Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:17 - ಪರಿಶುದ್ದ ಬೈಬಲ್‌

17 “ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆ ಹೊವ್ನ್ ಧನಿ ಮನ್ತಾ, “ತೆಚೆಸಾಟ್ನಿ ತೆಂಚ್ಯಾ ಮದ್ನಾ ತುಮಿ ಭಾಯ್ರ್ ಯೆವಾ, ತೆಂಚೆಕ್ನಾ ತುಮ್ಕಾಚ್ ಎಗ್ಳೆ ಕರಾ ಮನ್ತಾ ಸರ್ವೆಸ್ವರ್, ಜೆ ಕಾಮ್ ನಿತಳ್ ನಾ ತೆಕಾ ಹಾತ್ ಲಾವುನಕಾಶಿ, ತನ್ನಾ ಮಿಯಾ ತುಮ್ಕಾ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:17
16 ತಿಳಿವುಗಳ ಹೋಲಿಕೆ  

ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.”


ಮೋಶೆಯು ಜನರನ್ನು ಎಚ್ಚರಿಸಿ, “ಈ ಕೆಟ್ಟ ಜನರ ಗುಡಾರಗಳಿಂದ ಹೊರಟುಹೋಗಿರಿ. ಇವರ ಸ್ವತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು. ಇಲ್ಲವಾದರೆ ಅವರ ಪಾಪಗಳ ದೆಸೆಯಿಂದ ನೀವೂ ನಾಶವಾಗುವಿರಿ” ಎಂದು ಹೇಳಿದನು.


ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.


ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.


ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು.


“ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.


“ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು.


ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿಕೊಂಡನು. ಆದ್ದರಿಂದ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿಕೊಳ್ಳಬೇಕು. ಇದು ದೇವರಿಗೆ ಮಹಿಮೆಯನ್ನು ಉಂಟು ಮಾಡುತ್ತದೆ.


ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.


ಗೊರಸು ಸೀಳಿರುವ ಮತ್ತು ಮೆಲುಕು ಹಾಕುವ ಪ್ರಾಣಿಯನ್ನು ನೀವು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು