Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:2 - ಪರಿಶುದ್ದ ಬೈಬಲ್‌

2 ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಲಜ್ಜಾ ಕರುನ್ ಧಾಪುನ್ ನ್ಹೆತಲ್ಯಾ ತ್ಯಾ ಚಾಲಿಯಾ ಅಮಿ ಸೊಡ್ತಾಂವ್; ಅಮಿ ಕಪಟ್ ಚಾಲಿನ್ ಚಲಿನಾವ್ ಅನಿ ದೆವಾಚಿ ಗೊಸ್ಟ್ ಕನ್ನಾಚ್ ಝುಟಿ ಕರಿನಾವ್, ಸಾಂಗುಚೆ ಜಾಲ್ಯಾರ್, ಖರೆ ಅಸಲ್ಲೆ ಪರ್ಗಟ್ ಕರ್ತಾಂವ್. ದೆವಾಚ್ಯಾ ಇದ್ರಾಕ್ ಅಮಿ ಹರ್ ಎಕ್ ಮಾನ್ಸಾಚ್ಯಾ ಭುತ್ತುರ್‍ಲ್ಯಾ ಮನಾಕ್ನಿ ಬರೆ ದಿಸಿ ಸಾರ್ಕೆ ಚಲ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:2
16 ತಿಳಿವುಗಳ ಹೋಲಿಕೆ  

ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.


ಆ ಜನರು ಕತ್ತಲೆಯಲ್ಲಿ ಮಾಡುವ ಗುಪ್ತಕಾರ್ಯಗಳ ಬಗ್ಗೆ ಮಾತಾಡುವುದಕ್ಕೂ ನಾಚಿಕೆಯಾಗುತ್ತದೆ.


ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದೆನು. ಅದು ಸಮರ್ಪಕವೆಂದು ನೀವು ನಿರೂಪಿಸಿದಿರಿ. ನಾವು ನಿಮಗೆ ಹೇಳಿದ ಪ್ರತಿಯೊಂದೂ ಸತ್ಯವಾಗಿತ್ತು. ನಾವು ತೀತನ ಮುಂದೆ ನಿಮ್ಮ ವಿಷಯದಲ್ಲಿ ಹೇಳಿದ ಹೊಗಳಿಕೆಯ ಮಾತುಗಳೆಲ್ಲಾ ಸತ್ಯವೆಂದು ನೀವು ನಿರೂಪಿಸಿದಿರಿ.


ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ನಾನು ತರಬೇತಿ ಹೊಂದಿದ ಭಾಷಣಗಾರನಲ್ಲ ಎಂಬುದೇನೊ ನಿಜ, ಆದರೆ ನನಗೂ ಜ್ಞಾನವಿದೆ. ಇದನ್ನು ನಿಮಗೆ ಪ್ರತಿಯೊಂದು ವಿಧದಲ್ಲಿಯೂ ಸ್ಪಷ್ಟವಾಗಿ ತೋರಿಸಿದೆವು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ.


ಎಲೀಯನು, “ನಾಲ್ಕು ಕೊಡಗಳಲ್ಲಿ ನೀರನ್ನು ತುಂಬಿಸಿ. ಆ ಮಾಂಸದ ತುಂಡುಗಳ ಮೇಲೆ ಮತ್ತು ಸೌದೆಯ ಮೇಲೆ ಆ ನೀರನ್ನು ಸುರಿಯಿರಿ” ಎಂದು ಹೇಳಿದನು. ಎಲೀಯನು, “ಮತ್ತೆ ಅದೇ ರೀತಿ ಮಾಡಿ” ಎಂದನು, ಅವನು, “ಮೂರನೆಯ ಸಲ ಅದೇ ರೀತಿ ಮಾಡಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು