Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:17 - ಪರಿಶುದ್ದ ಬೈಬಲ್‌

17 ಆ ಪ್ರಭುವು ಪವಿತ್ರಾತ್ಮನೇ. ಎಲ್ಲಿ ಪ್ರಭುವಿನ ಆತ್ಮನು ಇರುತ್ತಾನೋ ಅಲ್ಲಿ ಸ್ವತಂತ್ರವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಕರ್ತನು ದೇವರಾತ್ಮನೇ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕರ್ತದೇವರೇ ಆತ್ಮರಾಗಿದ್ದಾರೆ. “ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹಿತ್ತೆ ಧನಿ ಮಟ್ಲ್ಯಾರ್ ಆತ್ಮೊ, ಖೈ ಧನಿಯಾಚೊ ಆತ್ಮೊ ರ್‍ಹಾತಾ, ಥೈ ಸ್ವತಂತ್ರ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:17
13 ತಿಳಿವುಗಳ ಹೋಲಿಕೆ  

ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, ಅಪ್ಪಾ ತಂದೆಯೇ” ಎಂದು ಆತ್ಮನು ಕೂಗುತ್ತಾನೆ.


ನೀವು ಸತ್ಯವನ್ನು ತಿಳಿದುಕೊಳ್ಳುವಿರಿ. ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.


ಈಗ ನಮಗೆ ಸ್ವತಂತ್ರವಿದೆ. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ದೃಢವಾಗಿರಿ. ಮನಸ್ಸನ್ನು ಬದಲಾಯಿಸಿಕೊಂಡು ಮತ್ತೆ ಧರ್ಮಶಾಸ್ತ್ರದ ಗುಲಾಮಗಿರಿಗೆ ಹೋಗಬೇಡಿರಿ.


ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.


ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.


ನಿನ್ನ ರಕ್ಷಣೆಯಿಂದುಂಟಾಗುವ ಆನಂದವನ್ನು ನನಗೆ ಮತ್ತೆ ದಯಪಾಲಿಸು! ನಿನಗೆ ವಿಧೇಯನಾಗಿರಲು ನನ್ನ ಮನಸ್ಸನ್ನು ದೃಢಪಡಿಸು.


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.


“ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.


ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು