Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:3 - ಪರಿಶುದ್ದ ಬೈಬಲ್‌

3 ನಮ್ಮ ಸೇವೆಯು ನಿಂದೆಗೆ ಒಳಗಾಗಬಾರದೆಂದು ನಾವು ಯಾರಿಗೂ ತೊಂದರೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3-4 ನಿಂದೆಗೆ ಅವಕಾಶಕೊಡದೆ ಎಲ್ಲಾ ಸಂಗತಿಗಳಲ್ಲಿ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ಸೇವೆಯು ಅಪವಾದಕ್ಕೆ ಗುರಿಯಾಗದಂತೆ ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮ್ಚ್ಯಾ ಜವಾಬ್ದಾರಿಪಾನಾಕ್‍ ಕೊನ್‍ಬಿ ಅಪ್ವಾದ್ ಘಾಲುಚೆ ನ್ಹಯ್ ಮನುನ್, ಅಮಿ ಕೊನಾಚ್ಯಾಬಿ ವಾಟೆರ್ ಅಡ್ಕಳ್ ಘಾಲುಕ್ ಜಾಯ್ನಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:3
11 ತಿಳಿವುಗಳ ಹೋಲಿಕೆ  

ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.


ತಮಗೆ ಅಗತ್ಯವಾದುವುಗಳನ್ನು ನಿಮ್ಮಿಂದ ಪಡೆದುಕೊಳ್ಳಲು ಇತರರಿಗೆ ಹಕ್ಕಿದೆ. ಆದ್ದರಿಂದ ಖಂಡಿತವಾಗಿ ನಮಗೂ ಈ ಹಕ್ಕಿದೆ. ಆದರೆ ನಾವು ಈ ಹಕ್ಕನ್ನು ಉಪಯೋಗಿಸುವುದಿಲ್ಲ. ಕ್ರಿಸ್ತನ ಸುವಾರ್ತೆಗೆ ವಿಧೇಯರಾಗಲು ಯಾರಿಗೂ ತೊಂದರೆ ಆಗಕೂಡದೆಂದು ನಾವು ಪ್ರತಿಯೊಂದನ್ನು ಸಹಿಸಿಕೊಳ್ಳುತ್ತೇವೆ.


ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.


ಬಲಹೀನರಾದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಬಲಹೀನನಂತಾದೆನು. ಯಾವ ರೀತಿಯಲ್ಲಾದರೂ ರಕ್ಷಣಾ ಮಾರ್ಗಕ್ಕೆ ನಡೆಸಬೇಕೆಂದು ಯಾರ್ಯಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾದೆನು.


ಹೇರಳವಾದ ಈ ಸಹಾಯಧನವನ್ನು ನಾವು ನೋಡಿಕೊಳ್ಳುವ ಬಗ್ಗೆ ಟೀಕಿಸಲು ಯಾರಿಗೂ ಅವಕಾಶ ಕೊಡಬಾರದೆಂದು ಎಚ್ಚರಿಕೆಯಿಂದಿದ್ದೇವೆ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


“ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.


ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದುಹೋಗುವುದು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು