂದಿಗಿದ್ದಾಗ ನಾನೂ ಅಪೊಸ್ತಲನೆಂಬುದನ್ನು ನಿರೂಪಿಸುವಂಥ ಸೂಚಕಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡಿದೆನು.


“ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.


ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.


ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವನ್ನು ಕೊಡಿರಿ. ನಾವು ನಿಮ್ಮಲ್ಲಿ ಯಾರಿಗೂ ಕೆಟ್ಟದ್ದನ್ನು ಮಾಡಿಲ್ಲ. ಯಾರ ನಂಬಿಕೆಯನ್ನೂ ಹಾಳುಮಾಡಿಲ್ಲ; ಯಾರನ್ನೂ ವಂಚಿಸಲಿಲ್ಲ.


ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.


ನಾವು ದೇವರ ಸೇವಕರೆಂಬುದನ್ನು ನಮ್ಮ ತಿಳುವಳಿಕೆಯಿಂದಲೂ ತಾಳ್ಮೆಯಿಂದಲೂ ಕನಿಕರದಿಂದಲೂ ಮತ್ತು ಪರಿಶುದ್ಧ ಜೀವಿತದಿಂದಲೂ ತೋರ್ಪಡಿಸಿದ್ದೇವೆ. ನಾವು ಇದನ್ನು ಪವಿತ್ರಾತ್ಮನಿಂದಲೂ ನಿಜವಾದ ಪ್ರೀತಿಯಿಂದಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು