Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:7 - ಪರಿಶುದ್ದ ಬೈಬಲ್‌

7 ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾಕಾ ದಾಕ್ವುನ್ ದಿಲ್ಲ್ಯಾ ಸಾದಾರನ್ ನ್ಹಯ್ ಹೊತ್ತ್ಯಾ ದಾಕ್ವನಿ ವಿಶಯಾತ್ ಸಾಂಗುಚೆ ಹೊಲ್ಯಾರ್, ಮಿಯಾ ತೆಚೆಸಾಟ್ನಿ ಗುರುಕಿತ್ ಪಡುಚೆ ನ್ಹಯ್ ಮನುನ್ ಮಾಜ್ಯಾ ಆಂಗಾತ್ ಅಳಕ್ತಲೊ ಕಾಟೊ ದಿಲ್ಲೊ ಹಾಯ್, ಮಿಯಾ ಗರುಕಿ ಕರುಚೆ ನ್ಹಯ್ ಮನುನ್, ಹ್ಯೊ ಸೈತಾನಾಚೊ ದುತ್ ಮಾಕಾ ಮುಟ್ಕೊ ಮಾರಿತ್ ಅನಿ ಟೊಪುನ್ಗೆತ್ ರಾತಾ..

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:7
25 ತಿಳಿವುಗಳ ಹೋಲಿಕೆ  

“ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.


“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಈ ಜನರನ್ನು ಬಲವಂತ ಮಾಡುವುದಿಲ್ಲ. ಈ ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳುದೇವರುಗಳು ನಿಮಗೆ ಬಲೆಯಂತೆ ಉರುಲಾಗುತ್ತವೆ.’”


ಮೊದಲು ನೀವು ನನಗೆ ಬಹು ಒಳ್ಳೆಯವರಾಗಿದ್ದಿರಿ. ನಾನು ನಿಮ್ಮ ಬಳಿಗೆ ಮೊದಲನೆ ಸಲ ಬಂದದ್ದು ನನ್ನ ಅನಾರೋಗ್ಯದ ನಿಮಿತ್ತವೆಂದು ನಿಮಗೆ ಗೊತ್ತಿದೆ. ನಾನು ನಿಮಗೆ ಸುವಾರ್ತೆಯನ್ನು ತಿಳಿಸಿದ್ದು ಆವಾಗಲೇ.


“ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು.


ಆ ಮನುಷ್ಯನ ಪಾಪಸ್ವಭಾವವು ನಾಶವಾಗುವುದಕ್ಕಾಗಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಿರಿ. ಆಗ ಪ್ರಭುವಿನ ದಿನದಂದು ಅವನ ಜೀವಾತ್ಮವು ರಕ್ಷಣೆಹೊಂದಲು ಸಾಧ್ಯವಾಗುವುದು.


ಆಮೇಲೆ ಅವನು ಪೆನೀಯೇಲ್‌ನಿಂದ ಹೊರಟುಹೋಗುತ್ತಿರುವಾಗ ಸೂರ್ಯೋದಯವಾಯಿತು. ಯಾಕೋಬನು ತನ್ನ ಕೀಲುನೋವಿನಿಂದ ಕುಂಟುತ್ತಾ ಹೋದನು.


ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.


ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.


ಯಾಕೋಬನನ್ನು ಸೋಲಿಸಲು ತನಗೆ ಸಾಧ್ಯವಾಗದಿರುವುದನ್ನು ಗಮನಿಸಿದ ಆ ಪುರುಷನು ಯಾಕೋಬನ ತೊಡೆಯನ್ನು ಮುಟ್ಟಿದನು. ಆಗ ಯಾಕೋಬನ ಕೀಲು ತಪ್ಪಿತು.


ಏಕೆಂದರೆ ನಿಮ್ಮಿಂದ ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುವವನ ಮತ್ತು ನಿಮ್ಮನ್ನು ಉಪಯೋಗಿಸಿಕೊಳ್ಳುವವನ ವಿಷಯದಲ್ಲಿಯೂ ಸಹ ತಾಳ್ಮೆಯಿಂದಿರುತ್ತೀರಿ. ನಿಮ್ಮನ್ನು ಮೋಸಗೊಳಿಸುವವರ, ತಮ್ಮನ್ನು ನಿಮಗಿಂಥ ಉತ್ತಮರೆಂದು ಭಾವಿಸಿಕೊಂಡಿರುವವರ ಮತ್ತು ನಿಮ್ಮ ಮುಖದ ಮೇಲೆ ಹೊಡೆಯುವವರ ವಿಷಯದಲ್ಲಿಯೂ ನೀವು ತಾಳ್ಮೆಯಿಂದಿರುತ್ತೀರಿ.


ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ.


“‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”


ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.


ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.


ದೇವರ ಜ್ಞಾನಕ್ಕೆ ವಿರೋಧವಾಗಿ ಎದ್ದೇಳುವ ಪ್ರತಿಯೊಂದು ಗರ್ವದ ಸಂಗತಿಯನ್ನು ನಾಶಮಾಡುತ್ತೇವೆ; ಪ್ರತಿಯೊಂದು ಯೋಚನೆಯನ್ನು ಸ್ವಾಧೀನಪಡಿಸಿಕೊಂಡು ಅವುಗಳನ್ನು ಪರಿವರ್ತಿಸಿ ಕ್ರಿಸ್ತನಿಗೆ ವಿಧೇಯರಾಗುವಂತೆ ಮಾಡುತ್ತೇವೆ.


ನಾನು ವಾಸಿಮಾಡಿದ ಈ ಸ್ತ್ರೀಯಾದರೋ ಯೆಹೂದ್ಯಳು. ಸೈತಾನನು ಆಕೆಯನ್ನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು. ಆದ್ದರಿಂದ ಆಕೆಯನ್ನು ಸಬ್ಬತ್‌ದಿನದಂದು ಕಾಯಿಲೆಯಿಂದ ಬಿಡುಗಡೆ ಮಾಡುವುದು ಖಂಡಿತವಾಗಿಯೂ ತಪ್ಪಲ್ಲ!” ಎಂದು ಹೇಳಿದನು.


ನಂತರ ಜನರು ಅಲ್ಲಿಯೇ ಯೇಸುವಿನ ಮುಖದ ಮೇಲೆ ಉಗುಳಿದರು. ಮುಷ್ಠಿಯಿಂದ ಆತನನ್ನು ಗುದ್ದಿದರು. ಆತನ ಕೆನ್ನೆಗೆ ಹೊಡೆದರು.


ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು.


“ಅದಕ್ಕಾಗಿ ಯೆಹೋವನಾದ ನಾನು ಇಸ್ರೇಲರ ಮಾರ್ಗವನ್ನು ಮುಳ್ಳುಗಳಿಂದ ಮುಚ್ಚಿಬಿಡುವೆನು. ನಾನು ಗೋಡೆ ಕಟ್ಟುವೆನು. ಆಗ ಅವಳು ತನ್ನ ದಾರಿಯನ್ನು ಕಂಡುಕೊಳ್ಳಲಾರಳು.


ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.


“ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದ್ದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು