Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:6 - ಪರಿಶುದ್ದ ಬೈಬಲ್‌

6 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆ ಅಮ್ಕಾ ನವ್ಯಾ ಕರಾರಾಚಿ ಕರುನ್ ಯೊಗ್ಯ್ ಕರ್‍ತಾ, ತೆ ಲಿವಲ್ಲೊ ಖಾಯ್ದೊ ನ್ಹಯ್, ಅತ್ಮ್ಯಾಚ್ಯಾ ವೈನಾ ದಾಕ್ವುನ್ ದಿತಾ, ಲಿವಲ್ಲೊ ಖಾಯ್ದೊ ಮರಾನ್ ಹಾನ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:6
45 ತಿಳಿವುಗಳ ಹೋಲಿಕೆ  

ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.


ಹಿಂದಿನ ಕಾಲದಲ್ಲಿ, ಧರ್ಮಶಾಸ್ತ್ರವು ನಮ್ಮನ್ನು ಸೆರೆಯಾಳುಗಳಂತೆ ಬಂಧಿಸಿತ್ತು. ಆದರೆ ನಮ್ಮ ಹಳೆಯ ಸ್ವಭಾವವು ಸತ್ತುಹೋದ ಕಾರಣ ನಾವು ಧರ್ಮಶಾಸ್ತ್ರದಿಂದ ಬಿಡುಗಡೆಯಾದೆವು. ಆದ್ದರಿಂದ ಈಗ ನಾವು ಲಿಖಿತ ನಿಯಮಗಳೊಡನೆ ಹಳೇ ರೀತಿಯಲ್ಲಿ ದೇವರ ಸೇವೆಮಾಡದೆ ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ದೇವರ ಸೇವೆ ಮಾಡುತ್ತೇವೆ.


ಯೆಹೋವನು ಹೀಗೆಂದನು: “ನಾನು ಇಸ್ರೇಲರೊಂದಿಗೂ ಮತ್ತು ಯೆಹೂದ್ಯರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಸಮಯ ಬರುತ್ತಿದೆ.


ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಶ್ರೇಷ್ಠವಾದ ಒಡಂಬಡಿಕೆಗೆ ಯೇಸುವೇ ಆಧಾರ ಎಂಬುದೇ ಇದರರ್ಥ.


ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಆ ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ.


“ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.


ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.


ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


“ಲೇವಿಯರು, ‘ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸುವದಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.”


ಅಲ್ಲಿರುವ ಸಹೋದರ ಸಹೋದರಿಯರಿಗೆ ಈ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ.


ದೇವರು ನೀಡಿದ ವಿಶೇಷವಾದ ಕೃಪಾವರದಿಂದ ನಾನು ಸುವಾರ್ತೆಯನ್ನು ತಿಳಿಸಲು ಸೇವಕನಾದೆನು. ದೇವರು ತನ್ನ ಶಕ್ತಿಯನ್ನು ಪ್ರಯೋಗಿಸಿ ನನಗೆ ಆ ಕೃಪಾವರವನ್ನು ಕೊಟ್ಟನು.


ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.


ಮರಣವನ್ನು ವಿಧಿಸುವ ಸೇವೆಯು (ಧರ್ಮಶಾಸ್ತ್ರ) ಕಲ್ಲಿನ ಹಲಗೆಗಳ ಮೇಲೆ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ಅದು ದೇವರ ಮಹಿಮೆಯೊಂದಿಗೆ ಬಂದಿತು. ಮೋಶೆಯ ಮುಖವು ಪ್ರಕಾಶಮಾನವಾಗಿ ಹೊಳೆಯುತ್ತಿದ್ದುದರಿಂದ ಇಸ್ರೇಲರು ಅವನ ಮುಖವನ್ನು ನೋಡಲಾರದೆ ಹೋದರು. ಆ ಬಳಿಕ ಆ ಮಹಿಮೆಯು ಕುಂದಿಹೋಯಿತು.


ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ.


ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.


ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.


ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.


ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಇದು ಹೊಸ ಒಡಂಬಡಿಕೆಯನ್ನು ಸ್ಥಾಪಿಸುವ ನನ್ನ ರಕ್ತ. ಇದು ಅನೇಕ ಜನರ ಪಾಪಗಳ ಕ್ಷಮೆಗಾಗಿ ಸುರಿಸಲ್ಪಡುವ ರಕ್ತ.


ಇದರರ್ಥವೇನೆಂದರೆ: ಆ ಸೇವೆಯು (ಧರ್ಮಶಾಸ್ತ್ರ) ಜನರನ್ನು ಅಪರಾಧಿಗಳೆಂದು ತೀರ್ಪು ನೀಡಿತು, ಆದರೆ ಅದು ಮಹಿಮೆಯನ್ನು ಹೊಂದಿತ್ತು. ಹೀಗಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಉಂಟುಮಾಡುವುದು ಎಷ್ಟೋ ನಿಶ್ಚಯವಾಗಿದೆ.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.


ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.


ಈ ಲೋಕವು ಆರಂಭವಾಗುವುದಕ್ಕಿಂತ ಮುಂಚಿನಿಂದಲೂ ಇದ್ದ ಜೀವವಾಕ್ಯದ ಕುರಿತಾಗಿ ನಾವು ನಿಮಗೆ ಬರೆಯುತ್ತಿದ್ದೇವೆ: ಅದನ್ನು ಕಿವಿಯಾರೆ ಕೇಳಿದೆವು; ಕಣ್ಣಾರೆ ನೋಡಿದೆವು, ಮನಸ್ಸಿಟ್ಟು ಗಮನಿಸಿದೆವು, ಕೈಗಳಿಂದ ಮುಟ್ಟಿ ನೋಡಿದೆವು.


ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು.


ನಾವು ದೇವರಿಗೆ ವಿರುದ್ಧವಾಗಿ ಮಾಡಿದ ಕಾರ್ಯಗಳ ದೆಸೆಯಿಂದ ಸತ್ತವರಾಗಿದ್ದೆವು. ಆದರೆ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ನೀವು ದೇವರ ಕೃಪೆಯಿಂದ ರಕ್ಷಣೆ ಹೊಂದಿದವರಾಗಿದ್ದೀರಿ.


ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.


ಮೊದಲು ನಿಮ್ಮ ಆತ್ಮಿಕ ಜೀವಿತಗಳು, ನಿಮ್ಮ ಪಾಪಗಳ ಮತ್ತು ನೀವು ದೇವರಿಗೆ ವಿರುದ್ಧವಾಗಿ ಮಾಡಿದ ಕೆಟ್ಟಕಾರ್ಯಗಳ ದೆಸೆಯಿಂದ ಸತ್ತುಹೋಗಿದ್ದವು.


ಕ್ರಿಸ್ತನು ನಮ್ಮ ಮೂಲಕವಾಗಿ ಕಳುಹಿಸಿದ ಕ್ರಿಸ್ತನ ಪತ್ರ ನೀವಾಗಿದ್ದೀರಿ. ಆ ಪತ್ರವನ್ನು ಬರೆದಿರುವುದು ಶಾಯಿಯಿಂದಲ್ಲ, ಜೀವಸ್ವರೂಪನಾದ ದೇವರ ಆತ್ಮನಿಂದ. ಇದನ್ನು ಕಲ್ಲುಹಲಿಗೆಗಳ ಮೇಲೆ ಬರೆದಿಲ್ಲ. ಇದನ್ನು ಮಾನವ ಹೃದಯಗಳ ಮೇಲೆ ಬರೆಯಲಾಗಿದೆ.


ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.


ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು