Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:1 - ಪರಿಶುದ್ದ ಬೈಬಲ್‌

1 ದೇವರು ತನ್ನ ಕೃಪೆಯಿಂದ ಈ ಸೇವೆಯನ್ನು ನಮಗೆ ಒಪ್ಪಿಸಿದ್ದಾನೆ. ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದದರಿಂದ ನಾವು ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಟ್ಟು ಹಿಂದೆಗೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಕಾಮ್ ದೆವಾನ್ ಅಪ್ನಾಚ್ಯಾ ದಯೆನ್ ಅಮ್ಚ್ಯಾ ತಾಬೆತ್ ದಿಲ್ಯಾನಾಯ್. ತಸೆಮನುನ್ ಅಮಿ ಅಮ್ಚೊ ಧೈರೊ ಸೊಡಿನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:1
19 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ಒಳ್ಳೆಯದನ್ನು ಮಾಡುವುದರಲ್ಲಿ ಎಂದಿಗೂ ಬೇಸರಗೊಳ್ಳಬೇಡಿ.


ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು.


ಹೀಗಿರಲಾಗಿ ನಾನು ನಿಮಗೋಸ್ಕರ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿ ನಿರಾಶರಾಗಿ ಧೈರ್ಯಗೆಡಬೇಡಿ. ನನ್ನ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.


ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ.


ಯೇಸುವನ್ನು ಕುರಿತು ಯೋಚಿಸಿರಿ. ಪಾಪಪೂರಿತವಾದ ಜನರು ಆತನ ವಿರುದ್ಧವಾಗಿ ಕೆಟ್ಟದ್ದನ್ನು ಮಾಡುವಾಗ ಆತನು ತಾಳ್ಮೆಯಿಂದ ಇದ್ದನು. ಅದೇ ರೀತಿ ನೀವೂ ತಾಳ್ಮೆಯಿಂದಿರಬೇಕು ಮತ್ತು ಧೈರ್ಯಗೆಡಬಾರದು.


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.


ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ. ಆದರೆ ಈಗ ನೀವು ದೇವರ ಜನರಾಗಿದ್ದೀರಿ. ಮೊದಲು ನೀವು ಕರುಣೆಯನ್ನು ಹೊಂದಿರಲಿಲ್ಲ. ಆದರೆ ಈಗ ನೀವು ದೇವರ ಕರುಣೆಯನ್ನು ಹೊಂದಿಕೊಂಡಿದ್ದೀರಿ.


ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.


ಇದೆಲ್ಲಾ ದೇವರಿಂದಲೇ ಆಯಿತು. ಕ್ರಿಸ್ತನ ಮೂಲಕವಾಗಿ ದೇವರು ನಮ್ಮನ್ನು ತನ್ನೊಂದಿಗೆ ಸಮಾಧಾನ ಪಡಿಸಿಕೊಂಡಿದ್ದಾನೆ. ಇದಲ್ಲದೆ ಇತರರನ್ನು ಈ ಸಮಾಧಾನಕ್ಕೆ ಕರೆದುಕೊಂಡು ಬರುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.


ನಮಗೆ ಈ ನಿರೀಕ್ಷೆ ಇರುವುದರಿಂದ ನಾವು ಬಹಳ ಧೈರ್ಯವಾಗಿದ್ದೇವೆ.


ಮದುವೆಯಾಗಿಲ್ಲದ ಜನರ ಬಗ್ಗೆ ಈಗ ನಾನು ಬರೆಯುತ್ತೇನೆ. ಇದರ ಬಗ್ಗೆ ಪ್ರಭುವಿನಿಂದ ಬಂದ ಯಾವ ಆಜ್ಞೆಯೂ ನನ್ನಲ್ಲಿಲ್ಲ. ಆದರೆ ನಾನು ನನ್ನ ಅಭಿಪ್ರಾಯವನ್ನು ನಿಮಗೆ ಕೊಡುತ್ತೇನೆ. ನಾನು ಪ್ರಭುವಿನಿಂದ ಕರುಣೆಯನ್ನು ಹೊಂದಿಕೊಂಡಿರುವುದರಿಂದ ನಂಬಿಕೆಗೆ ಅರ್ಹನಾಗಿದ್ದೇನೆ.


ಯೌವನಸ್ಥರು ಆಯಾಸಗೊಳ್ಳುವರು. ಅವರಿಗೆ ವಿಶ್ರಾಂತಿ ಬೇಕು; ಹುಡುಗರೂ ಮುಗ್ಗರಿಸಿಬೀಳುವರು.


ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.


‘“ಬಾರೂಕನೇ, ನನಗೆ ತುಂಬ ತೊಂದರೆಯಾಗಿದೆ. ನನ್ನ ನೋವಿನೊಂದಿಗೆ ಯೆಹೋವನು ನನಗೆ ದುಃಖವನ್ನು ಕೊಟ್ಟಿದ್ದಾನೆ. ನಾನು ಬಹಳ ದಣಿದಿದ್ದೇನೆ. ನನ್ನ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನ್ನು ಕಾಣಲೂ ನನಗೆ ಸಾಧ್ಯವಿಲ್ಲ” ಎಂದು ಹೇಳಿರುವೆ.


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:


ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು