Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:4 - ಪರಿಶುದ್ದ ಬೈಬಲ್‌

4 ಈ ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ಈ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ. ನಶ್ವರವಾದುದು ನುಂಗಿಹೋಗಿ ಅಮರವಾದುದು ಉಳಿಯಬೇಕೆಂದೇ ಈ ಗು಼ಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಲು ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಗುಡಾರದಲ್ಲಿರುವವರಾದ ನಾವು ಭಾರ ಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿ ಹೋಗಬೇಕೆಂದು ನಮ್ಮ ಇಷ್ಟವಲ್ಲ; ಮರ್ತ್ಯವಾದದ್ದು ನುಂಗಿಹೋಗಿ ಜೀವವೊಂದೇ ಉಳಿಯುವಂತೆ ಈ ಗುಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಬೇಕೆಂಬದೇ ನಮ್ಮ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ಗುಡಾರವೆಂಬ ಹಳೆಯ ಶರೀರವು ನಮ್ಮಿಂದ ಕಳಚಿ ಹೋಗಬೇಕೆಂಬುದು ನಮ್ಮ ಇಷ್ಟವಲ್ಲ. ಆದರೆ ಪರಲೋಕದ ನಿವಾಸವೆಂಬ ನೂತನ ಶರೀರವನ್ನು ನಾವು ಧರಿಸಿಕೊಳ್ಳಲು ಬಯಸುತ್ತೇವೆ. ಏಕೆಂದರೆ ನಶ್ವರವಾದ ಈ ನಮ್ಮ ದೇಹವು ಅಮರತ್ವವನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹ್ಯಾ ಜಗಾಚ್ಯಾ ಬಿರಾಡಾತ್ ರ್‍ಹಾತಾನಾ, ಅಮಿ ಉಸ್ಕಾರ್ತಾವ್ ಅನಿ ಚಿಂತೆನ್ ಭರುನ್ ರ್‍ಹಾತಾಂವ್. ಜಾಲ್ಯಾರ್ಬಿ ಅಮ್ಕಾ ಆಮ್ಚೆ ಆಂಗ್ ನಾಗ್ಡೆ ಕರಲ್ಲೆ ಬಗುಕ್ ನಕ್ಕೊ; ಅಮ್ಚ್ಯಾ ವರ್‍ತಿ ನ್ಹವೆ ನೆಸಾಪ್ ನೆಸುಕ್ ಮಟ್ಲ್ಯಾರ್ ಸರ್ಗಾಚೆ ನೆಸಾಪ್, ತೆ ನಾಸ್ ಹೊತಲೆ ಬದ್ಲುನ್ ಶಾಶ್ವತ್ ಜಿವನ್ ಹೊವ್ನ್ ಬದಲ್ತಾ, ತೆ ನೆಸುಚೆ ಮನ್ತಲಿಚ್ ಅಮ್ಚಿ ಆಶಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:4
8 ತಿಳಿವುಗಳ ಹೋಲಿಕೆ  

ಆದರೆ ಈಗ ನಾವು ಈ ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ನಾನು ಈ ಲೋಕದಲ್ಲಿ ಇನ್ನೂ ಜೀವದಿಂದಿರುವಾಗಲೇ ಇವುಗಳನ್ನು ನಿಮ್ಮ ನೆನಪಿಗೆ ತರುವುದು ಯೋಗ್ಯವಾದದ್ದೆಂಬುದು ನನ್ನ ಆಲೋಚನೆ.


ನನ್ನ ಮನೆಯು ಅಂದರೆ ನನ್ನ ಕುರುಬನ ಗುಡಾರವು ಕೀಳಲ್ಪಟ್ಟು ನನ್ನಿಂದ ತೆಗೆಯಲ್ಪಡುತ್ತಿದೆ. ಒಬ್ಬನು ಮಗ್ಗದಲ್ಲಿ ಬಟ್ಟೆಯನ್ನು ಸುತ್ತಿ ಕತ್ತರಿಸಿಬಿಡುವಂತೆ ನಾನು ಕತ್ತರಿಸಲ್ಪಟ್ಟಿದ್ದೇನೆ. ನನ್ನ ಆಯುಷ್ಯವನ್ನು ಚಿಕ್ಕ ವಯಸ್ಸಿನಲ್ಲಿಯೇ ಮುಗಿಸಿಬಿಟ್ಟಿರುವೆ.


ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.


ಆದರೆ ಕೇಳಿರಿ, ನಾನು ನಿಮಗೆ ಈ ರಹಸ್ಯವೊಂದನ್ನು ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಆದರೆ ನಾವೆಲ್ಲರೂ ಮಾರ್ಪಾಟಾಗುವೆವು.


ನಾವು ಅದನ್ನು ಧರಿಸಿಕೊಂಡಾಗ ಬೆತ್ತಲೆಯಾಗಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು