Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:11 - ಪರಿಶುದ್ದ ಬೈಬಲ್‌

11 ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಆಕ್ರಿಕ್ ಮಾಜ್ಯಾ ಭಾವಾನು ಅನಿ ಭೆನಿಯಾನು ಮಿಯಾ ತುಮ್ಕಾ ವಿದಾಯ್ ಮನ್ತಾ, ಸಂಪುರ್ನತಾ ಜೊಡುಕ್ ರಾಬಾ. ಮಾಜ್ಯಾ ಗೊಸ್ಟಿಯಾ ಆಯ್ಕಾ, ಎಕ್ ಮನಾಚೆ ಹೊವಾ, ಸಮಾದಾನ್ ಹುಡ್ಕಾ, ತನ್ನಾ ಪ್ರೆಮಾಚೊ ಅನಿ ಶಾಂತಿಚೊ ದೆವ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:11
51 ತಿಳಿವುಗಳ ಹೋಲಿಕೆ  

ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.


ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಶಾಂತಿಯನ್ನು ಕೊಡುವ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.


ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.


“ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.


ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.


ನೀವು ಶಕ್ತರಾಗಿರುವುದಾದರೆ, ನಾವು ಬಲಹೀನರಾಗಿರಲು ಸಂತೋಷಿಸುತ್ತೇವೆ. ನೀವು ನಂಬಿಕೆಯಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಉದ್ದೇಶ.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.


ತಾಳ್ಮೆಯು ತನ್ನ ಕಾರ್ಯವನ್ನು ಪೂರೈಸಲಿ. ಆಗ ನೀವು ನಿಷ್ಕಳಂಕರೂ ಮತ್ತು ಪರಿಪೂರ್ಣರೂ ಆಗುವಿರಿ ಮತ್ತು ನಿಮಗೆ ಬೇಕಾದುದೆಲ್ಲವೂ ದೊರೆಯುವುದು.


ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.


ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.


ನೀವು ನನ್ನಿಂದ ಕಲಿತುಕೊಂಡದ್ದನ್ನು, ಹೊಂದಿಕೊಂಡದ್ದನ್ನು, ಕೇಳಿದ್ದನ್ನು ಮತ್ತು ಕಣ್ಣಾರೆ ಕಂಡದ್ದನ್ನು ಮಾಡಿರಿ. ಆಗ, ಶಾಂತಿಯನ್ನು ಕೊಡುವ ದೇವರು ನಿಮ್ಮೊಂದಿಗಿರುವನು.


ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.


ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.


ಪ್ರಭು ಯೇಸುವಿನ ಕೃಪೆಯು ಎಲ್ಲಾ ಜನರೊಂದಿಗಿರಲಿ.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.


ಶಾಂತಿದಾಯಕನಾದ ಪ್ರಭುವು ಎಲ್ಲಾ ಕಾಲಗಳಲ್ಲಿಯೂ ಮತ್ತು ಎಲ್ಲಾ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭುವು ನಿಮ್ಮೆಲ್ಲರೊಂದಿಗಿರಲಿ.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಸಂಪೂರ್ಣವಾಗಿ ಪರಿಶುದ್ಧಗೊಳಿಸಲೆಂದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆಂದು ಪ್ರಾರ್ಥಿಸುತ್ತೇವೆ.


ಅವರು ನಿಮ್ಮಲ್ಲಿ ಮಾಡುವ ಸೇವೆಗಾಗಿ ಅವರನ್ನು ವಿಶೇಷವಾದ ಪ್ರೀತಿಯಿಂದ ಗೌರವಿಸಿರಿ. ನೀವೆಲ್ಲರೂ ಸಮಾಧಾನದಿಂದ ಜೀವಿಸಿರಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಪ್ರಭುವಿನಲ್ಲಿ ಒಂದೇ ಮನಸ್ಸನ್ನು ಹೊಂದಿರಬೇಕೆಂದು ನಾನು ಯವೋದ್ಯಳನ್ನೂ ಸಂತುಕೆಯನ್ನೂ ಕೇಳಿಕೊಳ್ಳುತ್ತೇನೆ.


ಆದರೆ ನಾವು ಈಗಾಗಲೇ ಹೊಂದಿರುವ ಸತ್ಯವನ್ನು ಅನುಸರಿಸುತ್ತಾ ನಡೆಯೋಣ.


ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಉಂಟಾಗಲಿ.


ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.


ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.


ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.


ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!


ನಾನು ಅವರಲ್ಲಿ ಇರುವೆನು ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು.


ಮತ್ತೊಬ್ಬನು, “ಸ್ವಾಮೀ, ನಾನು ನಿನ್ನನ್ನು ಹಿಂಬಾಲಿಸುವೆನು. ಆದರೆ ಮೊದಲು ನನ್ನ ಕುಟುಂಬದವರ ಬಳಿಗೆ ಹೋಗಿಬರಲು ಅವಕಾಶ ನೀಡು” ಎಂದು ಹೇಳಿದನು.


ಯೇಸು ನಿಂತುಕೊಂಡು, “ಅವನನ್ನು ಕರೆಯಿರಿ” ಎಂದು ಹೇಳಿದನು. ಆದ್ದರಿಂದ ಅವರು ಆ ಕುರುಡನನ್ನು ಕರೆದು, “ಸಂತೋಷಪಡು! ಎದ್ದುನಿಲ್ಲು! ಯೇಸು ನಿನ್ನನ್ನು ಕರೆಯುತ್ತಿದ್ದಾನೆ” ಎಂದರು.


ಆದ್ದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರಬೇಕು.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಅವರು ಹೊರಡುವಾಗ ಯೋಸೇಫನು, “ನೇರವಾಗಿ ಮನೆಗೆ ಹೋಗಿ. ದಾರಿಯಲ್ಲಿ ಜಗಳ ಮಾಡಬೇಡಿ” ಎಂದು ಹೇಳಿದನು.


ತಮ್ಮ ತಂದೆಗೆ ಯೋಸೇಫನ ಮೇಲೆ ಹೆಚ್ಚು ಪ್ರೀತಿಯಿರುವುದನ್ನು ಗಮನಿಸಿದ ಯೋಸೇಫನ ಅಣ್ಣಂದಿರು ಯೋಸೇಫನನ್ನು ದ್ವೇಷಿಸತೊಡಗಿ ಅವನೊಡನೆ ಸ್ನೇಹಭಾವದಿಂದ ಮಾತಾಡುತ್ತಿರಲಿಲ್ಲ.


ನೀವು ಆತ್ಮನ ಮೂಲಕವಾಗಿ ಸಮಾಧಾನವೆಂಬ ಬಂಧನದಿಂದ ಒಂದಾಗಿದ್ದೀರಿ. ಈ ರೀತಿ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ಸಮಾಧಾನವು ನಿಮ್ಮೆಲ್ಲರನ್ನು ಒಂದಾಗಿಸಲಿ.


ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.


ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.


ಹಗಲಿರುಳು ನಿಮ್ಮ ವಿಷಯದಲ್ಲಿ ಬಹಳವಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ನಂಬಿಕೆಯಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.


ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು