2 ಕೊರಿಂಥದವರಿಗೆ 5:19 - ಪರಿಶುದ್ದ ಬೈಬಲ್19 ಅಂದರೆ, ದೇವರು ಕ್ರಿಸ್ತನಲ್ಲಿ ಇಡೀ ಜಗತ್ತನ್ನೇ ತನ್ನೊಂದಿಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನು. ದೇವರು ಕ್ರಿಸ್ತನಲ್ಲಿ ಜನರ ಅಪರಾಧಗಳನ್ನು ಪರಿಗಣಿಸುವುದಿಲ್ಲ. ಈ ಸಮಾಧಾನದ ಸಂದೇಶವನ್ನು ಜನರಿಗೆ ತಿಳಿಸುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೇಗೆಂದರೆ, ದೇವರು ಮನುಷ್ಯರ ಪಾಪಗಳನ್ನು ಅವರಿಗೆ ವಿರೋಧವಾಗಿ ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಂದಿಗೆ ಸಮಾಧಾನಪಡಿಸುತ್ತಿದ್ದಾರೆ. ಈ ಸಮಾಧಾನದ ಸಂದೇಶವನ್ನೇ ದೇವರು ನಮಗೊಪ್ಪಿಸಿ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಕ್ರಿಸ್ತಾ ವೈನಾ ಸಗ್ಳೊ ಜಗ್ ದೆವಾನ್ ಅಪ್ನಾಕ್ಡೆ ರಾಜಿ ಹೊಯ್ ಸರ್ಕೊ ಕರ್ಲ್ಯಾನಾಯ್. ಮಾನ್ಸಾಂಚಿ ಪಾಪಾ ತೆಂಚ್ಯಾ ವಿರೊದ್ ಲೆಕ್ಕಾತ್ ಧರಿನಸ್ತಾನಾ, ಅಪ್ನಾಕ್ಡೆ ಎಕ್ ಕರ್ಲಾ ಮನ್ತಲಿ ಬರಿ ಖಬರ್ ಪರ್ಗಟ್ ಕರ್ತಲಿ ಜವಾಬ್ದಾರಿ ತೆನಿ ಅಮ್ಚ್ಯಾ ತಾಬೆತ್ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.