Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:2 - ಪರಿಶುದ್ದ ಬೈಬಲ್‌

2 ಸ್ವತಃ ನೀವೇ ನಮಗೆ ಯೋಗ್ಯತಾಪತ್ರವಾಗಿದ್ದೀರಿ. ಆ ಪತ್ರಗಳು ನಮ್ಮ ಹೃದಯಗಳಲ್ಲಿ ಬರೆಯಲ್ಪಟ್ಟಿವೆ. ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸ್ವತಃ “ನೀವೇ ನಮ್ಮ ಯೋಗ್ಯತಾ ಪತ್ರ” ಅದು ನಮ್ಮ ಹೃದಯಗಳಲ್ಲೇ ಬರೆದಿದೆ ಆ ಪತ್ರವನ್ನು ಎಲ್ಲರೂ ಬಲ್ಲರು. ಎಲ್ಲರೂ ಓದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀವೇ ನಮ್ಮ ಯೋಗ್ಯತಾಪತ್ರ, ನಮ್ಮ ಹೃದಯ ಪಟಲದ ಮೇಲೆ ಬರೆಯಲಾದ ಪತ್ರ. ಅದನ್ನು ಯಾರು ಬೇಕಾದರೂ ಗುರುತಿಸಬಹುದು. ಓದಿ ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವೇ ನಮ್ಮ ಯೋಗ್ಯತಾಪತ್ರ; ಅದು ನಮ್ಮ ಹೃದಯಗಳಲ್ಲೇ ಬರೆದದೆ; ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವೇ ನಮ್ಮ ಹೃದಯದ ಮೇಲೆ ಎಲ್ಲರೂ ಓದಿ ತಿಳಿದುಕೊಳ್ಳಬಹುದಾದ ಪತ್ರವಾಗಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿಚ್ ಅಮಿ ಯೊಗ್ಯ್ ಮನುನ್ ದಾಕ್ವುತಲ್ಯಾ ಚಿಟಿಯಾ. ತೆ ಅಮ್ಚ್ಯಾ ಮನಾತ್ನಿ ಲಿವಲ್ಲೆ ಹಾಯ್. ಸಗ್ಳ್ಯಾ ಲೊಕಾಕ್ನಿ ತೆ ತಪಾಸುನ್ ಬಗುಕ್ ಅನಿ ವಾಚ್ವುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:2
9 ತಿಳಿವುಗಳ ಹೋಲಿಕೆ  

ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.


ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ.


ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?


ನಾನು ನಿಮಗೆ ಭಾರವಾಗದಿರುವುದು ನಿಮ್ಮ ಮೇಲೆ ನನಗೆ ಪ್ರೀತಿಯಿಲ್ಲದಿರುವ ಕಾರಣದಿಂದಲೋ? ಇಲ್ಲ! ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತಿದೆ.


ನಾನು ಇದನ್ನು ಹೇಳುತ್ತಿರುವುದು ನಿಮ್ಮನ್ನು ನಿಂದಿಸುವುದಕ್ಕಾಗಿಯಲ್ಲ. ನಿಮ್ಮೊಂದಿಗೆ ಬದುಕುವಷ್ಟರಮಟ್ಟಿಗೆ ಮತ್ತು ಸಾಯುವಷ್ಟರಮಟ್ಟಿಗೆ ನಿಮ್ಮನ್ನು ಅಪಾರವಾಗಿ ಪ್ರೀತಿಸುತ್ತೇವೆಂದು ನಾನು ಮೊದಲೇ ನಿಮಗೆ ತಿಳಿಸಿದ್ದೇನೆ.


ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.


ನಾವು ನಮ್ಮ ವಿಷಯವಾಗಿ ಮತ್ತೆ ಹೊಗಳಿಕೊಳ್ಳಲು ಆರಂಭಿಸಿದ್ದೇವೆಯೇ? ಇತರ ಕೆಲವು ಜನರಿಗೆ ಬೇಕಾಗುವಂತೆ ನಿಮ್ಮ ಬಳಿಗೆ ಬರಲು ನನಗೆ ಯೋಗ್ಯತಾಪತ್ರಗಳನ್ನು ತೆಗೆದು ಕೊಳ್ಳಬೇಕಾಗಿದೆಯೋ? ಅಥವಾ ಬೇರೆಡೆಗೆ ಹೋಗುವಾಗ ನಿಮ್ಮಿಂದ ಯೋಗ್ಯತಾ ಪತ್ರಗಳನ್ನು ತೆಗೆದುಕೊಳ್ಳಬೇಕಾಗಿದೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು