Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:14 - ಪರಿಶುದ್ದ ಬೈಬಲ್‌

14 ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕ್ರಿಸ್ತಾಚ್ಯಾ ಪ್ರೆಮಾನ್ ಅಮ್ಕಾ ಯಾಂಗ್ ಮಾರುನ್ ಧರಲ್ಲೆ ಹಾಯ್. ಸಗ್ಳ್ಯಾ ಲೊಕಾಂಚ್ಯಾಸಾಟಿ ಎಕ್ಲೊ ಮರ್ಲೊ ಮನುನ್ ಹೊಲ್ಯಾರ್, ಸಗ್ಳೆ ಜಾನಾ ಮರ್ಲ್ಯಾತ್ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:14
43 ತಿಳಿವುಗಳ ಹೋಲಿಕೆ  

ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.


ಆದರೆ ದೇವರ ಉಚಿತ ಕೊಡುಗೆಯು ಆದಾಮನ ಪಾಪದಂತಿಲ್ಲ. ಆ ಒಬ್ಬನು ಮಾಡಿದ ಪಾಪದ ದೆಸೆಯಿಂದಾಗಿ ಅನೇಕ ಜನರು ಸತ್ತರು. ಆದರೆ ಜನರು ದೇವರಿಂದ ಪಡೆದುಕೊಂಡ ಕೃಪೆಯು ಅದಕ್ಕಿಂತ ಬಹು ದೊಡ್ಡದಾಗಿದೆ. ಯೇಸು ಕ್ರಿಸ್ತನೆಂಬ ಒಬ್ಬ ಪುರುಷನ ಕೃಪೆಯ ಮೂಲಕ ದೇವರು ಉಚಿತವಾಗಿ ಕೊಡುವ “ಜೀವ”ವನ್ನು ಅನೇಕ ಜನರು ಹೊಂದಿಕೊಂಡರು.


ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.


ಇದರರ್ಥವೇನೆಂದರೆ: ಆ ಸೇವೆಯು (ಧರ್ಮಶಾಸ್ತ್ರ) ಜನರನ್ನು ಅಪರಾಧಿಗಳೆಂದು ತೀರ್ಪು ನೀಡಿತು, ಆದರೆ ಅದು ಮಹಿಮೆಯನ್ನು ಹೊಂದಿತ್ತು. ಹೀಗಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಉಂಟುಮಾಡುವುದು ಎಷ್ಟೋ ನಿಶ್ಚಯವಾಗಿದೆ.


ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ಆದರೆ ವಿಧವೆಯಾದವಳು ತನ್ನ ಇಚ್ಛೆಪೂರೈಕೆಗಾಗಿ ತನ್ನ ಜೀವಿತವನ್ನು ಬಳಸಿಕೊಳ್ಳುವುದಾದರೆ ಅವಳು ಬದುಕಿದ್ದರೂ ಸತ್ತಂತೆಯೇ.


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ಯೇಸುವು ಜನರೆಲ್ಲರ ಪಾಪಗಳಿಗೆ ತನ್ನನ್ನೇ ಉಚಿತವಾಗಿ ಒಪ್ಪಿಸಿಕೊಟ್ಟನು. ಜನರೆಲ್ಲರೂ ರಕ್ಷಣೆ ಹೊಂದಬೇಕೆಂಬ ದೇವರ ಅಪೇಕ್ಷೆಗೆ ಯೇಸುವು ತಕ್ಕಕಾಲದಲ್ಲಿ ಸಾಕ್ಷಿನೀಡಿದನು.


ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.


ಯೇಸು ಆಕೆಗೆ, “ನಾನೇ ಪುನರುತ್ಥಾನ. ನಾನೇ ಜೀವ. ನನ್ನನ್ನು ನಂಬುವವನು ತಾನು ಸತ್ತನಂತರವೂ ಮತ್ತೆ ಜೀವವನ್ನು ಹೊಂದುವನು.


ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು.


ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ಆದರೆ ಈ ಲೋಕವು ಕೆಡುಕನ ವಶದಲ್ಲಿದೆ.


ಮರಣವನ್ನು ವಿಧಿಸುವ ಸೇವೆಯು (ಧರ್ಮಶಾಸ್ತ್ರ) ಕಲ್ಲಿನ ಹಲಗೆಗಳ ಮೇಲೆ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ಅದು ದೇವರ ಮಹಿಮೆಯೊಂದಿಗೆ ಬಂದಿತು. ಮೋಶೆಯ ಮುಖವು ಪ್ರಕಾಶಮಾನವಾಗಿ ಹೊಳೆಯುತ್ತಿದ್ದುದರಿಂದ ಇಸ್ರೇಲರು ಅವನ ಮುಖವನ್ನು ನೋಡಲಾರದೆ ಹೋದರು. ಆ ಬಳಿಕ ಆ ಮಹಿಮೆಯು ಕುಂದಿಹೋಯಿತು.


ಅಪರಾಧಗಳನ್ನು ಮಾಡುವ ಜನರಿಗೆ ದೇವರು ತೀರ್ಪು ಮಾಡುತ್ತಾನೆ. ಆತನ ತೀರ್ಪು ನ್ಯಾಯವಾದುದೆಂದು ನಮಗೆ ಗೊತ್ತಿದೆ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು.


ಯಾಕೆಂದರೆ ನನ್ನಲ್ಲಿ ಹೇಳಲು ಬೇಕಾದಷ್ಟಿದೆ. ನನ್ನ ಅಂತರಾತ್ಮವು ಮಾತಾಡಲು ನನ್ನನ್ನು ಒತ್ತಾಯಿಸುತ್ತಿದೆ.


ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.


ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು.


ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.


ನಿಮ್ಮ ಹಳೆಯ ಸ್ವಭಾವ ಸತ್ತುಹೋಗಿದೆ, ನಿಮ್ಮ ಹೊಸ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿದೆ.


ಆಗ ಆ ಮೂವರು ಪರಾಕ್ರಮಿಗಳು ಫಿಲಿಷ್ಟಿಯರ ಸೈನ್ಯದೊಂದಿಗೆ ಹೋರಾಡುತ್ತಾ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿದ್ದ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಯೆಹೋವನಿಗೆ ಸಮರ್ಪಿಸಿ ನೆಲದ ಮೇಲೆ ಹೊಯಿದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು