Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:5 - ಪರಿಶುದ್ದ ಬೈಬಲ್‌

5 ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಪೆಟ್ಟು ತಿಂದಿದ್ದೇವೆ, ಸೆರೆವಾಸವಾಗಿದ್ದೇವೆ, ಕಲಹಗಳನ್ನು ಅನುಭವಿಸಿದ್ದೇವೆ, ಶ್ರಮೆಪಟ್ಟು ದುಡಿದಿದ್ದೇವೆ, ರಾತ್ರಿಯಲ್ಲಿ ನಿದ್ರೆಗೆಟ್ಟಿದ್ದೇವೆ, ಊಟವಿಲ್ಲದೆ ಹಸಿದಿದ್ದೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ಮಾರ್ ಖಾತಾನಾ, ಬಂದಿಖಾನ್ಯಾತ್ ಪಡಲ್ಲ್ಯಾ ತನ್ನಾ, ಡಂಗೊ ಉಟಲ್ಲ್ಯಾ ತನ್ನಾ, ಅಮಿ ನಿಜ್ ಅನಿ ಜೆವಾನ್ ನಸ್ತಾನಾ ಘಟ್ ಕಾಮ್ ಕರ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:5
48 ತಿಳಿವುಗಳ ಹೋಲಿಕೆ  

ಕಷ್ಟಕರವಾದ ಮತ್ತು ಅಪಾಯಕರವಾದ ಕೆಲಸಗಳನ್ನು ಮಾಡಿದ್ದೇನೆ. ಕೆಲವು ಸಲ ನಿದ್ರಿಸಲೂ ಇಲ್ಲ. ಹಸಿವೆ ಬಾಯಾರಿಕೆಗಳಿಂದ ಕಷ್ಟಪಟ್ಟಿದ್ದೇನೆ. ಅನೇಕಸಲ ನನಗೆ ಊಟ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರೂ ಬಟ್ಟೆಯಿರಲಿಲ್ಲ.


ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಈ ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ನಮ್ಮ ಸಹೋದರನಾದ ತಿಮೊಥೆಯನಿಗೆ ಸೆರೆಮನೆಯಿಂದ ಬಿಡುಗಡೆ ಆಯಿತೆಂಬುದು ನಿಮಗೆ ತಿಳಿದಿರಲಿ. ಅವನು ನನ್ನ ಬಳಿಗೆ ಬೇಗನೆ ಬಂದರೆ, ನಾವಿಬ್ಬರೂ ನಿಮ್ಮನ್ನು ನೋಡಲು ಬರುತ್ತೇವೆ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.


ಆದರೆ ನೀನು ಎಲ್ಲಾ ಕಾಲದಲ್ಲಿಯೂ ಸ್ವಸ್ಥಚಿತ್ತನಾಗಿರು. ತೊಂದರೆಗಳು ಬಂದಾಗ ಸಹಿಸಿಕೊ. ಸುವಾರ್ತೆಯನ್ನು ಪ್ರಚಾರಮಾಡು. ದೇವರ ಸೇವಕನಿಗೆ ಯೋಗ್ಯವಾದ ಎಲ್ಲಾ ಕಾರ್ಯಗಳನ್ನು ಮಾಡುತ್ತಿರು.


ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.


ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.


ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.


ನಾನು ಏಕೆ ಸೆರೆಮನೆಯಲ್ಲಿದ್ದೇನೆಂಬುದು ಸ್ಪಷ್ಟವಾಗಿಯೇ ಇದೆ. ನಾನು ಕ್ರಿಸ್ತ ವಿಶ್ವಾಸಿಯಾಗಿರುವುದರಿಂದ ಸೆರೆಮನೆಯಲ್ಲಿದ್ದೇನೆ. ಇಲ್ಲಿಯ ಕಾವಲುಗಾರರಿಗೂ ಅರಮನೆಯ ಇತರ ಜನರೆಲ್ಲರಿಗೂ ಇದು ಗೊತ್ತಿದೆ.


ನಾನು ಕ್ರಿಸ್ತಯೇಸುವಿನ ಸೆರೆಯಾಳು. ಯೆಹೂದ್ಯರಲ್ಲದ ನಿಮಗೋಸ್ಕರ ನಾನು ಸೆರೆಯಾಳಾಗಿದ್ದೇನೆ.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.


ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ.


ಪೌಲನು ತನ್ನ ಬಾಡಿಗೆ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ಸಂದರ್ಶಿಸಲು ಬಂದ ಜನರೆಲ್ಲರನ್ನು ಆದರದಿಂದ ಬರಮಾಡಿಕೊಂಡು,


ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.


ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.


ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.


ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)


ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.


ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.


ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.


ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.


ಅವರು ಅಪೊಸ್ತಲರನ್ನು ಬಂಧಿಸಿ ರಾಜ್ಯಮಟ್ಟದ ಸೆರೆಮನೆಗೆ ಹಾಕಿದರು.


ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿಕೊಂಡು ಬರಲು ಅವನು ಸೈನಿಕರನ್ನು ಕಳುಹಿಸಿಕೊಟ್ಟನು.


ಈ ಸಮಯಕ್ಕೆ ಮೊದಲೇ ಹೆರೋದ್ಯಳ ನಿಮಿತ್ತವಾಗಿ ಹೆರೋದನು ಯೋಹಾನನನ್ನು ಸರಪಣಿಗಳಿಂದ ಬಂಧಿಸಿ, ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಹೆಂಡತಿ.


ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.


“ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.


ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.


ಎರಡನೇ ಬಾರಿ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು. ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.


ಆದರೆ ನಾವು ಮಾಡಿದ ದುಷ್ಟತನಕ್ಕಾಗಿಯೇ ಆತನು ಬಾಧಿತನಾದನು. ನಮ್ಮ ಅಪರಾಧಗಳ ನಿಮಿತ್ತ ಆತನು ಜಜ್ಜಲ್ಪಟ್ಟನು. ನಾವು ಹೊಂದಬೇಕಾಗಿದ್ದ ಶಿಕ್ಷೆಯನ್ನು ಆತನೇ ಅನುಭವಿಸಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.


ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.


ಒಬ್ಬನಿಗೆ ನಲವತ್ತು ಕೊರಡೆ ಏಟುಗಳಿಗಿಂತ ಹೆಚ್ಚಾಗಿ ಹೊಡೆಯಬಾರದು. ಅದಕ್ಕಿಂತ ಹೆಚ್ಚು ಹೊಡೆದರೆ ಅವನ ಪ್ರಾಣವು ನಿಮ್ಮ ದೃಷ್ಟಿಗೆ ಅಮೂಲ್ಯವಾಗಿಲ್ಲವೆಂದು ತಿಳಿದುಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು