Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:10 - ಪರಿಶುದ್ದ ಬೈಬಲ್‌

10 ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುಃಖ ಪಡುವವರಾಗಿದ್ದರೂ ಹರ್ಷಿಸುತ್ತಿದ್ದೆವು, ಬಡವರಾಗಿದ್ದಾಗಲೂ ಅನೇಕರನ್ನು ಐಶ್ವರ್ಯವಂತರನ್ನಾಗಿ ಮಾಡಿದೆವು, ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮಿ ದುಕ್ಕಾತ್ ಹಾಂವ್ ಜಾಲ್ಯಾರ್ ಬಿ ಸದ್ದಿಚ್ ಖುಶಿನ್ ಹಾಂವ್, ಗರಿಬ್ ರ್‍ಹಾಲ್ಯಾರ್‍ಬಿ ಕವ್ಡ್ಯಾಕಿ ಜಾನಾಕ್ನಿ ಅಮಿ ಸಾವ್ಕಾರ್ ಕರ್ತಾಂವ್. ಕಾಯ್ಬಿ ನಸಲ್ಲೆ ಹೊಲ್ಯಾರ್ಬಿ ಅಮ್ಚ್ಯಾಕ್ಡೆ ಸಗ್ಳೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:10
43 ತಿಳಿವುಗಳ ಹೋಲಿಕೆ  

ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.


“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.


ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.


ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ಯೆಹೂದ್ಯರ ಅಪರಾಧವು ಜಗತ್ತಿಗೆ ಅಧಿಕವಾದ ಆಶೀರ್ವಾದಗಳನ್ನೂ ಅವರ ಅಪಜಯವು ಯೆಹೂದ್ಯರಲ್ಲದ ಜನರಿಗೆ ಅಧಿಕವಾದ ಆಶೀರ್ವಾದಗಳನ್ನೂ ತರಲು ಕಾರಣವಾದರೆ, ದೇವರ ಇಚ್ಛೆಗನುಸಾರವಾಗಿ ಯೆಹೂದ್ಯರೆಲ್ಲರು ಪರಿವರ್ತನೆ ಹೊಂದಿದಾಗ ಜಗತ್ತು ಮತ್ತಷ್ಟು ಅಗಾಧವಾದ ಆಶೀರ್ವಾದಗಳನ್ನು ಹೊಂದುವುದು ನಿಶ್ಚಯವಲ್ಲವೇ?


ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ.


ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.


ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.


ನಾನು ಮೊದಲೊಮ್ಮೆ ನಿಮಗೆ ಬರೆದಾಗ, ನನ್ನ ಹೃದಯವು ಬಹಳ ಗಲಿಬಿಲಿಗೊಂಡಿತ್ತು ಮತ್ತು ದುಃಖಗೊಂಡಿತ್ತು. ನಾನು ಕಣ್ಣೀರಿಡುತ್ತಾ ನಿಮಗೆ ಬರೆದದ್ದು ನಿಮ್ಮನ್ನು ದುಃಖಗೊಳಿಸುವುದಕ್ಕಲ್ಲ, ನಿಮ್ಮನ್ನು ಎಷ್ಟು ಪ್ರೀತಿಸುತ್ತೇನೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದಷ್ಟೆ.


ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.


ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


ಹಸಿವೆಗೊಂಡಿರುವ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಅಳುತ್ತಿರುವ ನೀವು ಧನ್ಯರು; ಆನಂದದಿಂದ ನೀವು ನಗುವಿರಿ.


ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.


ಆದರೆ ಪೇತ್ರನು, “ನನ್ನಲ್ಲಿ ಬೆಳ್ಳಿಬಂಗಾರಗಳಿಲ್ಲ, ಆದರೆ ನನ್ನಲ್ಲಿರುವುದನ್ನು ನಿನಗೆ ಕೊಡಬಲ್ಲೆನು. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದುನಡೆ!” ಎಂದು ಹೇಳಿ,


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ನೀವು ನಿಮ್ಮ ಆತ್ಮಗಳಲ್ಲಿ ಬಲವಾಗಿರಲು ಅಗತ್ಯವಾದ ಶಕ್ತಿಯನ್ನು ತನ್ನ ಮಹಿಮಾತಿಶಯದ ಪ್ರಕಾರ ಕೊಡಬೇಕೆಂದು ತಂದೆಯನ್ನು ಕೇಳಿಕೊಳ್ಳುತ್ತೇನೆ. ಆತನು ತನ್ನ ಆತ್ಮನ ಮೂಲಕವಾಗಿ ನಿಮಗೆ ಆ ಶಕ್ತಿಯನ್ನು ಕೊಡುತ್ತಾನೆ.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ಇವುಗಳೆಲ್ಲ ನಿಮಗೋಸ್ಕರವಾಗಿಯೇ. ಹೀಗೆ ದೇವರ ಕೃಪೆಯು ಹೆಚ್ಚುಹೆಚ್ಚು ಜನರಿಗೆ ಕೊಡಲ್ಪಡುವುದು. ಇದರಿಂದಾಗಿ, ಹೆಚ್ಚುಹೆಚ್ಚು ಜನರು ದೇವರ ಮಹಿಮೆಗಾಗಿ ಕೃತಜ್ಞತಾಸುತ್ತಿ ಸಲ್ಲಿಸುವರು.


ಯೇಸುವಿನಲ್ಲಿ ಸಕಲ ಆಶೀರ್ವಾದಗಳನ್ನು ಹೊಂದಿರುವ ನೀವು ವಾಕ್ಚತುರರೂ ಜ್ಞಾನಸಂಪನ್ನರೂ ಆಗಿದ್ದೀರಿ.


ಯೆಹೂದ್ಯರ ವಿಷಯದಲ್ಲಿ ನನಗೆ ಅತೀವ ದುಃಖವಿದೆ; ನಿರಂತರ ಮನೋವೇದನೆಯಿದೆ.


ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.


ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.


ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.


ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲೇನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು