Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:1 - ಪರಿಶುದ್ದ ಬೈಬಲ್‌

1 ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜಗಾತ್ ಹೊತ್ತಿ ಅಮ್ಚೆ ಬಿಡಾರ್ ಮಟ್ಲ್ಯಾರ್ ಅಮ್ಚೆ ಆಂಗ್ ಮನ್ತಲೆ ಮೊಡುನ್ ಗೆಲ್ಯಾರ್ ಬಿ, ದೆವಾನ್ ತಯಾರ್ ಕರಲ್ಲೆ ಮಟ್ಲ್ಯಾರ್ ಹಾತಿನ್ ಭಾಂದಿನಸಲ್ಲೆ ಸರ್ವತಾಕ್ ರ್‍ಹಾತಲೆ ಘರ್ ಅಮ್ಕಾ ತಯಾರ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:1
25 ತಿಳಿವುಗಳ ಹೋಲಿಕೆ  

ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.


ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.


ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!


ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.


ಈ ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ಈ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


“ಈ ಮನುಷ್ಯನು, ‘ಕೈಯಿಂದ ಕಟ್ಟಿದ ಈ ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕೈಯಿಂದ ಕಟ್ಟಿಲ್ಲದ ಇನ್ನೊಂದು ದೇವಾಲಯವನ್ನು ಕಟ್ಟುತ್ತೇನೆ’ ಎಂದು ಹೇಳಿದ್ದನ್ನು ನಾವು ಕೇಳಿದೆವು” ಎಂದರು.


ನಾನು ನಿಮಗೆ ಹೇಳಿದಂತಹ ರೀತಿಯಲ್ಲಿಯೇ ಎಲ್ಲವೂ ನಾಶಗೊಳ್ಳುತ್ತವೆ. ಆದ್ದರಿಂದ ನೀವು ಎಂತಹ ಜನರಾಗಿರಬೇಕು? ನೀವು ಪರಿಶುದ್ಧರಾಗಿರಬೇಕು ಮತ್ತು ಭಕ್ತಿವುಳ್ಳವರಾಗಿರಬೇಕು.


ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ.


ನಾವು ಸತ್ಯಮಾರ್ಗಕ್ಕೆ ಸೇರಿದವರೆಂಬುದನ್ನು ಈ ಮೂಲಕವಾಗಿಯೇ ತಿಳಿದುಕೊಳ್ಳುತ್ತೇವೆ. ನಮ್ಮ ಮನಸ್ಸಾಕ್ಷಿಯು ನಮ್ಮನ್ನು ತಪ್ಪಿತಸ್ಥರೆಂದು ಹೇಳಿದರೂ ನಾವು ದೇವರ ಎದುರಿನಲ್ಲಿ ಸಮಾಧಾನದಿಂದಿರಲು ಸಾಧ್ಯ. ಏಕೆಂದರೆ ನಮ್ಮ ಮನಸ್ಸಾಕ್ಷಿಗಿಂತ ದೇವರೇ ದೊಡ್ಡವನು. ಆತನಿಗೆ ಎಲ್ಲವೂ ತಿಳಿದಿದೆ.


ನಾವು ಮರಣವನ್ನು (ಪಾಪಗಳನ್ನು) ತೊರೆದು ಜೀವಕ್ಕೆ ಬಂದಿದ್ದೇವೆ ಎಂಬುದು ನಮಗೆ ಗೊತ್ತಿದೆ. ಕ್ರಿಸ್ತನಲ್ಲಿ ನಮ್ಮ ಸಹೋದರ ಸಹೋದರಿಯರನ್ನು ನಾವು ಪ್ರೀತಿಸುತ್ತಿರುವುದರಿಂದಲೇ ಇದನ್ನು ತಿಳಿದುಕೊಂಡಿದ್ದೇನೆ. ಪ್ರೀತಿಸದಿರುವ ವ್ಯಕ್ತಿಯು ಇನ್ನೂ ಮರಣದಲ್ಲಿದ್ದಾನೆ.


ಅಬ್ರಹಾಮನು ಶಾಶ್ವತವಾದ ಅಡಿಪಾಯಗಳುಳ್ಳ ನಗರಕ್ಕಾಗಿ ಕಾದಿದ್ದನು. ದೇವರೇ ಸಂಕಲ್ಪಿಸಿ, ನಿರ್ಮಿಸಿದ ನಗರಕ್ಕಾಗಿ ಅವನು ಕಾದಿದ್ದನು.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ.


ಆದ್ದರಿಂದ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುವಾಗ ನನ್ನ ಶತ್ರುಗಳನ್ನು ಸೋಲಿಸು. ನೀನು ಮಾಡಬಲ್ಲೆ ಎಂದು ನನಗೆ ಗೊತ್ತಿದೆ; ನೀನೇ ದೇವರು!


ದೇವರೆ, ನನ್ನನ್ನು ಎತ್ತಿಕೊಂಡು ಹೋಗಲು ನೀನು ಬಿರುಗಾಳಿಗೆ ಅವಕಾಶಕೊಟ್ಟೆ; ನೀನು ನನ್ನನ್ನು ಎತ್ತಿ ಬಿರುಗಾಳಿಗೆ ಎಸೆದುಬಿಟ್ಟೆ.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ನನ್ನ ಮನೆಯು ಅಂದರೆ ನನ್ನ ಕುರುಬನ ಗುಡಾರವು ಕೀಳಲ್ಪಟ್ಟು ನನ್ನಿಂದ ತೆಗೆಯಲ್ಪಡುತ್ತಿದೆ. ಒಬ್ಬನು ಮಗ್ಗದಲ್ಲಿ ಬಟ್ಟೆಯನ್ನು ಸುತ್ತಿ ಕತ್ತರಿಸಿಬಿಡುವಂತೆ ನಾನು ಕತ್ತರಿಸಲ್ಪಟ್ಟಿದ್ದೇನೆ. ನನ್ನ ಆಯುಷ್ಯವನ್ನು ಚಿಕ್ಕ ವಯಸ್ಸಿನಲ್ಲಿಯೇ ಮುಗಿಸಿಬಿಟ್ಟಿರುವೆ.


“ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು